NEWSನಮ್ಮಜಿಲ್ಲೆರಾಜಕೀಯ

ರಾಸಲೀಲೆ ಸಿಡಿಯ ಆ ಮಹಾನಾಯಕ ಯಾರು ಎಂಬ ಕುತೂಹಲದಲ್ಲಿ ನಾವು ಇದ್ದೇವೆ: ಮಾಜಿ ಸಿಎಂ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ರಾಮನಗರ: ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಸಿಡಿ ಪ್ರಕರಣದ ಆ ಮಹಾನಾಯಕ ಯಾರು ಎಂಬ ಕುತೂಹಲದಲ್ಲಿ ನಾವು ಕೂಡ ಇದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌,ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ಸಿಡಿ ಕೇಸ್‌ನಲ್ಲಿ ಡಿಕೆಶಿ ಅವರ ಹೆಸರನ್ನು ಯಾರು ಹೇಳಿದ್ದಾರೆ? ಅವರ ಹೆಸರನ್ನು ಅವರೆ ಏಕೆ ಮುಂದೆ ಬಿಟ್ಟುಕೊಂಡಿದ್ದಾರೆ. ಅವರೇ ಮಾಡಿದ್ದಾರೆ ಅಂತ ಯಾರಾದರೂ ಹೇಳಿದ್ದಾರ ಎಂದು ಪ್ರಶ್ನೆ ಹಾಕಿದರು. ರಾಜ್ಯದಲ್ಲಿ ಎಷ್ಟು ಜನ ಮಹಾನಾಯಕರು ಇಲ್ಲ, ಬಿಜೆಪಿಯಲ್ಲೇ ಒಬ್ಬರು ಮಹಾನಾಯಕರು ಬೆಳೆಯುತ್ತಿದ್ದಾರೆ ಎಂದರು.

ಈ ನಡುವೆ ರಾಸಲೀಲೆ ಸಿಡಿಯಲ್ಲಿ ಇರುವ ಯುವತಿ ಮಾಜಿ ಸಚಿವ ಜಾರಕಿಹೊಳಿ ಅವರು ನನಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಮೊಸ ಮಾಡಿದ್ದಾರೆ. ಈಗ ನನಗೆ ರಕ್ಷಣೆ ಬೇಕು ಎಂದು ಗೃಹ ಸಚಿವರಲ್ಲಿ ಮನವಿ ಮಾಡಿದ್ದಾರೆ. ಈ ಎಲ್ಲವುಗಳನ್ನು ನೋಡುತ್ತಿದ್ದರೆ ಈ ಪ್ರಕಣರ ಎಲ್ಲಿಗೆ ಹೋಗುವುದೋ ಎಂಬುವುದು ಇನ್ನು ಸ್ಪಷ್ಟವಾಗಿಲ್ಲ ಎಂದು ಹೇಳಿದರು.

ಜಾರಕಿಹೊಳಿ ಯಾರನ್ನು ಮಹಾನಾಯಕರು ಅಂತ ಹೇಳಿದ್ದಾರೊ ಗೊತ್ತಿಲ್ಲ. ಈ ನಡುವೆ ಡಿಕೆಶಿ ತಾವೆ ಮಹಾನಾಯಕ ಅಂತ ಯಾಕೆ ಅಂದುಕೊಂಡರೊ ಗೊತ್ತಿಲ್ಲ. ಡಿಕೆ.ಶಿವಕುಮಾರ್ ಬಹಳ ಮೆಚುರ್ಡ್ ಪೊಲಿಟಿಶಿಯನ್ ಅವರಿಗೆ ಇರುವ ಅನುಭವ ನಮಗೂ ಇಲ್ಲ. ಆದರೂ ದುಡುಕಿ ಅವರ ಹೆಸರನ್ನು ಅವರೇ ಹೇಳಿದ್ದಾರೆ. ಯಾಕೆ ಈ ಪ್ರಕರಣಕ್ಕೆ ಅವರ ಹೆಸರು ಸಿಲುಕಿಸಿಕೊಳ್ಳಲು ಹೊರಟಿದ್ದಾರೆ ಗೊತ್ತಿಲ್ಲ ಎಂದರು.

ಈ ಪ್ರಕರಣವನ್ನು ಎಲ್ಲರೂ ಹುಡುಗಾಟಿಕೆಯಾಗಿ ತೆಗೆದುಕೊಂಡಿದ್ದಾರೆ ಯಾರಿಗೂ ಗಂಭೀರತೆ ಇಲ್ಲ, ಇದರಿಂದ ರಾಜ್ಯದ ಗೌರವ ಹಾಳಾಗುತ್ತಿದೆ. ಅಧಿಕಾರಿಗಳು ಯಾವುದೇ ಪ್ರಭಾವಕ್ಕೆ ಒಳಗಾಗಬಾರದು ರಾಜ್ಯದ ಗೌರವ ಉಳಿಸಲು ನಿಷ್ಪಕ್ಷಪಾತ ತನಿಕೆ ಮಾಡಬೇಕು ಎಂದು ಆಗ್ರಹಿಸಿದರು.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್