NEWSಆರೋಗ್ಯ

ಮಕ್ಕಳು, ಮಹಿಳೆಯರಲ್ಲಿರುವ ಅಪೌಷ್ಟಿ ಕತೆ ನಿವಾರಣೆಗೆ ಕ್ರಮ : ಸಿಎಂ ಬಸವರಾಜ ಬೊಮ್ಮಾಯಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ ಮೂರು ಜಿಲ್ಲೆಗಳಲ್ಲಿ ಮಕ್ಕಳು ಮತ್ತು ಮಹಿಳೆಯರಲ್ಲಿ ಇರುವ ಅಪೌಷ್ಟಿಕತೆ ಸಮಸ್ಯೆ ನಿವಾರಣೆಗೆ ವಿಶೇಷ ಯೋಜನೆ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿಕಾಸಸೌಧದಲ್ಲಿ ಮಂಗಳವಾರ ಪ್ರ ಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು.

ಕಲಬುರ್ಗಿ, ರಾಯಚೂರು, ಯಾದಗಿರಿ ಲ ಜಿಲ್ಲೆ ಗಳಲ್ಲಿ ಮಕ್ಕಳು ಮತ್ತು ಮಹಿಳೆಯರಲ್ಲಿ ಅಪೌಷ್ಟಿ ಕತೆಯ ಸಮಸ್ಯೆ ಜಾಸ್ತಿ ಇರುವುದು ಕಂಡುಬಂದಿದೆ. ಅದನ್ನು ನಿವಾರಿಸಲು ವಿಶೇಷ ಯೋಜನೆಯೊಂದನ್ನು ರೂಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಪ್ರತಿ ಮೂರು ತಿಂಗಳಿಗೊಮ್ಮೆ ಕೆಡಿಪಿ ಪ್ರ ಗತಿ ಪರಿಶೀಲನೆಮಾಡಲಾಗುವುದು. ಕಾಲಮಿತಿಯೊಳಗೆಯೋಜನೆಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳು ವಂತೆಸೂಚಿಸಲಾಗಿದೆ ಎಂದು ತಿಳಿಸಿದರು.

ಬಜೆಟ್‌ ಹಂಚಿಕೆಯ ಅನುಸಾರ ಬಿಡುಗಡೆಮಾಡಿರುವ ಅನುದಾನವನ್ನು ಎಂಟು ಇಲಾಖೆಗಳು ಪೂರ್ಣವಾಗಿ ಇನ್ನೂ ಬಳಕೆಮಾಡಿಲ್ಲ . ಕೆಲವು ತಾಂತ್ರಿ ಕ ಕಾರಣಗಳಿಂದ ಅನುದಾನದ ಬಳಕೆಯಲ್ಲಿ ವಿಳಂಬವಾಗಿದೆ. ಎಲ್ಲ ಸಮಸ್ಯೆ ಗಳನ್ನು ಪರಿಹರಿಸಿ ತ್ವರಿತವಾಗಿ ಅನುದಾನ ಬಳಕೆಗೆ ಕ್ರಮ ಕೈಗೊಳ್ಳಲು ಆದೇಶ ನೀಡಲಾಗಿದೆ ಎಂದು ಹೇಳಿದರು.

ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರ ಕರಣಗಳ ತ್ವರಿತ ಇತ್ಯರ್ಥಕ್ಕೆ ಇಲಾಖಾವಾರು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದು. ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಜನಪರವಾಗಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರುವಂತೆಯೂ ನಿರ್ದೇಶನ ನೀಡಲಾಗಿದೆ ಎಂದರು.

ಟಿ.ಎಂ.ವಿಜಯ ಭಾಸ್ಕರ್ ನೇತೃತ್ವದ ಆಡಳಿತ ಸುಧಾರಣಾ ಆಯೋಗದ ಶಿಫಾರಸುಗಳ ಜಾರಿಗೆ ಸಲಹಾ ಸಮಿತಿ ರಚಿಸಲಾಗುವುದು. ನವೆಂಬರ್ 1ರಿಂದ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದರು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...