ಚಂಡೀಗಡ: ಪಂಜಾಬ್ನಲ್ಲಿ ರೈತರು ಸೋಮವಾರ ರೈಲ್ವೆ ಹಳಿಗಳ ಮೇಲೆ ಕುಳಿತು ಆರು ಗಂಟೆಗಳ ‘ರೈಲ್ ರೋಕೊ’ (ರೈಲು ತಡೆ) ಪ್ರ ತಿಭಟನೆ ನಡೆಸಿದ್ದಾರೆ.
ಉತ್ತರ ಪ್ರದೇಶದ ಲಖಿಂಪುರ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ಮಿಶ್ರಾ ಅವರನ್ನು ಸಚಿವ ಸ್ಥಾನದಿಂದ ವಜಾಮಾಡಬೇಕು ಮತ್ತು ಬಂಧಿಸಬೇಕು ಎಂದು ಸಂಯುಕ್ತ ಕಿಸಾನ್ಮೋರ್ಚಾದ ಸದಸ್ಯ ರು ಒತ್ತಾಯಿಸಿದ್ದಾರೆ.
ಫಿರೋಜ್ಪುರ್ ವಿಭಾಗದ ನಾಲ್ಕು ವಲಯಗಳನ್ನು ಪ್ರತಿಭಟನಾಕಾರರು ನಿರ್ಬಂಧಿಸಿದ್ದಾರೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಫಿರೋಜ್ಪುರ್–ಫಜಿಲ್ಕಾ ಹಾಗೂ ಫಿರೋಜ್ಪುರ್–ಲೂಧಿಯಾನಾ
ಮಾರ್ಗದಲ್ಲಿ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ.
ಕೇಂದ್ರ ಸಚಿವ ಅಜಯ್ಮಿಶ್ರಾ ಅವರನ್ನು ಬಂಧಿಸುವಂತೆ ಕಿಸಾನ್ ಮಜದೂರ್ ಸಂಘರ್ಷ ಸಮಿತಿಯ ಪ್ರಧಾನ ಕಾರ್ಯದರ್ಶಿ ಸರ್ವನ್ ಸಿಂಗ್ ಪಂಧೇರ್ ಆಗ್ರಹಿಸಿದ್ದು, ರಾಜ್ಯ ದ 11 ಜಿಲ್ಲೆಗಳಲ್ಲಿ 20 ಕಡೆ ಸಮಿತಿಯು ಪ್ರತಿಭಟನೆ ನಡೆಸಲಿದೆ ಎಂದು ತಿಳಿಸಿದ್ದಾರೆ.
ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಸಂಯುಕ್ತ ಕಿಸಾನ್ಮೋರ್ಚಾ ರೈತ ಸಂಘಟನೆ ಒಕ್ಕೂಟವು, ‘ಲಖಿಂಪುರ ಖೇರಿ ಪ್ರ ಕರಣದಲ್ಲಿ ನ್ಯಾಯ ಸಿಗುವ ವರೆಗೂ ಹೋರಾಟದ ತೀವ್ರತೆ ಹೆಚ್ಚಿಸಲಾಗುತ್ತದೆ’ ಎಂದು ಹೇಳಿದೆ.
ಬೆಳಗ್ಗೆ 10ರಿಂದ ಸಂಜೆ ನಾಲ್ಕ ರವರೆಗೂ ಎಲ್ಲ ರೈಲುಗಳ ಸಂಚಾರವನ್ನು ತಡೆಯಲು ರೈತ ಸಂಘಟನೆಗಳು ಕರೆ ನೀಡಿವೆ. ರೈಲ್ವೆ ಆಸ್ತಿಗೆಯಾವುದೇ ಹಾನಿಯಾಗದಂತೆ ಶಾಂತಿಯುತ ರೀತಿಯಲ್ಲಿ ಪ್ರತಿಭಟನೆ ನಡೆಸುವಂತೆ ಪ್ರತಿಭಟನಾಕಾರರಿಗೆ ಸಂಯುಕ್ತ ಕಿಸಾನ್ಮೋರ್ಚಾ ತಿಳಿಸಿದೆ.
ಅಕ್ಟೋ ಬರ್ 3ರಂದು ಲಖಿಂಪುರ ಖೇರಿ ಹಿಂಸಾಚಾರದಲ್ಲಿ ಮೃತಪಟ್ಟ 8 ಜನರ ಪೈಕಿ ನಾಲ್ವ ರು ರೈತರು. ಬಿಜೆಪಿ ಕಾರ್ಯಕರ್ತರಿದ್ದ ವಾಹನಗಳು ರೈತರ ಮೇಲೆ ಹರಿದು ನಾಲ್ವ ರು ರೈತರು ಸಾವಿಗೀಡಾದರು. ಅನಂತರ ಆಕ್ರೋ ಶಗೊಂಡ ಪ್ರ ತಿಭಟನಾಕಾರರು ವಾಹನದಲ್ಲಿದ್ದ ವರಮೇಲೆ ಹಲ್ಲೆ ಮಾಡಿದರು.
ಆ ಹಿಂಸಾಚಾರದಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರು ಮತ್ತು ಅವರ ವಾಹನ ಚಾಲಕ ಮೃತಪಟ್ಟರು. ರೈತರ ಮೇಲೆ ನುಗ್ಗಿ ದ ವಾಹನಗಳ ಪೈಕಿ ಒಂದರಲ್ಲಿ ಸಚಿವ ಅಜಯ್ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ಸಹ ಇದ್ದರು ಎಂದು ರೈತರು ಆರೋಪಿಸಿದ್ದಾರೆ.
ರೈತರ ಸಾವಿನ ಪ್ರಕರಣದ ಸಂಬಂಧ ಅಕ್ಟೋ ಬರ್ 9ರಂದು ಆಶಿಶ್ ಮಿಶ್ರಾ ಅವರನ್ನು ಬಂಧಿಸಲಾಗಿದೆ.