NEWSದೇಶ-ವಿದೇಶ

ಹಸಿವು ಸೂಚ್ಯಂಕ: ಭಾರತದ ಸ್ಥಾನ ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳಕ್ಕಿಂತ ಕೆಳಗೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಅಪೌಷ್ಟಿಕತೆ ನಿವಾರಣೆಗಾಗಿ ಶ್ರಮಿಸುತ್ತಿರುವ 116 ರಾಷ್ಟ್ರಗಳಲ್ಲಿ ಭಾರತ 101ನೇ ಸ್ಥಾನಕ್ಕೆ ಕುಸಿದಿದೆ. ನೆರೆಯ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ನೇಪಾಳ ರಾಷ್ಟ್ರಗಳಿಂದ ಹಿಂದುಳಿದಿದೆ.

ಜಾಗತಿಕ ಹಸಿವು ಸೂಚ್ಯಂಕ 2021ರ ಪಟ್ಟಿ ಬಿಡುಗಡೆಯಾಗಿದ್ದು, ಭಾರತದ ನೆರೆಯ ರಾಷ್ಟ್ರಗಳಾದ ನೇಪಾಳ 76, ಬಾಂಗ್ಲಾದೇಶ 76, ಮ್ಯಾನ್ಮಾರ್ 71 ಮತ್ತು ಪಾಕಿಸ್ತಾನ 92ನೇ ರ‍್ಯಾಂ ಕ್ ಪಡೆದಿವೆ.

ಚೀನಾ, ಬ್ರೆಜಿಲ್ ಮತ್ತು ಕುವೈತ್ ಸೇರಿದಂತೆ 18 ರಾಷ್ಟ್ರಗಳುಮೊದಲ ಸ್ಥಾನವನ್ನು ಹಂಚಿಕೊಂಡಿವೆ. ಆದರೆ ಭಾರತ 101ನೇ ರ‍್ಯಾಂಕ್‌ಗೆ ಕುಸಿದಿರುವುದು ಕಳವಳಕಾರಿಯಾಗಿದೆ. ಕಳೆದ ವರ್ಷ 107 ರಾಷ್ಟ್ರಗಳ ಪೈಕಿ 94ನೇ ಸ್ಥಾನದಲ್ಲಿತ್ತು.

ಜಾಗತಿಕ ಹಸಿವುಸೂಚ್ಯಂ ಕ(ಜಿಎಚ್ಐ) ರಾಷ್ಟ್ರ ಗಳಲ್ಲಿನ ಹಸಿವಿನ ಮತ್ತು ಅಪೌಷ್ಟಿ ಕತೆಯ ಪ್ರಮಾಣವನ್ನು ಅಧ್ಯಯನ ಮಾಡಿ ಅಂಕ ನೀಡುತ್ತದೆ. ಐರ್ಲೆಂಡ್‌ನ ಧನ ಸಹಾಯ ಹೊಂದಿರುವ ಏಜೆನ್ಸಿ ಕನ್ಸರ್ನ್ ವರ್ಲ್ಡ್ ವೈಡ್ ಮತ್ತು ಜರ್ಮನಿಯ ಸಂಸ್ಥೆ ವೆಲ್ಟ್ ಹಂಗರ್ ಹೆಲ್ಪ್ ಸಹಯೋಗದಲ್ಲಿ ಈ ಪಟ್ಟಿ ಯನ್ನು ಸಿದ್ಧ ಪಡಿಸಲಾಗಿದೆ.

ವಿಶ್ವ ದಲ್ಲಿ ಅತಿಹೆಚ್ಚು ಪ್ರಮಾಣದಲ್ಲಿ ಎತ್ತರಕ್ಕೆ ಸಮನಾದ ತೂಕವನ್ನು ಹೊಂದಿರದ ಮಕ್ಕಳು ಭಾರತದಲ್ಲಿದ್ದಾರೆ. 2016-2020ರ ನಡುವೆ ಎತ್ತರಕ್ಕೆ ಸರಿಯಾದ ತೂಕಹೊಂದಿರದ ಮಕ್ಕಳ ಪ್ರಮಾಣ ಶೇ. 17.3 ಇದೆ. 1998-2002ರ ನಡುವೆ ಈ ಪ್ರಮಾಣ ಶೇ. 17.1 ಇತ್ತು ಎಂದು ಜಿಎಚ್ಐ ವರದಿ ಹೇಳಿದೆ.

ಕೋವಿಡ್-19 ಸೋಂಕು ಮತ್ತು ತಡೆಗಟ್ಟುವ ನಿಟ್ಟಿನಲ್ಲಿ ಹೇರಲಾದ ಲಾಕ್ಡೌನ್, ಕರ್ಫ್ಯೂ ಗಳಂತಹ ಕಠಿಣ ಕ್ರಮಗಳು ಹಸಿವಿನ ಸೂಚ್ಯಂಕದಲ್ಲಿ ಭಾರತ ಕಳಪೆ ಸಾಧನೆ ಮಾಡಲು ಕಾರಣವಾಗಿರಬಹುದು ಎಂದು ವಿಶ್ಲೇಷಿಸಲಾಗಿದೆ.

Leave a Reply

error: Content is protected !!
LATEST
ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ