NEWSನಮ್ಮಜಿಲ್ಲೆನಮ್ಮರಾಜ್ಯ

ರಾಜ್ಯಾದ್ಯಂತ ರಸ್ತೆಗಿಳಿಯದ ಸಾರಿಗೆ ಬಸ್‌ಗಳು: ಸಂಚಾರ ಸಂಪೂರ್ಣ ಅಸ್ತವ್ಯಸ್ತ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು:ಆರನೇ ವೇತನ ಆಯೋಗ ನಮಗೂ ಜಾರಿ ಮಾಡಿ ಎಂಬ ಪ್ರಮುಖ ಬೇಡಿಕೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ನಾಲ್ಕೂ ಸಾರಿಗೆ ನಿಗಮಗಳ ಸಾರಿಗೆ ನೌಕರರು ಮುಂಜಾನೆಯಿಂದ ಬಸ್‌ಗಳನ್ನು ಡಿಪೋಗಳಿಂದ ಹೊರತೆಗೆಯದೇ ಪ್ರತಿಭಟನೆ ಮಾಡುತ್ತಿದ್ದು, ಇದರಿಂದ ಸಂಚಾರದಲ್ಲಿ ವ್ಯತ್ಯಯವಾಗಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಬೆಂಗಳೂರಿನ ಕೆಂಪೇಗೌಡ ಬಸ್‌ ನಿಲ್ದಾಣದ ಬಸ್‌ಗಳಿಲ್ಲದೇ ಬಿಕೋ ಎನ್ನುತ್ತಿದೆ. ಮುಂಜಾನೆ 5 ಗಂಟೆಯಿಂದ ಕೆಲ ಖಾಸಗಿ ಬಸ್‌ಗಳು ಸಂಚಾರ ಆರಂಭಿಸಿವೆ. ಆದರೆ ಸಮರ್ಪಕ ಸೇವೆ ನೀಡಲು ಆಗುತ್ತಿಲ್ಲ ಎಂದು ಪ್ರಯಾಣಿಕರು ಹಿಡಿ ಶಾಪ ಹಾಕುತ್ತಿದ್ದಾರೆ.
ನೌಕರರು ಕರ್ತವ್ಯಕ್ಕೆ ಹಾಜರಾಗದಿರುವುದರಿಂದ ಬಸ್‌ಗಳು ಡಿಪೋಗಳಲ್ಲೇ ಇವೆ. ನಾವು ಕೋಡಿಹಳ್ಳಿ ಚಂದ್ರಶೇಖರ್‌ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಗೇ ಸಂಪೂರ್ಣ ಬೆಂಬಲ ನೀಡಿದ್ದೇವೆ ಎಂದು 4 ಸಾರಿಗೆ ನಿಗಮಗಳ ನೌಕರರು ಹೇಳುತ್ತಿದ್ದು, ಅದರಂತೆ ಬಂಸ್‌ನಿಂದ ರಾಜ್ಯ ಸಾರಿಗೆ ಬಸ್‌ಗಳಿಲ್ಲದೆ ಬಿಕೋ ಎನ್ನುತ್ತಿದೆ.

ಬಿಎಂಟಿಸಿಯ ಬನಶಂಕರಿ ಟಿಟಿಎಂಸಿ ಬಸ್‌ ನಿಲ್ದಾಣದ, ಯಶವಂತಪುರ ಟಿಟಿಎಂಸಿ ಸೇರಿದಂತೆ ಬೆಂಗಳೂರಿನ ಯಾವುದೇ ಡಿಪೋಗಳಿಂದ ಬಸ್‌ಗಳು ಸಂಚಾರ ಆರಂಭಿಸಿಲ್ಲ. ಇದರಿಂದ ವಿವಿಧ ಊರುಗಳಿಗೆ ತೆರಳಲು ಮುಂಜಾನೆ 4ಗಂಟೆಗೇ ಬಂದಿರುವ ನೂರಾರು ಪ್ರಯಾಣಿಕರು ಪರದಾಡುವಂತಾಗಿದೆ.

ಜತೆಗೆ ಬೆಂಗಳೂರಿನ ಜೀವನಾಡಿಯಾಗಿರುವ ಬಿಎಂಟಿಸಿ ಬಸ್‌ಗಳಿಲ್ಲದೆ 20 ಲಕ್ಷ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ಇನ್ನು ರಾಜ್ಯಾದ್ಯಂತ 1 ಕೋಟಿಗೂ ಅಧಿಕ ಜನರು ಬಸ್‌ಗಳಿಲ್ಲದೆ ಪರದಾಡುವಂತಾಗಿದೆ.

ನೌಕರರು ಸಾರ್ವಜನಿಕರು ನಮ್ಮ ಹೋರಾಟವನ್ನು ಬೆಂಬಲಿಸಿ ನಿಮಗೆ ತೊಂದರೆಯಾಗುತ್ತಿರುವುದಕ್ಕೆ ಕ್ಷಮೆ ಕೇಳುತ್ತೇವೆ. ಆದರೆ ನಮ್ಮ ಸಮಸ್ಯೆಯನ್ನು ಪರಿಹರಿಸ ಬೇಕಾದ ಸರ್ಕಾರ ಮತ್ತು ಸಚಿವರಿಗೆ ನಿಮ್ಮ ಮತ್ತು ನಮ್ಮ ಕೂಗು ನೋವು ಕೇಳಿಸುತ್ತಿಲ್ಲ. ಈ ಕೂಗು ಅವರಿಗೆ ಮುಟ್ಟಬೇಕಾದರೆ ಈರೀತಿ ನಡೆದುಕೊಳ್ಳುವುದು ಅನಿವಾರ್ಯವಾಗಿದೆ ಎಂದು ಪ್ರಯಾಣಿಕ ದೇವರಲ್ಲಿ ಮನವಿ ಮಾಡುತ್ತೇವೆ ಎಂದು ಸಾರಿಗೆ ನೌಕರರು ಹೇಳಿದ್ದಾರೆ.

ಕೋಡಿಹಳ್ಳಿ ಚಂದ್ರಶೇಖರ್ ನೀಡಿರುವ ಸಂದೇಶದ ಅನ್ವಯ ಇಂದಿನಿಂದ ಸಾರಿಗೆಯ ನಾಲ್ಕೂ ನಿಗಮದ ಬಸ್‌ಗಳು ಕಾರ್ಯಾಚರಣೆ ಮಾಡುತ್ತಿಲ್ಲ. ನಮ್ಮ ಬೇಡಿಕೆ ಈಡೇರುವವರೆಗೂ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನ ಮಾಡಲಾಗಿದೆ ಎಂಬ ಸ್ಪಷ್ಟ ಸಂದೇಶವನ್ನು ನೌಕರರು ಸರ್ಕಾರಕ್ಕೆ ರವಾನಿಸಿದ್ದಾರೆ.

ಇತ್ತ ಸರ್ಕಾರ ಸಾರ್ವಜನಿಕರ ಪರದಾಟಕ್ಕೆ ಸ್ಪಂದಿಸುತ್ತಿಲ್ಲ. ಅಲ್ಲದೆ ಹಸುಗೂಸಿನೊಂದಿಗೆ ಬಸ್‌ ಇಲ್ಲದ ಕಾರಣ ಕೆಂಪೇಗೌಡ ನಿಲ್ದಾಣದಿಂದ ಬನಶಂಕರಿಗೆ ನಡೆದುಕೊಂಡು ಹೋಗುತ್ತಿರುವ ದೃಶ್ಯ ಕಂಡು ಬಂದಿದೆ. ಇನ್ನು ರಜೆ ಇಲ್ಲದ ಕಾರಣ ಸರ್ಕಾರಿ ನೌಕರರ ಕೂಡ ಬಸ್‌ ಇಲ್ಲದೆ ಪರಿತಪ್ಪಿಸುತ್ತಿದ್ದಾರೆ.

Leave a Reply

error: Content is protected !!
LATEST
ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ