NEWSಉದ್ಯೋಗನಮ್ಮರಾಜ್ಯ

ಇಎಸ್ಐ ಗುತ್ತಿಗೆ ನೌಕರರ ಮುಷ್ಕರ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಐದು ವರ್ಷಗಳಿಂದ ಇಎಸ್ಐ ಆಸ್ಪತ್ರೆಯಲ್ಲಿ ಗುತ್ತಿಗೆ ನೌಕರರಾಗಿ ದುಡಿಯುತ್ತಿರುವ ನೌಕರರು ವಿವಿಧ ಬೇಡಿಕೆಗಳ ಈಡೇರಿಗೆ ಒತ್ತಾಯಿಸಿ ಇಂದಿನಿಂದ ಅನಿರ್ದಿಷ್ಟ ಅವಧಿವರೆಗೆ ಮುಷ್ಕರ ಮಾಡುತ್ತಿದ್ದಾರೆ.

ಆಸ್ಪತ್ರೆಯ ಮುಖ್ಯ ದ್ವಾರ ಮುಚ್ಚಿ ಧರಣಿ ನಡೆಸುತ್ತಿರುವ ನೌಕರರು ಪ್ರತಿ ತಿಂಗಳಿನ ಸಂಬಳಕ್ಕೆ ಅಧಿಕಾರಿಗಳ ಹಿಂದೆ ಮುಂದೆ ಸುತ್ತುವ ಪರಿಸ್ಥಿತಿ ಇದೆ. ನಾವು ದುಡಿದರು ನಮಗೆ ವೇತನ ನೀಡುವ ಸಂಬಂಧ ಅಸಡ್ಡೆಯಿಂದ ಅಧಿಕಾರಿಗಳು ನಡೆದುಕೊಳ್ಳುತ್ತಾರೆ ಎಂದು ಬೇಸ ವ್ಯಕ್ತಪಡಿಸಿದರು.

ಈ ಕೊರೊನಾ ಸಂದರ್ಭಲ್ಲಿಯು ನವೆಂಬರ್ ತಿಂಗಳಿಂದ ಸಂಬಳ ಕೊಟ್ಟಿಲ್ಲ. ಉದ್ಯೋಗಿಗೆ ನೀಡುವ ಯಾವುದೇ ಭತ್ಯೆಯು ನೀಡಿಲ್ಲ. ಕಾರ್ಮಿಕ ಇಲಾಖೆಯಂತೆ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ನಮಗೆ ಬಾಕಿ ಇರುವ ಸಂಬಳ ನೀಡಿಲ್ಲ ಎಂದು ಅಲವತ್ತುಕೊಂಡಿದ್ದು, ನಮಗೆ ಶೀಘ್ರದಲ್ಲೇ ವೇತನ ಮತ್ತು ಭತ್ಯೆಯನ್ನು ನೀಡಬೇಕು ಎಂದು ಆಗ್ರಹಿಸಿದರು.

ಇಡೀ ವರ್ಷ ದುಡಿಯುವ ನಮಗೆ ಒಂದು ದಿನ ರಜೆ ಪಡೆದರು ಸಂಬಳದಲ್ಲಿ ಕಡಿತ ಮಾಡುವ ಅಧಿಕಾರಿಗಳು. ಜತೆಗೆ ಮೇಲಿನ ಅಧಿಕಾರಿಗಳಿಂದ ನಿತ್ಯ ದೌರ್ಜನ್ಯ, ಬೈಗುಳ ತಪ್ಪಿಸುವಂತೆ ಅನಿರ್ದಿಷ್ಟ ಅವಧಿವರೆಗೆ ಮುಷ್ಕರ ಮಾಡುತ್ತಿದ್ದಾರೆ.

Leave a Reply

error: Content is protected !!
LATEST
ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ