NEWSನಮ್ಮಜಿಲ್ಲೆರಾಜಕೀಯ

ಸಂದೇಶ್ ನಾಗರಾಜ್ ವಿಚಾರ ಈಗ ಅಪ್ರಸ್ತುತ: ಸಾರಾ ಮಹೇಶ್‌

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಯಾವತ್ತು ಚುನಾವಣೆ ಆಯಿತೋ ಅಂದಿನಿಂದಲೂ ನಮ್ಮ ಜೊತೆ ಸಂದೇಶ್ ನಾಗರಾಜ್ ಅವರು ಇಲ್ಲ. ಅವರು ನಮ್ಮಿಂದ ದೂರವೇ ಇದ್ದಾರೆ ಎಂದು ಜೆಡಿಎಸ್ ಶಾಸಕ ಸಾರಾ ಮಹೇಶ್ ಹೇಳಿದ್ದಾರೆ.

ಮೈಸೂರಿನಲ್ಲಿ ಶನಿವಾರ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಎಂಎಲ್ಸಿ ಸಂದೇಶ್ ನಾಗರಾಜ್ ಬಿಜೆಪಿ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಅವರು ನಮ್ಮ ಜೊತೆ ಗುರುತಿಸಿಕೊಂಡಿಲ್ಲ. ಈಗ ಆ ವಿಚಾರ ಅಪ್ರಸ್ತುತ. ಸಂದೇಶ್ ನಾಗರಾಜ್ ಅವರಿಂದ ತೆರವಾಗುವ ಸ್ಥಾನಕ್ಕೆ ಎದುರಾಗಿರುವ ಚುನಾವಣೆಗೆ ಸಜ್ಜಾಗಿದ್ದೇವೆ ಎಂದು ಹೇಳಿದರು.

ನಮ್ಮ ಪಕ್ಷದಲ್ಲಿ ವಿಧಾನ ಪರಿಷತ್ ಚುನಾವಣೆಗೆ ಮೈಸೂರು ಭಾಗದಿಂದ ಐದು ಮಂದಿ ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಕಡೆಗೆ ಅಚ್ಚರಿಯ ಅಭ್ಯರ್ಥಿಯ ಆಯ್ಕೆಯಾಗಬಹುದು. ನಮ್ಮ ಪಕ್ಷದ ಜನಪ್ರತಿನಿಧಿಗಳು ಮೈಸೂರು ಜಿಲ್ಲೆಯಲ್ಲಿ ಹೆಚ್ಚಿರುವುದರಿಂದ ಗೆಲ್ಲುತ್ತೇವೆ ಎಂದು ಸಾರಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನು ಕೋವಿಡ್‌ನಿಂದ ಜನ ಸಂಕಷ್ಟದಲ್ಲಿದ್ದಾರೆ. ಇನ್ನೂ ಕೂಡ ಚೇತರಿಕೆ ಕಂಡಿಲ್ಲ. ಆದರೆ ಈ ಸಂದರ್ಭದಲ್ಲಿ ಮೈಸೂರಿನ ವಾಣಿಜ್ಯ ಉದ್ಯಮಗಳು, ಕಲ್ಯಾಣ ಮಂಟಪಗಳ ಎದುರು ತೆರಿಗೆ ಬಾಕಿ ಇದೆ ಎಂದು ಫಲಕ ಹಾಕಲಾಗುತ್ತಿದೆ.

ಕರ್ನಾಟಕ ಮುನ್ಸಿಪಲ್ ಕಾಯ್ದೆ ಪ್ರಕಾರ ವಾಣಿಜ್ಯ, ವಾಸ, ಖಾಲಿ ನಿವೇಶನ ಹೀಗೆ ಮೂರು ರೀತಿ ತೆರಿಗೆ ಹಾಕಲು ಅವಕಾಶ ಇದೆ. ಮೈಸೂರು ಮಹಾನಗರ ಪಾಲಿಕೆ ಸೂಪರ್ ಸ್ಪೆಷಲ್ ಕಮರ್ಷಿಯಲ್ ಟ್ಯಾಕ್ಸ್ ಹಾಕುತ್ತಿದೆ ಎಂದು ಸಾ ರಾ ಮಹೇಶ್ ಅಸಮಾಧಾನ ಹೊರಹಾಕಿದರು.

ಈ ರೀತಿಯ ಟ್ಯಾಕ್ಸ್ ಮೆಟ್ರೋ ಪಾಲಿಟನ್ ಸಿಟಿ ಬೆಂಗಳೂರಿನಲ್ಲೂ ಇಲ್ಲ. ನೀವು ಮನಸೋ ಇಚ್ಛೆ ತೆರಿಗೆ ಹಾಕಿದರೆ ಸಾರ್ವಜನಿಕರ ಗತಿಯೇನು ? ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರಿಗೂ ಮಾತನಾಡಿದ್ದೇನೆ. ಕೆಎಂಎ ಪ್ರಕಾರ ಕಲ್ಯಾಣ ಮಂಟಪಗಳಿಗೆ 4 ಲಕ್ಷ ರೂ. ತೆರಿಗೆ ಹಾಕಲು ಅವಕಾಶ ಇದೆ.

ಮಹಾನಗರ ಪಾಲಿಕೆ 8.70 ಲಕ್ಷ ರೂ. ತೆರಿಗೆ ಹಾಕಿದೆ. ಇದನ್ನು ಪ್ರಶ್ನಿಸಿ ಕಲ್ಯಾಣ ಮಂಟಪಗಳ ಮಾಲೀಕರ ಸಂಘದವರು ಕೋರ್ಟ್ ಮೆಟ್ಟಿಲು ಹತ್ತಿದ್ದಾರೆ. ಆದ್ದರಿಂದ ತೆರಿಗೆ ಕಟ್ಟಿಲ್ಲ ಎಂದು ಶಾಸಕ ಸಾ.ರಾ. ಮಹೇಶ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ನನಗೆ ಬಿಟ್ ಕಾಯಿನ್ ಅಂದರೇನು ಎಂದೇ ಗೊತ್ತಾಗಿದ್ದು 15 ದಿನದ ಹಿಂದೆ. ನನಗೆ ಬಿಟ್ ಕಾಯಿನ್ ಗೊತ್ತಿರಲಿಲ್ಲ‌. ಅದರ ಬೆಲೆಯೂ ಗೊತ್ತಿಲ್ಲ. ಜನರಿಗೆ ವೈಟ್ ಮನಿ, ಬ್ಲಾಕ್ ಮನಿ ಗೊತ್ತಿತ್ತು. ಆದರೆ ಬಿಟ್ ಕಾಯಿನ್ ಮನಿ ಗೊತ್ತಿರಲಿಲ್ಲ, ಈಗ ಗೊತ್ತಾಗುತ್ತಿದೆ ಎಂದು ರಾಜ್ಯದಲ್ಲಿ ಸದ್ಯ ಸಾಕಷ್ಟು ಸದ್ದು ಮಾಡುತ್ತಿರುವ ಬಿಟ್ ಕಾಯಿನ್ ವಿಚಾರವಾಗಿಯೂ ಶಾಸಕ ಸಾರಾ ಪ್ರತಿಕ್ರಿಯಿಸಿದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ