NEWSರಾಜಕೀಯಶಿಕ್ಷಣ-

ಮಕ್ಕಳ ಕೊಲೆಗಡುಕ ಎಂಬ ಪಟ್ಟ ಕಟ್ಟಿಕೊಳ್ಳಬೇಡಿ: ಸಚಿವ ಸುರೇಶ್‌ ಕುಮಾರ್‌ಗೆ ಎಎಪಿ ಸಲಹೆ

ವಿದ್ಯಾಗಮ, ವಠಾರ ಶಾಲೆ ನೆಪದಲ್ಲಿ, ಮಕ್ಕಳ, ಶಿಕ್ಷಕರ ಕೊಲೆ ಮಾಡಲು ಹೊರಟಿರುವ ಬಿಜೆಪಿ ಸರ್ಕಾರ l ಜಗದೀಶ್ ವಿ ಸದಂ ಆರೋಪ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ತಮ್ಮ ಪ್ರತಿಷ್ಟೆಯ ಹಾಗೂ ಪ್ರಚಾರದ ಹಪಾಹಪಿಗೆ ಬಿದ್ದು ವಠಾರ ಶಾಲೆ, ವಿದ್ಯಾ ಗಮ ಎನ್ನುವಂತಹ ಹುಚ್ಚು ಹುಚ್ಚು ಯೋಜನೆಗಳ ಮೂಲಕ ನಾನಾ ರೀತಿಯ ಪ್ರಯೋಗಗಳನ್ನು ಮಾಡಲು ಹೋಗಿ ರಾಜ್ಯದ ಲಕ್ಷಾಂತರ ಮಕ್ಕಳ ಹಾಗೂ ಶಿಕ್ಷಕರ ಜೀವಕ್ಕೆ ಸಂಚಕಾರ ತರುತ್ತಿದ್ದಾರೆ. ಇದನ್ನು ಸರ್ಕಾರಿ ಪ್ರಾಯೋಜಿತ ಕೊಲೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಮಾದ್ಯಮ ಸಂಚಾಲಕ ಜಗದೀಶ್ ವಿ ಸದಂ ಟೀಕಿಸಿದ್ದಾರೆ.

ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ದತಿ, ದೌರ್ಜನ್ಯ ಕೌಟುಂಬಿಕ ಹಿಂಸೆ, ಮಕ್ಕಳ ಕಳ್ಳ ಸಾಗಾಣಿಕೆಯಂತಹ ಪ್ರಕರಣಗಳು ಶಾಲೆ ತೆರೆಯದ ಕಾರಣ ಹೆಚ್ಚುತ್ತಿದ್ದು ಇದನ್ನು ತಡೆಗಟ್ಟುವ ಸಲುವಾಗಿ ವಿದ್ಯಾಗಮ, ವಠಾರ ಶಾಲೆ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಸುಳ್ಳು ಹೇಳುತ್ತಿರುವ ಸುರೇಶ್ ಕುಮಾರ್ ಇಡೀ ರಾಜ್ಯದ ಒಂದು ಕೋಟಿ ಶಾಲಾ ಮಕ್ಕಳ ಮಹಾನ್ ಪೋಷಕ ಎನ್ನುವಂತೆ ಪ್ರದರ್ಶನ ಮಾಡಿಕೊಳ್ಳುತ್ತಿದ್ದಾರೆ ಹೊರತು ಮಕ್ಕಳ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಅವರ ಜೀವನದೊಂದಿಗೆ ಚೆಲ್ಲಾಟವಾಡುತ್ತಿರುವುದು ಖೇದನೀಯ.

ಮಕ್ಕಳ ಮೇಲೆ ಇಷ್ಟೊಂದು ದಬ್ಬಾಳಿಕೆ ಆಗುತ್ತಿದೆ ಎಂದಾದರೆ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದಾಯಿತು. ಇಂತಹ ಪ್ರಕರಣಗಳು ಹೆಚ್ಚಾಗಿರುವ ಕುರಿತು ಗೃಹ ಇಲಾಖೆಯಲ್ಲಿ ಏನಾದರೂ ಅಂಕಿ ಅಂಶಗಳು ಅಥವಾ ದಾಖಲೆಗಳು ಇವೆಯೇ ಎಂದು ತಿಳಿಸಬೇಕು. ತಪ್ಪಿತಸ್ಥರಿಗೆ ಯಾವ ಕ್ರಮ ತೆಗೆದುಕೊಂಡಿದ್ದೀರಿ ಎಂಬುದು ರಾಜ್ಯದ ಜನತೆಗೆ ತಿಳಿಸಬೇಕಾಗಿದೆ ಎಂದು ಒತ್ತಾಯಿಸಿದ್ದಾರೆ.

ಈ ರಾಜ್ಯ ಕಂಡ ಅತ್ಯುತ್ತಮ ಶಿಕ್ಷಣ ಸಚಿವ ಗೋವಿಂದೇ ಗೌಡ ಅವರನ್ನು ತಪ್ಪು, ತಪ್ಪಾಗಿ ಅನುಕರಿಸಲು ಹೋಗುವುದು ಅಥವಾ ಭವಿಷ್ಯದಲ್ಲಿ ಅವರನ್ನು ಮೀರಿಸುವಂತಹ ಉತ್ತಮ ಶಿಕ್ಷಣ ಸಚಿವ ನಾನಾಗಬೇಕೆಂಬ ಹಪಾಹಪಿಯಿಂದ ಇಂತಹ ಕುಕೃತ್ಯಗಳಿಗೆ ಕೈ ಹಾಕಬೇಡಿ. ಮಕ್ಕಳ ಕೊಲೆಗಡುಕ ಎಂಬ ಪಟ್ಟವನ್ನು ಕಟ್ಟಿಕೊಳ್ಳಬೇಡಿ ಎಂದು ಸಲಹೆ ನೀಡಿದ್ದಾರೆ.

ಆರ್ಥಿಕ ಮುಗ್ಗಟ್ಟಿನಿಂದ, ಸೋಂಕಿಗೆ ಹೆದರಿ ಈ ಬಾರಿ ಮುಕ್ಕಾಲು ಭಾಗ ಆರ್‌ಟಿಇ ಸೀಟುಗಳೇ ಭರ್ತಿ ಆಗಿಲ್ಲ, ಶೇ 90ರಷ್ಟು ಪೋಷಕರು ಶಾಲೆ ತೆರೆಯುವುದು ಬೇಡ ಎಂದು ಅಭಿಪ್ರಾಯ ಪಟ್ಟಿದ್ದಾರೆ ಆದರೂ ಕೂಡ ಪರೋಕ್ಷವಾಗಿ ವಿದ್ಯಾಗಮ, ವಠಾರ ಶಾಲೆ ಎಂದು ಕೊಂಡು ಮಕ್ಕಳ ಹಾಗೂ ಶಿಕ್ಷಕರ ಜೀವಕ್ಕೆ ಏಕೆ ಅಪಾಯ ತರುತ್ತಿರುವಿರೀ ಸುರೇಶ್ ಕುಮಾರ್ ಅವರೇ?

ಮುಗ್ದ ಜೀವಗಳನ್ನು ಬಲಿ ಪಡೆಯುವ ಕೆಲಸಕ್ಕೆ ಕೈ ಹಾಕದೇ ಪರ್ಯಾಯ ಶಿಕ್ಷಣ ವ್ಯವಸ್ಥೆಯ ಬಗ್ಗೆ ಯೋಚಿಸಲು ಇದು ಸಕಾಲ. ಈ ಬಗ್ಗೆ ಎಲ್ಲ ರಂಗಗಳ ತಜ್ಞರ ನೇತೃತ್ವದಲ್ಲಿ ಸಮಿತಿ ರಚಿಸಿ ಮುಂದಿನ ಕ್ರಮ ಕೈಗೊಳ್ಳ ಬೇಕು ಹಾಗೂ ವಿದ್ಯಾಗಮ, ವಠಾರ ಶಾಲೆ ಯೋಜನೆಗಳನ್ನು ತತ್‌ಕ್ಷಣದಿಂದ ರದ್ದುಗೊಳಿಸಬೇಕು ಎಂದು ಸದಂ ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ