NEWSನಮ್ಮಜಿಲ್ಲೆನಮ್ಮರಾಜ್ಯ

ಕೊಡಗು ಜಿಲ್ಲೆಯಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮಡಿಕೇರಿ: ಕೊಡಗು ಜಿಲ್ಲೆಯ ಗಡಿಭಾಗ ಶನಿವಾರಸಂತೆ ಸುತ್ತಮುತ್ತ ಶುಕ್ರವಾರ ಆಲಿಕಲ್ಲು ಸಹಿತ ಭಾರೀ ಮಳೆಯಾಗಿದೆ. ಅದರಲ್ಲೂ ಶನಿವಾರಸಂತೆ ಸಮೀಪದ ಹಳ್ಳಿಯಲ್ಲಿ ಭಾರಿ ಗಾತ್ರದ ಆಲಿಕಲ್ಲು ಸಹಿತ ಮಳೆಯಾಗಿದ್ದು ರಸ್ತೆ ಮೇಲೆ ಅರ್ಧ ಅಡಿಯಷ್ಟು ಆಲಿಕಲ್ಲುಗಳು ಬಿತ್ತಿದ್ದನ್ನು ನೂರಾರು ಗ್ರಾಮಸ್ಥರು ತಮ್ಮ ಮೊಬೈಲ್‌ ಫೋನ್‌ಗಳಲ್ಲಿ ಸೆರೆಹಿಡಿದಿದ್ದಾರೆ.

ಇದು ಪ್ರಕೃತಿಯ ವಿಚಿತ್ರವೋ ಅಥವಾ ವಿಪರ್ಯಾಸವೋ ಗೊತ್ತಿಲ್ಲ. ಆದರೆ, ಈ ರೀತಿ ಮಳೆಯಾಗಿರುವುದರಿಂದ ರೈತರ ಬೆಳೆದಿರುವ ಫಸಲಿಗೆ ಹಾನಿಯಾಗಿರುವುದು ಖಚಿತ. ಇಂಥ ಮಳೆಯಾಗುವುದರಿಂದ ರೈತರ ಬದುಕು ಮೂರಾಬಟ್ಟೆಯಾಗುತ್ತದೆ. ಆದ್ದರಿಂದ ಸರ್ಕಾರ ಇತ್ತ ಕಣ್ಣುತೆರೆದು ನೋಡಬೇಕಾಗಿದೆ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಇನ್ನು ಈ ಕುರಿತು ಅನಿಸಿಕೆ ಹಂಚಿಕೊಂಡರು ಸ್ಥಳೀಯರು ತಾವು ಜೀವಮಾನದಲ್ಲೇ ಇಷ್ಟೊಂದು ಆಲಿಕಲ್ಲು ಬಿದ್ದಿದ್ದನ್ನು ನೋಡೇ ಇಲ್ಲ ಎಂದು ಆಶ್ಚರ್ಯ ಪಡಿಸಿದ್ದಾರೆ ಇಂದು ಬೆಳಗ್ಗೆ 11 ಗಂಟೆಗೆ ಆರಂಭಗೊಂಡ ಮುಸಲಧಾರೆ ಒಂದೂವರೆ ಗಂಟೆಗಳು ಬಿದ್ದಿದ್ದು, ಇದು ಪ್ರಕೃತಿಯ ಮುನಿಸು ಇರಬಹುದು ಎಂದು ಹೇಳಲಾಗುತ್ತಿದೆ.

ಸುಮಾರು ಒಂದೂವರೆ ಇಂಚಿನಷ್ಟು ಮಳೆ ಸುರಿದಿದ್ದು ಇದರಿಂದ ಕಾಳುಮೆಣಸು ಬೆಳೆಗೆ ಹಾನಿಯಾಗಿದೆ ಎಂದು ರೈತ ಮಧುಸೂದನ್‌ ಎಂಬುವರು ಹೇಳಿದ್ದಾರೆ. ಕಾಳುಮೆಣಸಿಗೆ ಈಗ ಕೊಯ್ಲಿನ ಸಮಯ. ಬಳಿಯಲ್ಲಿದ್ದ ಮೆಣಸು ಕೆಳಕ್ಕೆ ಬಿದ್ದಿದೆ. ಈಗಲೇ ಕಾಳುಮೆಣಸಿಗೂ ಬೆಲೆ ಕುಸಿದಿದ್ದು, 1ಕೆಜಿಗೆ 330 ರೂ.ಗಳಿದೆ. ಈ ಸಂದರ್ಭದಲ್ಲಿ ಬೆಳೆ ಹಾನಿಯಾದರೆ ರೈತರ ಬದುಕು ಕಷ್ಟ ಎಂದು ಹೇಳಿದ್ದಾರೆ.

ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ರಸ್ತೆಮೇಲೆ, ಮನೆಗಳ ಸುತ್ತಮುತ್ತ ಬಿದ್ದಿರುವ ಭಾರಿ ಪ್ರಮಾಣದ ಆಲಿಕಲ್ಲುಗಳ ದೃಶ್ಯ ವೈರಲ್ ಆಗಿದೆ.

ಬೆಂಗಳೂರಿನಲ್ಲೂ ಮಳೆ
ಇನ್ನು ಸಂಜೆ ಸುಮಾರು 5.45ರಲ್ಲಿ ಬೆಂಗಳೂರಿನ ಹಲವೆಡೆ ಸಾಧಾರಣ ಮಳೆಯಾಗಿದೆ. ಮಂಡ್ಯ, ಮೈಸೂರು, ಹಾಸನ, ಹುಬ್ಬಳ್ಳಿ ಸೇರಿದಂತೆ ಹಲವೆಡೆ ಮಳೆಯಾಗಿದ್ದು, ಈ ಮಳೆಯಿಂದ ಲಾಭಕ್ಕಿಂತ ಲಾಸ್‌ ಹೆಚ್ಚು ಎಂದು ಹೇಳಲಾಗುತ್ತಿದೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್