NEWSನಮ್ಮಜಿಲ್ಲೆವಿಜ್ಞಾನ

ಮೊಟ್ಟೆಗಳಿಗೆ ಕೃತಕ ಕಾವು ನೀಡಿ ಹೆಬ್ಬಾವು ಮರಿಗಳ ರಕ್ಷಣೆ ಮಾಡಿದ ಬನ್ನೂರಿನ ತೇಜಸ್

ವಿಜಯಪಥ ಸಮಗ್ರ ಸುದ್ದಿ

ಪುತ್ತೂರು: ಪ್ರತ್ಯೇಕ ಎರಡು ಸ್ಥಳಗಳಲ್ಲಿ ಸಿಕ್ಕಿದ ಹೆಬ್ಬಾವಿನ ಮೊಟ್ಟೆಗಳನ್ನು ರಕ್ಷಣೆ ಮಾಡಿದ ಬಳಿಕ ಅವುಗಳಿಗೆ ಕೃತಕ ಕಾವು ನೀಡಿ ಎಲ್ಲಾ ಮರಿಗಳನ್ನು ರಕ್ಷಣೆ ಮಾಡಿದ ಉರಗ ಪ್ರಿಯ ಬನ್ನೂರಿನ ತೇಜಸ್ ಅರಣ್ಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಮೊನ್ನೆ (ಜೂ.27) ಅರಣ್ಯಕ್ಕೆ ಬಿಟ್ಟಿದ್ದಾರೆ.

ಸವಣೂರಿನಲ್ಲಿ 16 ಹೆಬ್ಬಾವಿನ ಮೊಟ್ಟೆಗಳು ಮತ್ತು ಲೋಕೋಪಯೋಗಿ ಇಲಾಖೆ ಸಹಾಯಕ ಅಭಿಯಂತರ ಪ್ರಮೋದ್ ಅವರ ಮಾಹಿತಿಯಂತೆ ಪುತ್ತೂರಿನ ಪರಿಸರದಲ್ಲಿ 22 ಹೆಬ್ಬಾವಿನ ಮೊಟ್ಟೆಗಳನ್ನು ಬನ್ನೂರು ಕರ್ಮಲ ನಿವಾಸಿ ತೇಜಸ್ ಅವರು ಫಾರೆಸ್ಟ್ ಗಾರ್ಡ್ ಸತ್ಯ ಡಿ.ಜೆ. ಮತ್ತು ಪ್ರೀತಮ್ ಜೊತೆಯಲ್ಲಿ ಒಟ್ಟು 38 ಮೊಟ್ಟೆಗಳನ್ನು ರಕ್ಷಣೆ ಮಾಡಿದ್ದರು.

ಆ 38 ಮೊಟ್ಟೆಗಳಿಗೂ ಕೃತಕ ಕಾವು ಕೊಡುವ ಮೂಲಕ 38 ಮರಿಗಳು ಮೊಟ್ಟೆಗಳಿಂದ ಹೊರ ಬಂದಿವೆ. ಅವುಗಳನ್ನು ರಕ್ಷಣೆ ಮಾಡಿ ಜೂ. 27ರಂದು ಸಂಜೆ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆಗೆ ರಕ್ಷಿತಾರಣ್ಯಕ್ಕೆ ಬಿಟ್ಟಿದ್ದಾರೆ.

ಉಪ ವಲಯ ಅರಣ್ಯ ಅಧಿಕಾರಿ ಶಿವಾನಂದ ಆಚಾರ್ಯ, ಶೇಖರ್, ವಲಯ ಅರಣ್ಯ ಅಧಿಕಾರಿಗಳ ಮಾರ್ಗ ದರ್ಶನದಲ್ಲಿ ಪುನೀತ್ ಮತ್ತು ತೇಜಸ್ ಮರಿಗಳನ್ನು ಅರಣ್ಯಕ್ಕೆ ಬಿಟ್ಟರು.

Vijayapatha - ವಿಜಯಪಥ

Leave a Reply

error: Content is protected !!
LATEST
KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪ್ರಣಾಪಾಯದಿಂದ ಪತ್ನಿ ಪಾರು 600ರಿಂದ 800 ಮಂದಿ ಅಧಿಕಾರಿಗಳಿಗಾಗಿ 1.07 ಲಕ್ಷ ನೌಕರರಿಗೆ ಅನ್ಯಾಯ ಮಾಡಲು ಹೊರಟಿರುವುದು ನ್ಯಾಯವೇ? KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರಿಗೆ ಸಮಾನ ವೇತನ ಲಾಭವೋ-ನಷ್ಟವೋ..!?? ಹರಿಯಾಣದಲ್ಲಿ ಸಮಾವೇಶ: ಎಂಎಸ್‌ಪಿ ಖಾತ್ರಿ ಕಾನೂನು ಜಾರಿಗೆ ಅನ್ನದಾತರ ಪಟ್ಟು ಪ್ರಜಾಪ್ರಭುತ್ವದ ಉಳಿವಿಗಾಗಿ ಮಾನವ ಸರಪಳಿ : ಉಸ್ತುವಾರಿ ಸಚಿವ ಮುನಿಯಪ್ಪ BMTC ಅಧಿಕಾರಿಗಳ ವಾಹನಗಳಿಗೂ ಖಾಸಗಿ ಚಾಲಕರ ನೇಮಕಕ್ಕೆ ಟೆಂಡರ್‌ ಕರೆದ ಸಂಸ್ಥೆ KSRTC ಮಡಿಕೇರಿ: ವೇತನ ಬಿಡುಗಡೆ ಆಗ್ರಹಿಸಿ ಪ್ರತಿಭಟನೆಗೆ ಇಳಿದ ಗುತ್ತಿಗೆ ಚಾಲಕರು KSRTC ನೌಕರರ ನಂಬಿಸಲು ಹೋದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳಿಂದಲೇ ಅವರ ಊಸರವಳ್ಳಿ ಬಣ್ಣ ಬಯಲು..! KSRTC : ಗಣಪತಿ ಪ್ರತಿಷ್ಠಾಪಿಸಿದ್ದರಿಂದ ಡಿಪೋ ಮುಂದೆ ಚಾಲಕ ರವಿ ಪಾರ್ಥಿವ ಶರೀರ ಇಡಲಾತ್ತು, ಪ್ರಮಾದವಾಗಿಲ್ಲ- ಡಿಎಂ ಸಮ... 10 ವರ್ಷದ ಆಧಾರ್‌ ನವೀಕರಣಕ್ಕೆ ಡೆಡ್‌ಲೈನ್‌ ಫಿಕ್ಸ್‌: ನಾಳೆ ಅಂತಿಮ ಗಡುವು- ಬಳಿಕ ದಂಡ