CrimeNEWSನಮ್ಮಜಿಲ್ಲೆ

 ಅತ್ಯಾಚಾರ ಆರೋಪಿಯ ಬಂಧನ ಯಾವಾಗ?

ಸರಣಿ ಟ್ವೀಟ್‌ಗಳ ಮೂಲಕ ಸರ್ಕಾರ ಪ್ರಶ್ನಿಸಿದ ಕರ್ನಾಟಕ ಕಾಂಗ್ರೆಸ್

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ತ ಯುವತಿ ನ್ಯಾಯಾಲಯದ ಮುಂದೆ ಹಾಜರಾಗಿದ್ದಾಳೆ. ಆರೋಪಿ ರಮೇಶ್ ಜಾರಕಿಹೊಳಿ ಬಂಧನ ಯಾವಾಗ? ಎಂದು ಕರ್ನಾಟಕ ಕಾಂಗ್ರೆಸ್ ಸರಣಿ ಟ್ವೀಟ್‌ಗಳ ಮೂಲಕ ಸರ್ಕಾರವನ್ನು ಈ ಕುರಿತು ಮಂಗಳವಾರ ಪ್ರಶ್ನೆ ಮಾಡಿದೆ.

ಬಿಜೆಪಿ ಕರ್ನಾಟಕ, ಬಸವರಾಜ ಬೊಮ್ಮಾಯಿ ಅವರೇ ಈಗ ಹೇಳಿ ಅತ್ಯಾಚಾರ ಆರೋಪಿಯ ಬಂಧನ ಯಾವಾಗ?” ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ದೇಶದ ಕಾನೂನು ನಿಮಗೆ ಗೊತ್ತಿಲ್ಲ ಎಂದು ಎಚ್ಚರಿಸಿದೆ.

ಸಂತ್ರಸ್ತ ಯುವತಿ ಬೆಂಗಳೂರಿನಲ್ಲಿ ಪ್ರತ್ಯಕ್ಷವಾದರೆ ರಮೇಶ್ ಜಾರಕಿಹೊಳಿ ಗೋಕಾಕ್‌ನಲ್ಲಿದ್ದರು. ಸೋಮವಾರ ಪೊಲೀಸ್ ವಿಚಾರಣೆ ಎದುರಿಸಿದ್ದ ಅವರು ಗೋಕಾಕ್‌ನ ನಿವಾಸಕ್ಕೆ ತೆರಳಿದ್ದರು.

ಮಗಳವಾರ ಮಧ್ಯಾಹ್ನ ರಮೇಶ್ ಜಾರಕಿಹೊಳಿ ಮಹಾರಾಷ್ಟ್ರ ರಾಜ್ಯದ ಕೊಲ್ಹಾಪುರದ ಮಹಾಲಕ್ಷ್ಮೀ ದೇವಾಲಯಕ್ಕೆ ಭೇಟಿ ನೀಡಿದರು. ಸುಮಾರು ಅರ್ಧಗಂಟೆ ದೇವಾಲಯದಲ್ಲಿದ್ದ ಬಳಿಕ ಗೋಕಾಕ್‌ಗೆ ವಾಪಸ್ ಆಗಿದ್ದಾರೆ.

ಕರ್ನಾಟಕ ಕಾಂಗ್ರೆಸ್ #ArrestRapistRamesh ಹ್ಯಾಷ್ ಟ್ಯಾಗ್ ಮೂಲಕ ಸರಣಿ ಟ್ವೀಟ್ ಮಾಡುತ್ತಿದೆ. ಬಿಜೆಪಿ ಆಡಳಿತದಲ್ಲಿ ಕಾನೂನು ಬದಲಾಗಿದೆ. ಇಲ್ಲಿ ಸಂತ್ರಸ್ತೆಯನ್ನು ಪೊಲೀಸ್ ವಶಕ್ಕೆ ಪಡೆಯಬಹುದು, ಆರೋಪಿ ಸ್ವಇಚ್ಛೆಯಂತೆ ತಿರುಗಾಡಿಕೊಂಡಿರಬಹುದು!! ಎಂದು ಟೀಕಿಸಿದೆ.

ಸಂತ್ರಸ್ತೆ ಬಂದು ನ್ಯಾಯಾಧೀಶರೆದುರು ಹೇಳಿಕೆಯನ್ನೂ ಕೊಟ್ಟಾಯಿತು. ಇಷ್ಟಾದರೂ ಅತ್ಯಾಚಾರ ಆರೋಪಿ ರಮೇಶ್ ಜಾರಕಿಹೊಳಿ ಬೀದಿ ಗೂಳಿಯಂತೆ ತಿರುಗಿಕೊಂಡಿದ್ದಾರೆ, ಇನ್ನೂ ಕೂಡ ಆರೋಪಿಯ ಬಂಧನವಾಗಲಿಲ್ಲ ಏಕೆ #BuildupBommai ಅವರೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

“ಸಂತ್ರಸ್ತೆ ಕೋರ್ಟಿಗೆ ಬಂದು ಹೇಳಿಕೆ ನೀಡಿದ ಮೇಲೂ ಅತ್ಯಾಚಾರ ಆರೋಪಿಯ ಬಂಧನವಾಗಲಿಲ್ಲವೆಂದರೆ ಏನರ್ಥ ಬಸವರಾಜ ಬೊಮ್ಮಾಯಿ ಅವರೇ?” ಎಂದು ಪ್ರಶ್ನಿಸಿದೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...