NEWSನಮ್ಮಜಿಲ್ಲೆಸಿನಿಪಥ

ಪಿರಿಯಾಪಟ್ಟಣ: ಅಭಿನಯ ಶಾರದೆ ಜಯಂತಿಗೆ ನುಡಿನಮನ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ಕನ್ನಡ ಚಿತ್ರರಂಗದ ಖ್ಯಾತ ನಟಿ, ಅಭಿನಯ ಶಾರದೆ ಜಯಂತಿಯವರಿಗೆ ಪಿರಿಯಾಪಟ್ಟಣ ತಾಲೂಕು ಗಾನ ಕೋಗಿಲೆ ವಾದ್ಯಗೋಷ್ಠಿ, ಲಘು ಸಂಗೀತ ಮತ್ತು ನೃತ್ಯ ಕಲಾವಿದರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಶ್ರದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಸಂಘದ ಅಧ್ಯಕ್ಷ ಪಿ.ವಿ.ವಿಶ್ವನಾಥ್ ಮಾತನಾಡಿ, ಕನ್ನಡ ಚಿತ್ರರಂಗದ ಅಭಿನಯ ಶಾರದೆ ತನ್ನ ಅಭಿನಯದ ಪಯಣವನ್ನು ನಿಲ್ಲಿಸಿರುವುದು ಕನ್ನಡ ಚಿತ್ರರಂಗಕ್ಕೆ ಹಾಗೂ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ ಎಂದರು.

ಜಯಂತಿಯವರು ಬಹುಭಾಷ ನಟಿಯಾಗಿದ್ದು ತಮ್ಮ ಅದ್ಭುತ ನಟನೆಯ ಮೂಲಕ ಅನೇಕ ಪಾತ್ರಕ್ಕೆ ಜೀವ ತುಂಬುತಿದ್ದ ಕಲಾವಿದೆ. ಆದ್ದರಿಂದಲೇ ಅವರಿಗೆ ರಾಷ್ಟ್ರಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳ ಜೊತೆಗೆ ಅಭಿನಯ ಶಾರದೆಯೆಂದು ಜನಮಾನಸದಲ್ಲಿ ಅಮರರಾಗಿದ್ದಾರೆ ಎಂದು ತಿಳಿಸಿದರು.

ಜೇನುಗೂಡು ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಕನ್ನಡ ಚಿತ್ರರಂಗದಲ್ಲಿ ಅಭಿನಯದ ಮೂಲಕ ಬಹಳಷ್ಟು ಪಾತ್ರಗಳಿಗೆ ಜೀವ ತುಂಬುತಿದ್ದ ನಟಿ. ಎಡಕಲ್ಲು ಗುಡ್ಡದ ಮೇಲೆ, ಮಸಣದ ಹೂಗಳಂತಹ ಸಿನಿಮಾಗಳಲ್ಲಿ ಇವರ ನಟನೆ ಅದ್ಭುತವಾಗಿದ್ದು ನಟನೆಯ ಮೂಲಕ ಜಯಂತಿಯವರು ಎಂದೆಂದಿಗೂ ಅಮರರಾಗಿದ್ದಾರೆ ಎಂದು ಹೇಳಿದರು.

ಕನ್ನಡ ಚಿತ್ರರಂಗದಲ್ಲಿ ಅಮ್ಮ ಎಂದೇ ಚಿರಪರಿಚಿತರಾದ ಜಯಂತಿಯವರು ಎಂತಹ ಪಾತ್ರಗಳಿದ್ದರೂ ಆ ಪಾತ್ರಕ್ಕೆ ಜೀವತುಂಬುತಿದ್ದವರು ಇವರ ಅಭಿನಯ ಉದಯೋನ್ಮುಖ ಕಲಾವಿದರಿಗೆ ಮಾದರಿಯಾಗಿವೆ ಎಂದರು.

ಸಂಘದ ಸಹ ಕಾರ್ಯದರ್ಶಿ ಅಂಬಾರಿ ಪರಮೇಶ್, ನಿರ್ದೇಶಕ ಸುಬ್ರಹ್ಮಣ್ಯ, ಸದಸ್ಯರಾದ ಶಿವಮೂರ್ತಿ ಹಾಗೂ ಚರಣ್ ಉಪಸ್ಥಿತರಿದ್ದರು.

ರಾವಂದೂರು: 158 ಲಕ್ಷ ರೂ. ವೆಚ್ಚದಲ್ಲಿ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಶಾಸಕರಿಂದ ಗುದ್ದಲಿಪೂಜೆ

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...