CrimeNEWSನಮ್ಮಜಿಲ್ಲೆನಮ್ಮರಾಜ್ಯ

ರಾಸಲೀಲೆ ಸಿಡಿ ಪ್ರಕರಣದ ಸಂತ್ರಸ್ತೆ ಪರ ವಕೀಲರಿಗೆ ಬಂತು ಕೊಲೆ ಬೆದರಿಕೆ ಕರೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮಾಜಿ ಸಚಿವ ರಮೇಶ್‌ ಜಾರಕಿಹೊಳಿಗೆ ಸಂಬಂಧಿಸಿದ್ದು ಎನ್ನಲಾದ ಸಿಡಿ ಪ್ರಕರಣದ ಸಂತ್ರಸ್ತ ಯುವತಿ ಪರ ವಕೀಲರಿಗೆ ಕೊಲೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ವಕಾಲತ್ತು ವಹಿಸಿರುವ ವಕೀಲ ಜಗದೀಶ್‌ ಅವರೆ ಹೇಳಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ನನಗೆ ಕೊಲೆ ಬೆದರಿಕೆ ಕರೆಗಳು ಬರುತ್ತಿದ್ದು, ಅವುಗಳಿಗೆ ನಾನು ಬಗ್ಗೋದಿಲ್ಲ ಎಂದು ಫೇಸ್‌ಬುಕ್ ಲೈವ್‌ಗೆ ಬಂದು ತಿಳಿಸಿದ್ದಾರೆ.

ನಾವು ಸಂತ್ರಸ್ತೆ ಪರವಾಗಿ ಕೆಲಸ ಮಾಡಿ ಆಕೆಗೆ ನ್ಯಾಯ ಕೊಡಿಸುವ ಪ್ರಯತ್ನ ಮಾಡುತ್ತಿದ್ದೇವೆ. ನನ್ನ ಸಹದ್ಯೋಗಿ ಮಂಜುನಾಥ್ ಅವರ ವಾಹನವನ್ನು ಕೆಲವರು ಹಿಂಬಾಲಿಸಿದ್ದಾರೆ. ನಮಗೆ ಇಷ್ಟೊಂದು ಬೆದರಿಕೆ ಇರುವಾಗ ಸಂತ್ರಸ್ತೆಯ ಸ್ಥಿತಿ ಹೇಗಿರಬಹುದು? ಈ ಪ್ರಕರಣದಲ್ಲಿ ನಾವು ನಾಶವಾದರೂ ಸಂತ್ರಸ್ತೆಗೆ ನ್ಯಾಯ ಕೊಡಿಸದೆ ಬಿಡುವುದಿಲ್ಲ ಎಂದಿದ್ದಾರೆ.

ರಮೇಶ್ ಜಾರಕಿಹೊಳಿ ತುಂಬಾ ಪ್ರಭಾವಿ ವ್ಯಕ್ತಿ. ಅವರ ಸಿಡಿ ಪ್ರಕರಣ ಕೈಗೆತ್ತಿಕೊಂಡ ನಂತರ ಹಲವಾರು ಪ್ರಶಂಸೆ ಹಾಗೂ ಬೆದರಿಕೆ ಕರೆಗಳು ಬರಲು ಪ್ರಾರಂಭವಾಗಿವೆ. ಮಂಗಳೂರು ಅಥವಾ ಚಿಕ್ಕಮಗಳೂರು ವ್ಯಾಪ್ತಿಯಿಂದ ಕರೆ ಮಾಡಿದ ಯುವಕನೊಬ್ಬ ನನ್ನ ತಲೆ ಕಡಿಯುವ ಬೆದರಿಕೆ ಒಡ್ಡಿದ್ದಾನೆ. ಈ ರೀತಿಯ ಬೆದರಿಕೆ ಕರೆಗಳಿಗೆ ಹೆದರುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.

ನಮಗೆ ಬರುತ್ತಿರುವ ಈ ಪ್ರಾಣ ಬೆದರಿಕೆಗಳನ್ನು ಸಂಬಾಳಿಸಿಕೊಳ್ಳುವಷ್ಟು ಸಾಮರ್ಥ್ಯ ಇದೆ. ಆದರೆ, ಸಂತ್ರಸ್ತೆ ನ್ಯಾಯಾಲಯ, ಪೊಲೀಸರ ಮುಂದೆ ಹಾಜರಾದರೆ ರಕ್ಷಣೆ ದೊರೆಯುವ ನಂಬಿಕೆ ಇಲ್ಲ. ಅಷ್ಟರಮಟ್ಟಿಗೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Leave a Reply

error: Content is protected !!
LATEST
ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ