NEWSದೇಶ-ವಿದೇಶರಾಜಕೀಯ

ಕೇಂದ್ರ ಮಾಜಿ ಸಚಿವ ಡಾ.ರಘುವಂಶ ಪ್ರಸಾದ್ ಸಿಂಗ್ ನಿಧನ: ಪ್ರಧಾನಿ ಮೋದಿ, ಮಾಜಿ ಪ್ರಧಾನಿ ಎಚ್‌ಡಿಡಿ ಸಂತಾಪ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕೇಂದ್ರ ಮಾಜಿ ಸಚಿವ ಹಿರಿಯ ಸಮಾಜವಾದಿ ನಾಯಕ ಡಾ.ರಘುವಂಶ ಪ್ರಸಾದ್ ಸಿಂಗ್ (74) ಭಾನುವಾರ ಬೆಳಗ್ಗೆ ನಿಧನ ಹೊಂದಿದ್ದಾರೆ.

ಎದೆನೋವಿನಿಂದ ಬಳಲುತ್ತಿದ್ದ ಅವರನ್ನು ನ್ಯೂಡೆಲ್ಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

ಜೂನ್ 17ರಂದು ಅವರಿಗೆ ಕೋವಿಡ್-19 ಕಂಡುಬಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಿಹಾರ ರಾಜ್ಯದ ವೈಶಾಲಿ ಜಿಲ್ಲೆಯವರಾದ ಪ್ರಸಾದ್ ಸಿಂಗ್, ಯುಪಿಎ ಸರ್ಕಾರದ ಅವಧಿಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದರು.ಆರ್ ಜೆಡಿಯಲ್ಲಿ ಭಿನ್ನಾಭಿಪ್ರಾಯ ಬಂದು ಇತ್ತೀಚೆಗೆ ಅವರು ಪಕ್ಷ ತೊರೆದಿದ್ದರು. ನಾನು 32 ವರ್ಷ ಲಾಲೂ ಪ್ರಸಾದ್ ಯಾದವ್ ಜೊತೆಗಿದ್ದು, ಆದರೆ ಈಗ ನನ್ನನ್ನು ಕ್ಷಮಿಸಿ, ನಾನು ಬಿಟ್ಟುಹೋಗುತ್ತೇನೆ ಎಂದು ಜೈಲಿನಲ್ಲಿರುವ ಲಾಲೂ ಪ್ರಸಾದ್ ಯಾದವ್ ಗೆ ಪತ್ರ ಬರೆದಿದ್ದರು.

ಐದು ಬಾರಿ ವೈಶಾಲಿ ಕ್ಷೇತ್ರದ ಸಂಸದರಾಗಿದ್ದ ರಘುವಂಶ್ ಪ್ರಸಾದ್ 2014ರ ಚುನಾವಣೆಯಲ್ಲಿ ಮತ್ತು ಕಳೆದ ವರ್ಷದ ಚುನಾವಣೆಯಲ್ಲಿ ಕೂಡ ಸೋತಿದ್ದರು.

ಇತ್ತೀಚೆಗೆ ಮೂರು ಬಾರಿ ಬಿಹಾರ ಸಿಎಂ ನಿತೀಶ್ ಕುಮಾರ್ ಗೆ ಪತ್ರ ಬರೆದು ವೈಶಾಲಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ನಡೆಸುವಂತೆ ಮತ್ತು ನರೇಗಾ ಕಾನೂನಿಗೆ ತಿದ್ದುಪಡಿ ವಿಧೇಯಕವನ್ನು ತರುವಂತೆ ಒತ್ತಾಯಿಸಿದ್ದರು. ನೈತಿಕ ರಾಜಕೀಯ ಇತ್ತೀಚಿನ ದಿನಗಳಲ್ಲಿ ಅಧಃಪತನವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ಸಂತಾಪ
ಪ್ರಸಾದ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅವರ ನಿಧನವು ಬಿಹಾರ ರಾಜ್ಯದ ರಾಜಕೀಯ ಮತ್ತು ದೇಶದ ರಾಜಕೀಯ ಪರಂಪರೆಗೆ ತುಂಬಲಾರದ ನಷ್ಟ ಎಂದಿದ್ದಾರೆ.

ಮಾಜಿ ಪ್ರಧಾನಿ ಎಚ್‌.ಡಿ. ದೇವೆಗೌಡ ಸಂತಾಪ
ಕೇಂದ್ರ ಮಾಜಿ  ಸಚಿವ ಮತ್ತು ನನ್ನ ಆತ್ಮೀಯ ಗೆಳೆಯ ಡಾ.ರಘುವಂಶ ಪ್ರಸಾದ್ ಸಿಂಗ್ ಅವರ ನಿಧನದಿಂದ ನಾನು ತುಂಬಾ ದುಃಖಿತನಾಗಿದ್ದೇನೆ. ನರೇಗಾ ಯೋಜನೆ ಅನುಷ್ಠಾನಕ್ಕೆ ಅವರ ಕೊಡುಗೆ ಅಪಾರ. ದೇವರು ಅವರ ಕುಟುಂಬ ಮತ್ತು ಹಿತೈಷಿಗಳಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ದೇವರಲ್ಲಿ ಪ್ರಾರ್ಥಿಸಿ ಟ್ವೀಟ್‌ ಮಾಡಿದ್ದಾರೆ.

 

Leave a Reply

error: Content is protected !!
LATEST
ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ