NEWSನಮ್ಮರಾಜ್ಯರಾಜಕೀಯ

ಬಿಜೆಪಿಯಲ್ಲಿ ವಲಸೆ – ಮೂಲ ಕಿತ್ತಾಟ: ಎಂಟಿಬಿ-ಎಂಪಿಆರ್‌ ವಾಗ್ಸಮರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಲ್ಲಿ ಯಾರ ಪಾತ್ರ ದೊಡ್ಡದು ಎಂಬ ಬಿಸಿಬಿಸಿ ಚರ್ಚೆಗೆ ಮುಖ್ಯಮಂತ್ರಿ ಬಿಎಸ್‌ವೈ ಅವರ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ನಾಂದಿ ಹಾಡಿದ್ದಾರೆ. ಬಿಜೆಪಿ 105 ಶಾಸಕರು ಇಲ್ಲದಿದ್ದರೆ ಸರ್ಕಾರದ ರಚನೆ ಆಗುತ್ತಿರಲಿಲ್ಲ ಎಂದು ಬಿಜೆಪಿಗೆ ವಲಸೆ ಬಂದ 17 ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದಲ್ಲಿ ಈ ಕುರಿತು ಹೇಳಿಕೆ ನೀಡಿರುವ ರೇಣುಕಾಚಾರ್ಯ ಅವರಿಗೆ ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ತಿರುಗೇಟು ನೀಡಿದ್ದು, 105 ಶಾಸಕರು ಇದ್ದಾಗ ಸರ್ಕಾರ ರಚನೆ ಏಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದ್ದಾರೆ.

ರೇಣುಕಾಚಾರ್ಯ ಹೇಳಿರುವುದೇನು? ರಾಜ್ಯದಲ್ಲಿ ಬಿಜೆಪಿ ಶಾಸಕರು ಇರುವುದರಿಂದಲೇ ಸರ್ಕಾರ ಅಧಿಕಾರಕ್ಕೆ ಬಂದಿದೆ. ಜತೆಗೆ 17 ಶಾಸಕರ ಬಗ್ಗೆ ಗೌರವವಿದೆ. ಹೀಗಾಗಿ ಅವರಿಗೆ ಪಕ್ಷದಲ್ಲಿ ಒಳ್ಳೇ ಸ್ಥಾನಮಾನಗಳನ್ನು ನೀಡಲಾಗಿದೆ. ಆದರೆ, 105 ಶಾಸಕರು ಇಲ್ಲದಿದ್ದರೆ ಬಿಜೆಪಿ ಸರ್ಕಾರ ಬರುತ್ತಿರಲಿಲ್ಲ ಎಂಬುದನ್ನು ಯಾರೂ ಮರೆಯಬಾರದು ಎಂದು ನಮ್ಮಿಂದಲೇ ಸರ್ಕಾರ ರಚನೆಯಾಗಿದೆ ಎಂದು ಹೇಳಿಕೊಳ್ಳುತ್ತಿರುವ ವಲಸೆ ಬಂದ ಶಾಸಕರಿಗೆ ಚಾಟಿ ಬೀಸಿದರು.

ಜತೆಗೆ ಇನ್ನು ಮುಂದೆ ಯಾರೂ ನನ್ನಿಂದಲೇ ಸರಕಾರ ಬಂದಿದೆ ಎಂದು ಹೇಳಿಕೊಳ್ಳಬಾರದು. 105 ಶಾಸಕರು ಮೊದಲು ನಂತರ ಉಳಿದವರು ಎಂದು ಎಚ್ಚರಿಕೆ ನೀಡಿದ್ದಾರೆ.

ಎಂಟಿವಿ ತಿರುಗೇಟು? ಬಿಜೆಪಿಯಲ್ಲಿ 105 ಶಾಸಕರು ಇದ್ದಾಗ ಸರಕಾರ ರಚನೆ ಮಾಡಲು ಏಕೆ ಸಾಧ್ಯವಾಗಲಿಲ್ಲ. 17 ಶಾಸಕರು ಬಂದಿದ್ದರಿಂದಲೇ ಸರ್ಕಾರ ರಚನೆ ಮಾಡಲು ಸಾಧ್ಯವಾಗಿದೆ ಎಂಬುದನ್ನು ಮರೆಯಬಾರದು.

ಇನ್ನು ನಾವೆಲ್ಲ ನಮ್ಮ ಹಿಂದಿನ ಪಕ್ಷಗಳಿಗೆ ರಾಜೀನಾಮೆ ನೀಡಿ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಪಡೆದಿದ್ದೇವೆ ಈಗ ನಾವು ಕೂಡ ಬಿಜೆಪಿಯವರೇ ಎಂದು ಎಂಟಿಬಿ ನಾಗರಾಜ್ ತಿರುಗೇಟು ನೀಡಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ