NEWSನಮ್ಮರಾಜ್ಯ

ಕೊರೊನಾ ಪೀಡಿತ ವ್ಯಕ್ತಿ ನಾಪತ್ತೆ

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಕೊರೊನಾ ಪಾಸಿಟಿವ್‌ ವ್ಯಕ್ತಿ ನಾಪತ್ತೆಯಾಗಿದ್ದು, ಆತನ ಪತ್ತೆಕಾರ್ಯದಲ್ಲಿ ಕೊರೊನಾ ವಾರಿಯರ್ಸ್‌ ನಿರತರಾಗಿದ್ದು, ಇನ್ನು ಪತ್ತೆಯಾಗಿಲ್ಲ.

ಬೆಂಗಳೂರಿನಿಂದ ಹಿರೇಕೆರೂರ ತಾಲೂಕಿನ ಪರ್ವತಸಿದ್ಧಗೇರಿ ಸ್ವ ಗ್ರಾಮ ಮರಳಿ ತಂದೆ-ತಾಯಿಯೊಂದಿಗೆ ವಾಸವಾಗಿದ್ದ 29 ವರ್ಷದ ಯುವಕ  ಜುಲೈ 2 ರಂದು ಸ್ವತಃ ಜ್ವರ ಪೀಡಿತನೆಂದು ತಾನೇ ಹಿರೇಕೆರೂರು ಸರ್ಕಾರಿ ಆಸ್ಪತ್ರೆಯಲ್ಲಿ ಸ್ವಾಬ್ ಪರೀಕ್ಷೆ ಮಾಡಿಸಿಕೊಂಡಿದ್ದ.

ಜುಲೈ 4 ರಂದು ಕೋವಿಡ್ ದೃಢಪಟ್ಟಿರುತ್ತದೆ. ಜೂನ್ 15, 16 ರಂದು ದಾವಣಗೆರೆ ಹಾಗೂ ಜೂನ್ 24 ರಂದು ಶಿವಮೊಗ್ಗಕ್ಕೆ ಪ್ರಯಾಣಿಸಿದ ಮಾಹಿತಿ ಇದೆ.  ಆ ವ್ಯಕ್ತಿ ನಾಪತ್ತೆಯಾಗಿದ್ದು, ಸದ್ಯ ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದೆ.

ಹಾವೇರಿ ನಗರದ ಶಹರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 59 ವರ್ಷದ ಪುರುಷನಿಗೆ ಜುಲೈ 1 ರಂದು ಜ್ವರ ಹಾಗೂ ನೆಗಡಿ ಕಾಣಿಸಿಕೊಂಡ ಸಂಬಂಧ ಚಿಕಿತ್ಸೆಗಾಗಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ತೆರಳಿ ಸ್ವಾಬ್ ಪರೀಕ್ಷೆ ಮಾಡಿಸಿಕೊಂಡು ಹೋಂ ಕ್ವಾರಂಟೈನ್‍ಗೆ ಒಳಗಾಗಿದ್ದ. ಜುಲೈ 4 ರಂದು ಪಾಸಿಟಿವ್ ದೃಢಪಟ್ಟಿರುತ್ತದೆ. ನಿಗದಿತ  ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸೋಂಕಿತರ  ನಿವಾಸದ  100 ಮೀ.ಪ್ರದೇಶವನ್ನು ಕಂಟೈನ್‍ಮೆಂಟ್ ಜೋನ್ ಆಗಿ ಪರಿವರ್ತಿಸಲಾಗಿದೆ. ನಗರದ ಪ್ರದೇಶದಲ್ಲಿ ವಾಸಿಸುವ ಸೋಂಕಿತರ ನಿವಾಸದ   200 ಮೀಟರ್ ಪ್ರದೇಶ ಹಾಗೂ ಗ್ರಾಮೀಣ ಪ್ರದೇಶವಾದ ತಿಪ್ಪಾಯಿಕೊಪ್ಪ, ತಿಳವಳ್ಳಿ, ಕರ್ಜಗಿ, ಕನವಳ್ಳಿ, ಪರ್ವತಸಿದ್ಧಗೇರಿ ಗ್ರಾಮಗಳನ್ನು ಸಂಪೂರ್ಣವಾಗಿ ಬಫರ್ ಜೋನ್ ಆಗಿ ಪರಿಗಣಿಸಲಾಗಿದೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ