Please assign a menu to the primary menu location under menu

NEWSನಮ್ಮಜಿಲ್ಲೆ

ಹೋಂ ಕ್ವಾರಂಟೈನ್ ಇದ್ದವರಲ್ಲಿ ಕೊರೊನಾ ಪಾಸಿಟಿವ್ 

ವಿಜಯಪಥ ಸಮಗ್ರ ಸುದ್ದಿ

ಹಾಸನ:  ಜಿಲ್ಲೆಗೆ ಹೊರ ರಾಜ್ಯದಿಂದ ಬಂದು ಇನ್ಸ್ಟಿಟ್ಯೂಷನಲ್ ಕ್ವಾರಂಟೈನ್ ಅಲ್ಲಿ ಇದ್ದ 5 ಜನರಿಗೆ ಕೊವೀಡ್-19 ಪಾಸಿಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್  ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿಂದು  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಈ 5 ಜನರು ಚನ್ನರಾಯಪಟ್ಟಣ ತಾಲೂಕಿಗೆ ಬಂದಿದ್ದು, ಅವರಲ್ಲಿ ಪತಿ-ಪತ್ನಿ ಇಬ್ಬರು ಮಕ್ಕಳು ಸೇರಿದ 4 ಜನ ಸೋಂಕಿತರು ಒಂದೇ ಕುಟುಂಬದವರಾಗಿದ್ದು, ಮುಂಬೈನಿಂದ ಮೇ 10 ರಂದು ಬಾಡಿಗೆ ಕಾರಿನ ಮೂಲಕ ಜಿಲ್ಲೆಗೆ ಬಂದಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಪತಿ ಪತ್ನಿ ಸೇರಿದಂತೆ ಇಬ್ಬರು ಮಕ್ಕಳು ಕೊರೊನಾ ಸೋಂಕಿತರಾಗಿದ್ದಾರೆ. ಇವರು ಜಿಲ್ಲೆಗೆ ಆಗಮಿಸಿದ ದಿನವೇ ಹೋಂ ಕ್ವಾರಂಟೈನ್ ಮಾಡಿದ್ದರಿಂದ ಜಿಲ್ಲೆಯ ಯಾವುದೇ ಪ್ರದೇಶದಲ್ಲಿ ಸಂಚಾರ ಮಾಡಿರುವುದಿಲ್ಲ ಎಂದು ಹೇಳಿದ್ದಾರೆ.

ಈವರೆಗೂ ಮುಂಬೈ, ಮಹಾರಾಷ್ಟ್ರದಿಂದ 415 ಜನರು ಜಿಲ್ಲೆಗೆ ಆಗಮಿಸಿದ್ದು, ಎಲ್ಲರ ಗಂಟಲು ದ್ರವವನ್ನು ಕಡ್ಡಾಯವಾಗಿ ಕೊರೊನಾ ತಪಾಸಣೆಗೆ ಒಳಪಡಿಸಿಲಾಗುವುದು ಎಂದರಲ್ಲದೆ, ಸೋಂಕಿತರನ್ನು ಹೋಂ ಕ್ವಾರಂಟೈನ್ ಮಾಡಿದ್ದ ವಸತಿ ನಿಲಯದಲ್ಲಿರುವ ಇತರ ಶಂಕಿತರನ್ನು ಪ್ರಾಥಮಿಕ ಹಂತದ ಸಂಪರ್ಕಿತರೆಂದು ಪರಿಗಣಿಸಿ ಅವರನ್ನು ಕೋವಿಡ್-19 ಜಿಲ್ಲಾಸ್ಪತ್ರೆಗೆ ವರ್ಗಾಹಿಸಲಾಗಿರುವುದು ಎಂದು ತಿಳಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ  ಮಾತನಾಡಿ ಸೋಂಕಿತರ ಟ್ರಾವೇಲ್ ಹಿಸ್ಟರಿ ಮತ್ತು ಅವರನ್ನು ಕರೆತಂದ ಕಾರ್ ಚಾಲಕನ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದರಲ್ಲದೆ, ಪಾಸ್ ಪಡೆದು ಜಿಲ್ಲೆಗೆ ಹೊರ ರಾಜ್ಯಗಳಿಂದ ಬರುವವರನ್ನು ಚೆಕ್‍ಪೋಸ್ಟ್‍ಗಳಲ್ಲಿಯೇ ತಡಿದು ತಪಾಸಣೆ ನಡೆಸಿ ಅವರನ್ನು ನೇರವಾಗಿ ಇನ್ಟ್ಸಿಟ್ಯೂಷನಲ್ ಕ್ವಾರಂಟೈನ್‍ಗೆ ಕಳುಹಿಸಲಾಗುವುದು ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಬಿ.ಎ. ಪರಮೇಶ್  ಸುದ್ದಿಗೋಷ್ಠಿಯಲ್ಲಿ ಇದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
Kho Kho World Cup 2025: ತಿ.ನರಸೀಪುರದ ಚೈತ್ರಾ ನಾಡು, ದೇಶದ ಕೀರ್ತಿಯ ಮುಗಿಲೆತ್ತೆಕ್ಕೆ ಹಾರಿಸಿದ ಅಪ್ಪಟ ಗ್ರಾಮೀಣ ಪ... ಜಗಜಿತ್ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ: ಕುರುಬೂರ್ ಶಾಂತಕುಮಾರ್ KSRTC ಬಸ್‌ ಬ್ರೇಕ್‌ ವೈಫಲ್ಯಗೊಂಡು ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ BMTC ಎಲೆಕ್ಟ್ರಿಕ್ ಬಸ್ ಬ್ರೇಕ್ ವೈಫಲ್ಯ: ಡಾಬಾ, ಬೀಡಾ ಅಂಗಡಿಗೆ ಡಿಕ್ಕಿ KSRTC: ಅಧಿಕಾರಿಗಳು, ಸಿಬ್ಬಂದಿಗಳಿಗೂ ಕಿರುಕುಳ ನೀಡುತ್ತಿದ್ದ ಸಂಚಾರಿ ನಿರೀಕ್ಷಕ ಉಮೇಶ್‌  ವಜಾ- ಸಿಟಿಎಂ ಆದೇಶ ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ