NEWSಆರೋಗ್ಯ

ರಕ್ತ ಪಡೆಯಲು ಗರ್ಭಿಣಿಗೆ ಆರೋಗ್ಯ ಸಮಿತಿ ನೆರವು

ವಿಜಯಪಥ ಸಮಗ್ರ ಸುದ್ದಿ

ಚಿತ್ರದುರ್ಗ: ಚಳ್ಳಕೆರೆ ನಗರದ ಹಳೇ ನಗರದಲ್ಲಿ ವಾಸವಿರುವ  8 ತಿಂಗಳ ಗರ್ಭಿಣಿ ಶ್ವೇತ ಗಂಡ ರಾಜಕುಮಾರ್, ಇವರ ರಕ್ತದಲ್ಲಿ ಹಿಮೋಗ್ಲೊಬಿನ್ ಕಡಿಮೆ ಇದ್ದು, ರಕ್ತ ಖರೀದಿಸಿ ಪಡೆಯುವ ಸಲುವಾಗಿ ಚಳ್ಳಕೆರೆ ಮಹಿಳಾ ಆರೋಗ್ಯ ಸಮಿತಿಯಿಂದ 2 ಸಾವಿರ ರೂ. ಗಳ ನೆರವನ್ನು ತಹಸೀಸಿಲ್ದಾರ್ ಮಲ್ಲಿಕಾರ್ಜುನ್ ಗರ್ಭಿಣಿಗೆ ವಿತರಿಸಿದರು.

28 ವರ್ಷ ವಯಸ್ಸಿನ ಶ್ವೇತ ಅವರ ಆರೋಗ್ಯ ತಪಾಸಣೆ ನಡೆಸುವ ಸಲುವಾಗಿ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ  ಸಿ. ಸುಶೀಲ ಹಾಗೂ ಆಶಾ ಕಾರ್ಯಕರ್ತೆಯಾದ ಪದ್ಮಾವತಿ ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ. ಶಮಾಪರ್ವಿನ್ ಅವರಲ್ಲಿ ಕರೆದುಕೊಂಡು ಬಂದಿದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

ಆರೋಗ್ಯ ತಪಾಸಣೆ ಸಂದರ್ಭದಲ್ಲಿ ಮಹಿಳೆಯ ರಕ್ತದಲ್ಲಿ ಹಿಮೋಗ್ಲೋಬಿನ್ ಅಂಶ ಕೇವಲ 8 ಗ್ರಾಂ  ಇರುವುದನ್ನು ತಿಳಿದುಬಂದಿದ್ದು, ಮಹಿಳೆಗೆ ಕೂಡಲೆ ರಕ್ತ ಪಡೆಯುವಂತೆ ವೈದ್ಯರು ಶಿಫಾರಸು ಮಾಡಿದ್ದರು.  ಬಡ ಕುಟುಂಬದ ಮಹಿಳೆಗೆ ರಕ್ತ ಖರೀದಿಸಿ ಹಾಕಿಸಿಕೊಳ್ಳಲು ಮಹಿಳಾ ಆರೋಗ್ಯ ಸಮಿತಿ (ಮಾಸ್) ಯಿಂದ  2000 ರೂ.ಗಳನ್ನು  ತಹಸೀಲ್ದಾರ್ ಮಲ್ಲಿಕಾರ್ಜುನ ಗುರುವಾರ ವಿತರಿಸಿದರು.

ತಾಲೂಕು ವೈದ್ಯಾಧಿಕಾರಿ ಡಾ. ಪ್ರೇಮಸುಧಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಿ. ಚಿದಾನಂದಪ್ಪ, ಸಿ.ಡಿ.ಪಿ.ಓ  ಮೋಹನಕುಮಾರಿ, ನಗರ ಆರೋಗ್ಯ ಕೇಂದ್ರದ ವೈದ್ಯ ಡಾ. ಮುಸ್ತಾಫ್ ಇದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ