NEWSನಮ್ಮರಾಜ್ಯವಿಜ್ಞಾನ

ಸಾರಿಗೆ ನೌಕರರಿಗೆ ಸೆಡ್ಡು ಹೊಡೆಯಲು ಸರ್ಕಾರ ಪ್ಲ್ಯಾನ್‌: ಖಾಸಗಿ ಚಾಲಕ-ನಿರ್ವಾಹಕರಿಂದ ಬಸ್‌ ಚಾಲನೆ?

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಷ್ಕರ ನಿರತ ನೌಕರರನ್ನು ಹತ್ತಿಕ್ಕಲು ಸರ್ಕಾರ ಎರಡು ಪ್ಲ್ಯಾನ್‌ಗಳನ್ನು ರೂಪಿಸಿದೆ.  ಅದರಲ್ಲಿ ಒಂದು ನಾಳೆಯೊಳಗೆ ಕರ್ತವ್ಯಕ್ಕೆ ಹಾಜರಾಗದಿದ್ದರೆ ಎಸ್ಮಾ ಜಾರಿಗೆ ಚಿಂತನೆ. ಮತ್ತೊಂದು ಕಡೆ ಸಾರಿಗೆ ಬಸ್‌ಗಳನ್ನು ಓಡಿಸಲು ಖಾಸಗಿ ಚಾಲಕ ನಿರ್ವಾಹಕರನ್ನು ಹಾಕಲು ಮುಂದಾಗಿದೆ.

ಈ ನಡುವೆ ಪ್ರತಿಭಟನ ನಿರತ ಸಾರಿಗೆ ನೌಕರರು ನಾವು ಈಗಾಗಲೇ ಸತ್ತು ಹೋಗಿದ್ದೇವೆ ನಮ್ಮ ಬೇಡಿಕೆ ಈಡೇರುವವರೆಗೂ ನಾವು ಯಾವುದೇ ಕಾರಣಕ್ಕೂ ಮುಷ್ಕರವನ್ನು ವಾಪಸ್‌ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಇನ್ನು ಮೆಜೆಸ್ಟಿಕ್‌ಗೆ ಎರಡು ಬಸ್‌ಗಳನ್ನು ತಂದು ನಿಲ್ಲಿಸಲಾಗಿದೆ. ಇನ್ನೊಂದು ಕಡೆ  ಪೊಲೀಸರ ಬಿಗಿ ಬದೋಬಸ್ತ್‌ನಲ್ಲಿ ಖಾಸಗಿ ಚಾಲಕ ಮತ್ತು ನಿರ್ವಾಹಕರನ್ನು ಹಾಕಿಕೊಂಡು ಶಿವಾಜಿನಗರ-ಕಾವಲು ಭೈರಸಂದ್ರ ಮಾರ್ಗವಾಗಿ ಚಾಲನೆ ಮಾಡಲಾಗಿದೆ. ಆದರೆ ನೌಕರರು ಮಾತ್ರ ಇದ್ಯಾವುದಕ್ಕೂ ಸೊಪ್ಪುಹಾಕುತ್ತಿಲ್ಲ.

ಖಾಸಗಿ ಚಾಲಕ ಮತ್ತು ನಿರ್ವಾಹಕರನ್ನು ಕರೆ ತಂದು ಬಸ್‌ ಚಾಲನೆ ಮಾಡುತ್ತಿದ್ದು, ಇದರಿಂದ ಕೆರಳುತ್ತಿರುವ ನೌಕರರನ್ನು ನಿಯಂತ್ರಿಸುವುದು ಹೇಗೆ?  ಮುಂದೆ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳುತ್ವುತಾರೋ ಎಂಬ  ಆತಂಕವು ಸರ್ಕಾರವನ್ನು ಕಾಡುತ್ತಿದೆ. ಈ ನಡುವೆಯೂ ಖಾಸಗಿ ಚಾಲಕ ಮತ್ತು ನಿರ್ವಾಹಕರ ಕರೆತಂದು ಮುಷ್ಕರ ಹತ್ತಿಕ್ಕುವ ಕೆಲಸಕ್ಕೆ ಮುಂದಾಗಿದೆ. ಆದರೆ ಇದು ಎಷ್ಟರ ಮಟ್ಟಿಗೆ ಯಶಸ್ವಿಯಾಗಲಿದೆ ಎಂಬುವುದು ಮಧ್ಯಾಹ್ನದ ಹೊತ್ತಿಗೆ ಗೊತ್ತಾಗಲಿದೆ.

1 Comment

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್