NEWSಆರೋಗ್ಯನಮ್ಮಜಿಲ್ಲೆ

ಭಯಬಿಟ್ಟು ಕೋವಿಡ್‌ ಲಸಿಕೆ ಪಡೆಯಿರಿ: ಮಾಜಿ ಶಾಸಕ ಕೆ. ವೆಂಕಟೇಶ್

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಪಿರಿಯಾಪಟ್ಟಣ: ಸಾರ್ವಜನಿಕರು ಆರೋಗ್ಯದ ಸುರಕ್ಷತೆಗಾಗಿ ಭಯದಿಂದ ಹೊರಬಂದು ಕಡ್ಡಾಯವಾಗಿ ಕೋವಿಸೀಲ್ಡ್ ಲಸಿಕೆಯನ್ನು ಪಡೆಯುವಂತೆ ಮಾಜಿ ಶಾಸಕ ಕೆ ವೆಂಕಟೇಶ್ ತಿಳಿಸಿದರು.

ಪಟ್ಟಣದ ಆಸ್ಪತ್ರೆಯಲ್ಲಿ ಮಂಗಳವಾರ ಕೋವಿಸೀಲ್ಡ್ ಲಸಿಕೆ ಪಡೆದು ಮಾತನಾಡಿದರು.

ಜಗತ್ತು ಕಂಡು ಕೇಳರಿಯದ ರೀತಿಯಲ್ಲಿ ಕೊರೊನಾ ವೈರಸ್ ಆವರಿಸಿ ಜನರನ್ನು ಸಂಕಷ್ಟಕ್ಕೀಡಿಮಾಡಿದೆ. ಇತ್ತೀಚೆಗೆ ಲಸಿಕೆ ಬಂದ ನಂತರ ಜನತೆ ಭಯದಿಂದ ಹೊರಬಂದು ಚೇತರಿಸಿಕೊಳ್ಳುತ್ತಿರುವುದು ಕಂಡು ಬರುತ್ತಿದೆ ಆದರೂ ಕೊರೊನಾ ಸಮಸ್ಯೆ ದೇಶದ ಅನೇಕ ಭಾಗಗಳಲ್ಲಿ ಇನ್ನೂ ಜನತೆಯನ್ನು ಸಂಕಷ್ಟಕ್ಕೆ ತಳ್ಳುತ್ತಿರುವುದು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಜನರು ಮುಂದೆ ಬಂದು ವೈದ್ಯರ ಸಲಹೆ ಮತ್ತು ಅಗತ್ಯ ಚಿಕಿತ್ಸಾ ವಿಧಾನಗಳನ್ನು ಪಡೆಯುವಂತೆ ಸೂಚಿಸಿದರು.

ತಾಲೂಕು ಆರೋಗ್ಯ ಅಧಿಕಾರಿ ಡಾ.ಶರತ್ ಬಾಬು ಮಾತನಾಡಿ, ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾನುವಾರ ಹೊರತುಪಡಿಸಿ ವಾರದ ಎಲ್ಲಾ ದಿನಗಳಲ್ಲಿಯೂ ಲಸಿಕೆ ನೀಡುತ್ತಿದ್ದು ಸಾರ್ವಜನಿಕರು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು.

ಅಲ್ಲದೆ ತಾಲೂಕಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಸೀಲ್ಡ್ ಲಸಿಕೆ ನೀಡಗಾಲುತ್ತಿದೆ. ಆದ್ದರಿಂದ 60 ವರ್ಷ ಮೇಲ್ಪಟ್ಟವರು ಹಾಗೂ 45 ರಿಂದ 59 ವರ್ಷ ಮಧುಮೇಹ ಮತ್ತು ರಕ್ತದೊತ್ತಡ ಇರುವವರು ಆಧಾರ್ ಕಾರ್ಡ್ ಅಥವಾ ಮತದಾರರ ಗುರುತಿನ ಚೀಟಿ ತೋರಿಸಿ ಲಸಿಕೆ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಕಾಂಗ್ರೆಸ್ ಮುಖಂಡ ಬಿ.ಜೆ.ಬಸವರಾಜ್, ಭುಜಂಗ, ಬಿರ್ಲಾ ಹರೀಶ್ ಆಸ್ಪತ್ರೆಯ ಸಿಬ್ಬಂದಿಗಳಾದ ಅಣ್ಣೇಗೌಡ ಶೇಷಗಿರಿ ಸೇರಿದಂತೆ ಇತರರು ಇದ್ದರು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ