NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರು ಮುಷ್ಕರ ನಡೆಸುವಂತಿಲ್ಲ: ನೌಕರರಿಗೆ ಶಾಕ್ ಕೊಟ್ಟ ಸರ್ಕಾರ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ ನಾಲ್ಕೂ ನಿಗಮಗಳ ಸಾರಿಗೆ ಸಂಸ್ಥೆಗಳ ನೌಕರರು ಮತ್ತೆ ಮುಷ್ಕರ ಮಾಡಲು ಮುಂದಾಗಿದ್ದಾರೆ ಎಂಬ ಸುಳಿವು ಸರ್ಕಾರಕ್ಕೆ ಸಿಕ್ಕಿದೆ. ಇದನ್ನು ಅರಿತ ಸರ್ಕಾರ ಮುಷ್ಕರಕ್ಕೆ ನಿರ್ಧರಿಸಿದ್ದ ಸಾರಿಗೆ ಸಿಬ್ಬಂದಿಗೆ ಬ್ರೇಕ್​ ಹಾಕಲು ಅಗತ್ಯ ಸೇವೆಗಳ ಮುಷ್ಕರ ನಿಷೇಧಿಸಿ ಆದೇಶ ಹೊರಡಿಸಿದೆ.

ಸರ್ಕಾರ ಮತ್ತು ಸಾರಿಗೆಯ ನಾಲ್ಕೂ ನಿಗಮಗಳಲ್ಲಿಯೂ ನಮ್ಮ ಬೇಡಿಕೆ ಈಡೇರಿಸಲು ಇನ್ನೂ ಮೀನಾಮೇಷ ಎಣಿಸಲಾಗುತ್ತಿವೆ ಎಂದು ಬರುವ ಜುಲೈ 5ರ ಬಳಿಕ ಸಾರಿಗೆ ನೌಕರರು ಮತ್ತೆ ರಸ್ತೆಗೆ ಇಳಿಯಲಿದ್ದಾರೆ ಎನ್ನಲಾಗಿದೆ. ಇದನ್ನು ತಿಳಿದ ಸರ್ಕಾರ ನೌಕರರಿಗೆ ಕಡಿವಾಣ ಹಾಕಲು ಮುಷ್ಕರ ನಿಷೇಧಿಸಿ ಆದೇಶ ಹೊರಡಿಸಿದೆ.

ಈ ವರ್ಷ ಸಾರಿಗೆ ಮುಷ್ಕರ ನಡೆಸುವಂತಿಲ್ಲ
ರಾಜ್ಯದ ಸರ್ಕಾರದ ಆರ್ಥಿಕತೆಯ ಮೇಲೆ ಕೋವಿಡ್ ಸಾಕಷ್ಟು ಪ್ರಭಾವ ಬೀರಿದೆ. ಈ ಸಂದರ್ಭದಲ್ಲಿ ಮುಷ್ಕರ ಮಾಡುವುದು ಸೂಕ್ತವಲ್ಲ. ಹೀಗಾಗಿ ಕರ್ನಾಟಕ ಅಗತ್ಯ ಸೇವೆಗಳ ನಿರ್ವಹಣೆ ಕಾಯ್ದೆ 3 ಉಪವಿಭಾಗ 1ರ ಅನ್ವಯ ಅಗತ್ಯ ಸೇವೆಗಳ ಮುಷ್ಕರವನ್ನು (essential services maintain act) ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಜುಲೈ 1ರಿಂದ ಡಿಸೆಂಬರ್​​ 31ರವರೆಗೆ ಸಾರಿಗೆ ಸಿಬ್ಬಂದಿ ಮುಷ್ಕರ ಮಾಡದಂತೆ ನಿಷೇಧ ಹೇರಲಾಗಿದೆ.

ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಸಿದ್ದರಾಗುತ್ತಿದ್ದಾರೆ ಎಂಬ ಸುಳಿವು ಸಿಕ್ಕಿತ್ತು. ಲಾಕ್​ಡೌನ್​ ಮುಗಿದ ಮೇಲೆ ಜುಲೈ 5 ರ ನಂತರ ಕುಟುಂಬ ಸಮೇತ ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ಮುಂದಾಗಿದ್ದರು. ಆದರೆ ಅದಕ್ಕೂ ಮೊದಲೇ ಸರ್ಕಾರ ಅಗತ್ಯ ಸೇವೆಗಳ‌ ಮುಷ್ಕರವನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...