CrimeNEWSದೇಶ-ವಿದೇಶ

ಬಿಜಾಪುರ್ ಗಡಿಯಲ್ಲಿ ನಕ್ಸಲರು- ಭದ್ರತಾ ಪಡೆ ಸಿಬ್ಬಂದಿ ನಡುವೆ ಗುಂಡಿನ ಚಕಮ: 22 ಯೋಧರು ಹುತಾತ್ಮ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬಿಜಾಪುರ್‌: ಛತ್ತೀಸ್ ಗಢದ ಸುಕ್ಮಾ ಮತ್ತು ಬಿಜಾಪುರ್ ಗಡಿಯಲ್ಲಿ ನಕ್ಸಲರು ಮತ್ತು ಭದ್ರತಾ ಪಡೆ ಸಿಬ್ಬಂದಿ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಈವರೆಗೂ 22 ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ವೇಳೆ ಗಾಯಗೊಂಡಿದ್ದ ಭದ್ರತಾ ಪಡೆ ಸಿಬ್ಬಂದಿಗೆ ನಕ್ಸಲರು ಚಿತ್ರಹಿಂಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಭದ್ರತಾ ಪಡೆ ಸಿಬ್ಬಂದಿಯ ಕೈಯನ್ನು ಕತ್ತರಿಸುವ ಮೂಲಕ ಅವರನ್ನು ಫೈಶಾಚಿಕವಾಗಿ ನಡೆಸಿಕೊಂಡಿದ್ದಾರೆ ಎಂದು ತಿಳಿದರು ಬಂದಿದೆ.

ಇನ್ನು ಈ ನಕ್ಸಲರು ನಡೆಸಿದ ಗುಂಡಿನ ದಾಳಿಯಲ್ಲಿ 22 ಭದ್ರತಾ ಸಿಬ್ಬಂದಿ ಪ್ರಾಣ ಕಳೆದು ಕಳೆದುಕೊಂಡಿದ್ದು, ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೂ ಸುಕ್ಮಾ ಮತ್ತು ಬಿಜಾಪುರ ಗಡಿ ಪ್ರದೇಶದಲ್ಲಿ ನಕ್ಸಲರ ವಿರುದ್ಧ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ ಎಂದು ಬಿಜಾಪುರ ಎಸ್ಪಿ ಕಮಲೋಚನ್ ಕಶ್ಯಪ್ ತಿಳಿಸಿದ್ದಾರೆ.

ಈ ಗಡಿಗಳಲ್ಲಿ ಗುಂಡಿನ ದಾಳಿ ನಡೆಸಿದ ನಕ್ಸಲರು ಭದ್ರತಾ ಪಡೆಯ 24ಕ್ಕೂ ಹೆಚ್ಚು ಶಸ್ತ್ರಾಸ್ತ್ರಗಳನ್ನು ಕದ್ದುಕೊಂಡು ಹೋಗಿದ್ದಾರೆ ಎಂದು ಸಿಆರ್ ಪಿಎಫ್ ಮೂಲದಿಂದ ತಿಳಿದು ಬಂದಿದೆ.

ನಕ್ಸಲರ ಗುಂಡಿನ ದಾಳಿಯಲ್ಲಿ 31ಕ್ಕೂ ಹೆಚ್ಚು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿದ್ದು, ಈ ಪೈಕಿ 16 ಸಿಆರ್ ಪಿಎಫ್ ಯೋಧರಾಗಿದ್ದಾರೆ. 21 ಭದ್ರತಾ ಸಿಬ್ಬಂದಿ ನಾಪತ್ತೆಯಾಗಿದ್ದು, ಈ ಪೈಕಿ 7 ಮಂದಿ ಸಿಆರ್ ಪಿಎಫ್ ಯೋಧರು ಸೇರಿದ್ದಾರೆ. ನಕ್ಸಲ್ ದಾಳಿ ಸಂದರ್ಭದಲ್ಲಿ ನಾಪತ್ತೆ ಆಗಿರುವ ಭದ್ರತಾ ಸಿಬ್ಬಂದಿ ಹುಡುಕಾಟಕ್ಕೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಛತ್ತೀಸ್ ಗಢ ನಕ್ಸಲ್ ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಭೂಪೆಶ್ ಬಾಘೆಲ್, 21 ಭದ್ರತಾ ಸಿಬ್ಬಂದಿ ನಾಪತ್ತೆಯಾಗಿರುವ ಬಗ್ಗೆ ತಿಳಿಸಿದರು. 7 ಭದ್ರತಾ ಸಿಬ್ಬಂದಿಯನ್ನು ರಾಯಪುರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಯಾವುದೇ ಪ್ರಾಣಾಪಾಯವಿಲ್ಲ ಎಂದು ಮಾಹಿತಿ ನೀಡಿದರು.

ಇನ್ನು ಕೇಂದ್ರ ಗೃಹ ಸಚಿವ ಅಮೀತ್‌ ಷಾ ಮಾತನಾಡಿ, ಭದ್ರತಾ ಪಡೆ ಸಿಬ್ಬಂದಿ ಜೀವ ತೆಗೆದವರನ್ನು ವೃತ ಬಿಡುವುದಿಲ್ಲ. ಇದಕ್ಕೆ ನಕ್ಸಲರು ಸರಿಯಾದ ಬೆಲೆ ತೆತ್ತಲೆ ಬೇಕು ಅದನ್ನು ನಾವು ಕಕ್ಕಿಸುತ್ತೇವೆ ಎಂದು ಆಕ್ರೋಶ ಭರಿತ ಮಾತುಗಳಿಂದ ತಿಳಿಸಿದ್ದಾರೆ.

Leave a Reply

error: Content is protected !!
LATEST
ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...