NEWSದೇಶ-ವಿದೇಶರಾಜಕೀಯ

ಕಚ್ಚಾ ಸೋಯಾ, ತಾಳೆ, ಸೂರ್ಯಕಾಂತಿ ಎಣ್ಣೆಗಳ ಕಸ್ಟಮ್ಸ್ ಸುಂಕ ರದ್ದು: ಖಾದ್ಯತೈಲ ಬೆಲೆಯಲ್ಲಿ ಇಳಿಕೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕಚ್ಚಾ ತಾಳೆ, ಸೋಯಾ ಮತ್ತು ಸೂರ್ಯಕಾಂತಿ ಎಣ್ಣೆ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರ ಕೃಷಿ ಸೆಸ್ ಪ್ರಮಾಣವನ್ನು ಕಡಿತ ಮಾಡಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

2022ರ ಮಾರ್ಚ್ 31ರವರೆಗೆ ಮೂಲ ಕಸ್ಟಮ್ಸ್ ಸುಂಕ ಹಾಗೂ ಕೃಷಿ ಸೆಸ್ ಅನ್ನು ಕಡಿತಗೊಳಿಸಿರುವ ಕ್ರಮವು ಹಬ್ಬದ ಸೀಸನ್ ನಲ್ಲಿ ಬೆಲೆಗಳನ್ನು ತಗ್ಗಿಸಲು ಮತ್ತು ದೇಶೀಯ ಲಭ್ಯತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಸುಂಕ ಕಡಿತವು ಅಕ್ಟೋಬರ್ 14ರಿಂದ ಜಾರಿಗೆ ಬರಲಿದ್ದು, ಮಾರ್ಚ್ 31, 2022 ರವರೆಗೆ ಜಾರಿಯಲ್ಲಿರುತ್ತದೆ ಎಂದು ಪರೋಕ್ಷ ತೆರಿಗೆಮತ್ತು ಕೇಂದ್ರೀಯ ಕಸ್ಟಮ್ಸ್ ಮಂಡಳಿ(ಸಿಬಿಐಸಿ) ಅಧಿಸೂಚನೆಯಲ್ಲಿ ತಿಳಿಸಿದೆ.

ಕಚ್ಚಾ ತಾಳೆ ಎಣ್ಣೆ ಮೇಲಿನ ಕೃಷಿ ಮೂಲಸೌಕರ್ಯ ಅಭಿವೃದ್ಧಿ ಸೆಸ್(ಎಐಡಿಸಿ) ಈಗ ಶೇಕಡ 7.5ರಷ್ಟಾಗಿದೆ. ಜೊತೆಗೆ ಕಚ್ಚಾ ಸೋಯಾಬೀನ್ ಎಣ್ಣೆ ಮತ್ತು ಕಚ್ಚಾ ಸೂರ್ಯಕಾಂತಿ ಎಣ್ಣೆ ದರವು ಶೇಕಡ 5ರಷ್ಟಾಗಿದೆ.

ಕಡಿತದ ನಂತರ, ತಾಳೆ, ಸೋಯಾಬೀನ್ ಮತ್ತು ಸೂರ್ಯಕಾಂತಿ ಎಣ್ಣೆಯ ವಿಧಗಳ ಮೇಲೆ ಪರಿಣಾಮಕಾರಿ ಕಸ್ಟಮ್ಸ್ ಸುಂಕ ಕ್ರಮವಾಗಿ ಶೇ .8.25, ಶೇ .5.5 ಮತ್ತು ಶೇ .5.5 ಆಗಿರುತ್ತದೆ.

ಇದಲ್ಲದೆ, ಸಂಸ್ಕರಿಸಿದ ಸೂರ್ಯಕಾಂತಿ, ಸೋಯಾಬೀನ್, ಪಾಮೋಲಿನ್ ಮತ್ತು ತಾಳೆ ಎಣ್ಣೆಯ ಮೂಲ ಕಸ್ಟಮ್ಸ್ ಸುಂಕವನ್ನು ಪ್ರಸ್ತುತ ಶೇಖಡ 32.5ರಿಂದ 17.5ಕ್ಕೆ ತಗ್ಗಿಸಲಾಗಿದೆ.

ಹೀಗಾಗಿ ಇಂದಿನಿಂದಲೇ (ಅ.14) ಎಲ್ಲ ಖಾದ್ಯ ತೈಲ ಬೆಲೆಯಲ್ಲೂ ಇಳಿಕೆಯಾಗಲಿದೆ. ಇದು ಮಾರ್ಚ್‌ 2022ರವರೆಗೂ ಮುಂದುವರಿಯಲಿದೆ.

Leave a Reply

error: Content is protected !!
LATEST
ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ