Breaking NewsNEWSನಮ್ಮಜಿಲ್ಲೆರಾಜಕೀಯ

ಅಧಿಕಾರಿಗಳ ವರ್ಗಾವಣೆ ಮಾಡೋದೇ ತಾಕತ್ತಾದರೆ, ಅಂತಹ ತಾಕತ್ತು ನನಗೆ ಬೇಡ: ಜಿಟಿಡಿಗೆ ಟಾಂಗ್‌ಕೊಟ್ಟ ಸಿಂಹ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು: ತಾಕತ್ತಿದ್ದರೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಿಸಿ ತೋರಿಸು  ಎಂದು ಸವಾಲು ಹಾಕಿದ ಮಾಜಿ ಸಚಿವ ಜಿ.ಟಿ. ದೇವೇಗೌಡ ಅವರಿಗೆ ಸಂಸದ ಪ್ರತಾಪ್‌ ಸಿಂಹ ಕೊಟ್ಟಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳನ್ನು ವರ್ಗಾವಣೆ ಮಾಡೋದೇ ತಾಕತ್ತಾದರೆ, ಅಂತಹ ತಾಕತ್ತು ನನಗೆ ಬೇಡ. ಒಬ್ಬ ಸಂಸದನಾಗಿ ನಾನು ನನ್ನ ಕೆಲಸದಲ್ಲಿ ತಾಕತ್ತು ತೋರಿಸಿದ್ದೇನೆ ಎಂದರು.

ಇನ್ನು ಮೈಸೂರಿಗೆ ನಾನು ಹೊರಗಿನವನು. ಆದರೂ ಮೊದಲ ಚುನಾವಣೆಯಲ್ಲಿ ಮೈಸೂರು- ಕೊಡಗಿನ ಜನ ಮೂವತ್ತು ಸಾವಿರ ಅಂತರದ ಮತಗಳಿಂದ ಗೆಲ್ಲಿಸಿದರು. ಈ ಮೂಲಕ ನನ್ನ ತಾಕತ್ತು ತೋರಿಸಿ ಒಳ್ಳೆಯ ಕೆಲಸ ಮಾಡಿದ್ದರಿಂದಾಗಿ, ಎರಡನೇ ಚುನಾವಣೆಯಲ್ಲಿ ಒಂದು ಲಕ್ಷದ ನಲವತ್ತು ಸಾವಿರ ಮತಗಳಿಂದ ಗೆಲ್ಲಿಸಿದ್ದಾರೆ. ಇದಕ್ಕಿಂತಲೂ ನಾನು ಯಾವ ತಾಕತ್ತು ತೋರಿಸಬೇಕು ಎಂದು ತಿರುಗೇಟು ನೀಡಿದರು.

ಡಿಸಿಯನ್ನೋ, ಇನ್ಯಾರೋ ಅಧಿಕಾರಿಯನ್ನ ವರ್ಗಾವಣೆ ಮಾಡಿಸೋದು ರಾಜಕಾರಣಿಗಳಿಗೆ ಕಾಮನ್.  ನನ್ನ ದೃಷ್ಟಿಯಲ್ಲಿ ಅದು ಅತ್ಯಂತ ಸಣ್ಣ ಕೆಲಸ. ಅಂತಹ ಸಣ್ಣ ಕೆಲಸವನ್ನು ನಾನು ಮಾಡೋದಿಲ್ಲ. ಸರ್ಕಾರ ಕೊಟ್ಟ ಅಧಿಕಾರಿಗಳ ಜತೆಗೆ ಕೆಲಸ ಮಾಡುತ್ತೇನೆ ಎಂದು ಜಿಟಿಡಿಗೆ ಟಾಂಗ್ ಕೊಟ್ಟರು.

ಚಾಮರಾಜನಗರ ಘಟನೆಯಿಂದ ಡಿಸಿಯನ್ನ ಕಟಕಟೆಗೆ ನಿಲ್ಲಿಸುತ್ತಿದ್ರು. ಆವಾಗೆಲ್ಲಾ ಇವ್ರು ಎಲ್ಲಿ ಹೋಗಿದ್ರು..?. ಎಂದು ಜಿಟಿಡಿ ವಿರುದ್ಧ ಹರಿಹಾಯ್ದರು.

ಇನ್ನು ಜಿಟಿಡಿ ಒಬ್ಬ ಮಾತಿನ ವ್ಯಕ್ತಿ ಮನಸ್ಸಿನಲ್ಲಿ ಏನನ್ನು ಇಟ್ಟುಕೊಳ್ಳೊಲ್ಲ ಆದರಿಂದ ಅವರ ಮಾತಿನ ಬಗ್ಗೆ ಅನ್ಯತ ಭಾವಿಸಬೇಡಿ. ಅವರು ತಂದೆ ಸಮಾನ ಅವರು ಬೈದರೆ ನನಗೆ ಆಶೀರ್ವಾದ ಎಂದು ಪರೋಕ್ಷವಾಗಿ ಗುಡುಗಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್