NEWSದೇಶ-ವಿದೇಶನಮ್ಮರಾಜ್ಯ

ಮಾಲಿನ್ಯ ತಡೆಗೆ ಕಠಿಣ ಕ್ರಮ ತೆಗೆದುಕೊಂಡ ದೆಹಲಿ ಸರ್ಕಾರ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ವಾಯು ಮಾಲಿನ್ಯವು ದೆಹಲಿಯಲ್ಲಿ ಮಿತಿ ಮಿರುತ್ತಿರುವ ಹಿನ್ನೆಲೆಯಲ್ಲಿ ಮಾಲಿನ್ಯ ತಡೆಗೆ ದೆಹಲಿ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ.

ವಾಯುಮಾಲಿನ್ಯ ತಡೆಗೆ ಕಠಿಣ ಕ್ರಮ ಜರುಗಿಸಬೇಕು ಎಂದು ಸುಪ್ರೀಂಕೋರ್ಟ್ ನೀಡಿದ 1 ದಿನ ಗಡುವಿನ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ ನೇತೃತ್ವದಲ್ಲಿ ನಡೆದ ದೆಹಲಿ ಸುತ್ತಮುತ್ತಲಿನ 4 ರಾಜ್ಯಗಳ ಸಭೆಯಲ್ಲಿ ಕೆಲವು ಮಹತ್ವದ ನಿರ್ಧಾರಗಳನ್ನು ದೆಹಲಿ ಸರ್ಕಾರ ಕೈಗೊಂಡಿದೆ.

ದೆಹಲಿ, ರಾಜಸ್ತಾನ, ಹರಿಯಾಣ, ಉತ್ತರಪ್ರದೇಶ ಹಾಗೂ ಪಂಜಾಬ್ ರಾಜ್ಯಗಳ ಸಭೆ ನಡೆದಿದೆ. ಬಳಿಕ ತಡರಾತ್ರಿ ವಾಯು ಗುಣಮಟ್ಟ ಆಯೋಗವು ಮುಂದಿನ ಕೆಲವು ದಿನಗಳ ಮಟ್ಟಿಗೆ ಅನ್ವಯ ಆಗುವಂತೆ ಕೆಲವು ಕ್ರಮ ಪ್ರಕಟಿಸಿದೆ.

ಕೈಗೊಂಡ ನಿರ್ಣಯಗಳು:  ದೆಹಲಿ ಹಾಗೂ ಸುತ್ತಮುತ್ತಲಿನ ವಲಯದಲ್ಲಿ ಮಾಲಿನ್ಯಕಾರಕ ಇಂಧನ ಬಳಕೆ ಉದ್ದಿಮೆಗಳು ಕಾರ್ಯ ನಿರ್ವಹಿಸಕೂಡದು

11 ಉಷ್ಣವಿದ್ಯುತ್ ಸ್ಥಾವರಗಳ ಪೈಕಿ 5 ಮಾತ್ರ ನವೆಂಬರ್ 30ರವರೆಗೆ ಕೆಲಸ ಮಾಡಬೇಕು

ನವೆಂಬರ್ 31ರವರೆಗೆ ಅಗತ್ಯವಸ್ತು ಸಾಗಾಣೆ ಟ್ರಕ್ ಹೊರತುಪಡಿಸಿ ಉಳಿದ ಟ್ರಕ್‍ಗಳ ಪ್ರವೇಶ ನಿಷೇಧ

10 ವರ್ಷಕ್ಕಿಂತ ಹಳೆಯ ಪೆಡ್ರೋಲ್, 15 ವರ್ಷಕ್ಕಿಂತ ಹಳೆ ಡಿಸೇಲ್‍ವಾಹನ ನವೆಂಬರ್ 21ರವರೆಗೆ ಸಂಚಾರ ಮಾಡಬಾರದು

ನವೆಂಬರ್ 21ರವರೆಗೆ ವರ್ಕ್ ಫ್ರಂ ಹೋಮ್‍ಗೆ ಆದ್ಯತೆ. ಕಚೇರಿಗಳಲ್ಲಿ ಶೇ.50ರಷ್ಟು ಸಿಬ್ಬಂದಿಗೆ ಮಾತ್ರ ಅವಕಾಶವಿರುತ್ತದೆ

ಎಲ್ಲ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಮುಂದಿನ ಆದೇಶದವರೆಗೆ ರಜೆ ಇರುತ್ತದೆ

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ