CrimeNEWSನಮ್ಮಜಿಲ್ಲೆ

ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಬರ್ಬರ ಹತ್ಯೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಛಲವಾದಿಪಾಳ್ಯದ ಫ್ಲವರ್ ಗಾರ್ಡನ್ ನಲ್ಲಿ ನಡೆದಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಮನೆಯಲ್ಲಿದ್ದ ರೇಖಾ ಅವರನ್ನು ದುಷ್ಕರ್ಮಿಗಳು ಹೊರಬರುವಂತೆ ಕರೆದು ಮನೆ ಮುಂದೆಯೇ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ರಕ್ತದ ಮಡುವಲ್ಲಿ ಬಿದ್ದಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ರೇಖಾ ಕದಿರೇಶ್ ಮೃತಪಟ್ಟಿದ್ದಾರೆ.

ರೇಖಾ ಅವರ ಪತಿ ಕದಿರೇಶ್ ಅವರನ್ನು ಕೂಡ 2018ರ ಫೆಬ್ರವರಿ 6ರಂದು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಮಲ್ಲೇಶ್ವರಂ ಬಳಿಯ ದೇವಸ್ಥಾನದ ಬಳಿ ಕದಿರೇಶ್ ಮೇಲೆ ದಾಳಿ ನಡೆಸಿದ್ದ ಶೋಭನ್ ಗ್ಯಾಂಗ್ ಮಾರಕಾಸ್ತ್ರಗಳಿಂದ ಅವರನ್ನು ಕೊಚ್ಚಿ ಕೊಲೆಗೈದಿತ್ತು.

ಇದೀಗ ಅವರ ಪತ್ನಿ  ರೇಖಾ ಅವರನ್ನು ಕೂಡ ಹತ್ಯೆ ಮಾಡಲಾಗಿದ್ದು, ಇಬ್ಬರು ದುಷ್ಕರ್ಮಿಗಳು ಹತ್ಯೆಮಾಡಿ ಪರಾರಿಯಾಗಿದ್ದಾರೆ ಎಂದು ಸ್ಥಳೀಯರಿಂದ ತಿಳಿದು ಬಂದಿದೆ.

ಸ್ಥಳಕ್ಕೆ ಚಿಕ್ಕಪೇಟೆ ಎಸಿಪಿ, ಕಾಟನ್ ಪೇಟೆ ಪೊಲೀಸರು ಭೇಟಿ ನಿಡಿ ಪರಿಶೀಲಿಸಿದ್ದಾರೆ. ಸಹಚರರಿಂದಲೇ ಈ ಕೊಲನೆ ನಡೆದಿರುವ ಶಂಕೆ ವ್ಯಕ್ತಪಡಿಸಿರುವ ಪೊಲೀಸರು ಹತ್ಯೆಕೋರರ ಬಂಧನಕ್ಕೆ ಬಲೆ ಬೀಸಿದ್ದಾರೆ.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ