CrimeNEWSನಮ್ಮರಾಜ್ಯರಾಜಕೀಯ

ಹಿಂದೂ ದೇವತೆಗಳಿಗೆ ಅವಮಾನ ಮಾಡಿದ್ದ ಆರೋಪ: ಮುರುಗೇಶ್​ ನಿರಾಣಿ ವಿರುದ್ಧ ಎಫ್‌ಐಆರ್‌

ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ಬೆಂಗಳೂರು: ಕಳೆದ ಜುಲೈನಲ್ಲಿ ನಡೆದ ಸಮಾರಂಭ ಒಂದರಲ್ಲಿ ಹಿಂದೂ ದೇವತೆಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ, ಮಾಜಿ ಸಚಿವ ಮುರುಗೇಶ್​ ನಿರಾಣಿ ವಿರುದ್ಧ ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಅಂದು ಆಯೋಜಿಸಿದ್ದ ಸಮಾರಂಭವೊಂದರಲ್ಲಿ​ ನಿರಾಣಿ ಹಿಂದೂ ದೇವತೆಗಳನ್ನು ಅವಮಾನಿಸುವ ರೀತಿಯಲ್ಲಿ ಮಾತನಾಡಿದ್ದರು. ರಾಮನನ್ನೂ ಅವಮಾನಿಸಿದ್ದ ಮುರುಗೇಶ್​ ನಿರಾಣಿ, ತುಂಬು ಗರ್ಭಿಣಿ ಯನ್ನು ಕಾಡಿಗಟ್ಟಿದ ರಾಮ ನಮ್ಮ ದೇವರು ಎಂದು ಅವಹೇಳನ ಮಾಡಿದ್ದರು ಎಂಬ ಆರೋಪ.

ಜತೆಗೆ ಹಾವು, ಹಂದಿ, ಕುದುರೆ, ಕತ್ತೆ, ನಾಯಿ, ಆಕಳು, ರತ್ನಪಕ್ಷಿ ಇನ್ನೂ ಹಲವು ದೇವರಾದರೆ ಕಾಗೆ, ಗೂಬೆ, ಬೆಕ್ಕು ಅಪಶಕುನ. ದೇವರಿಗೆ ದೇವರೆನಿಸಿಕೊಂಡಾತ ಇಂದ್ರನು ಮಾಡಲಾರದ ಅನಾಚಾರಗಳು ಎಷ್ಟು? ಆದರೂ ಆತ ನಮ್ಮ ದೇವರು. ಗಂಡನ ಸಂಪರ್ಕ ಪಡೆಯದೇ ಸೂರ್ಯನಿಂದ, ಯಮನಿಂದ, ಇಂದ್ರನಿಂದ, ವಾಯುವಿನಿಂದ ಪುತ್ರರನ್ನು ಪಡೆದ ಕುಂತಿ ದೇವತೆ ಎಂದು ಛೇಡಿಸಿದ್ದರು.

ಅಲ್ಲದೆ ಮಗಳನ್ನೇ ಮದುವೆಯಾದ ಬ್ರಹ್ಮ ನಮಗೆ ದೇವರು. 16 ಸಾವಿರ ಹೆಂಡತಿಯ ಹೊಂದಿರುವ ದನಾ ಕಾಯುವ ಕೃಷ್ಣ ನಮ್ಮ ದೇವರು. ಮುಗ್ಧ ಬಾಲಕಿಯರು ಸರೋವರದಲ್ಲಿ ಸ್ನಾನ ಮಾಡುವಾಗ ಸೀರೆ ಕದ್ದ ತುಡುಗ ನಮ್ಮ ದೇವರು. ತಲೆ ಮೇಲೆ ಒಬ್ಬಳು ತೊಡೆಯ ಮೇಲೆ ಒಬ್ಬಳನ್ನು ಇಟ್ಟುಕೊಂಡಾತ ನಮಗೆ ದೇವರು ಎಂದಿದ್ದರು.

ಇನ್ನೂ ಮುಂದುವರಿದು ಮಾತನಾಡಿದ ಅವರು, ಸನಾತನಿಗಳು ತಮ್ಮ ತೀಟೆಗೆ ನೂರೆಂಟು ಕಥೆಗಳನ್ನು ಕಟ್ಟಿ ಸ್ತ್ರೀಯರನ್ನು ಅವಹೇಳನ ಮಾಡಿದ್ದಾರೆ ಎಂದು ಕಿಡಿಕಾಡಿದ್ದರು. ಮುರುಗೇಶ್​ ನಿರಾಣಿ ಅವರ ಈ ಹೇಳಿಕೆ ನಂತರ ವಾಟ್ಸ್‌ ಆಪ್​ಗಳಲ್ಲೂ ಹರಿದಾಡಲು ಆರಂಭಿಸಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು.

ಹೀಗಾಗಿ ಮುರುಗೇಶ್​ ನಿರಾಣಿ ವಿರುದ್ಧ ರಾಜ್​ಕುಮಾರ್​ ಕಟುವ ಎಂಬವರು ಕಳೆದ ಜುಲೈನಲ್ಲೇ ನ್ಯಾಯಾಲಯದ ಮೊರೆ ಹೋಗಿ, ಬಿಜೆಪಿ ಶಾಸಕನ ವಿರುದ್ಧ ಎಫ್​ಐಆರ್​ ದಾಖಲಿಸುವಂತೆ ಮನವಿ ಮಾಡಲಾಗಿತ್ತು. ಈ ಪ್ರಕರಣದ ಸಂಬಂಧ ವಿಚಾರಣೆ ನಡೆಸಿರುವ ನ್ಯಾಯಾಲಯ ಮಾಜಿ ಸಚಿವರ ವಿರುದ್ಧ ಎಫ್​ಐಆರ್​ ದಾಖಲಿಸುವಂತೆ ಡಿ.26 ರಂದೇ ಕೊಡಿಗೇಹಳ್ಳಿ ಪೊಲೀಸರಿಗೆ ಸೂಚನೆ ನೀಡಿತ್ತು. ನ್ಯಾಯಾಲಯದ ಆದೇಶದಂತೆ ಕೊಡಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ