NEWSದೇಶ-ವಿದೇಶರಾಜಕೀಯ

ಟಿಎಂಸಿ  ಪಕ್ಷದಿಂದ ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡಿದ ಸಿಎಂ ಮಮತಾ ಬ್ಯಾನರ್ಜಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಕೋಲ್ಕತಾ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷವು ಪ್ರಣಾಳಿಕೆ ಬಿಡುಗಡೆ ಮಾಡಿದೆ.

ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಬುಧವಾರ ಪ್ರಣಾಳಿಕೆಯನ್ನು ಅನಾವರಣಗೊಳಿಸಿದ್ದು,  ಎಲ್ಲಾ ಕುಟುಂಬಗಳಿಗೂ ಆದಾಯ ಯೋಜನೆ, ವಿದ್ಯಾರ್ಥಿ ಕ್ರೆಡಿಟ್ ಕಾರ್ಡ್ ಮತ್ತು ವಿವಿಧ ಸಮುದಾಯಗಳನ್ನು  ಒಬಿಸಿಗೆ ಸೇರ್ಪಡೆಗೊಳಿಸಲು ಪರಿಶೀಲನೆಗೆ ಕಾರ್ಯಪಡೆ ರಚಿಸುವ ಭರವಸೆ ನೀಡಿದರು.

ತಮ್ಮ ಸರ್ಕಾರವು ರಾಜ್ಯದಲ್ಲಿ ಬಡತನವನ್ನು ಶೇಕಡ 40ರಷ್ಟು ತಗ್ಗಿಸಿದೆ ಎಂದು ಪ್ರಣಾಳಿಕೆಯಲ್ಲಿ ತಿಳಿಸಲಾಗಿದ್ದು, ರೈತರಿಗೆ ವಾರ್ಷಿಕ ಆರ್ಥಿಕ ಸಹಾಯವನ್ನು 6000ರೂ ಗಳಿಂದ  10 ಸಾವಿರ ರೂಗಳಿಗೆ ಹೆಚ್ಚಿಸುವ ಆಶ್ವಾಸನೆ ನೀಡಿದರು.

ಮೊದಲ ಬಾರಿಗೆ ಪಶ್ಚಿಮಬಂಗಾಳದಲ್ಲಿ ಪ್ರತಿ ಕುಟುಂಬಕ್ಕೆ ಕನಿಷ್ಠ ಮೂಲ ಆದಾಯ ಯೋಜನೆ ಜಾರಿಗೆ ಯೋಚಿಸಿದ್ದೇವೆ. ಇದರಡಿಯಲ್ಲಿ1.4 ಕೋಟಿ ಕಾನೂನು ಸಾಮಾನ್ಯ ವರ್ಗದ ಕುಟುಂಬಗಳ  ಮತ್ತು ಎಸ್ಸಿ ಎಸ್ಟಿ ಕುಟುಂಬ ಮಹಿಳಾ ಮುಖ್ಯಸ್ಥರಿಗೆ ನೇರವಾಗಿ 500, ಸಾವಿರ ರೂ. ಹಣವನ್ನು ವರ್ಗಾಯಿಸಲಾಗುತ್ತದೆ ಎಂದು ಬ್ಯಾನರ್ಜಿ ಹೇಳಿದರು.

ಮುಂದಿನ ಐದು ವರ್ಷಗಳಲ್ಲಿ ನಾವು 10 ಲಕ್ಷ ಹೊಸ ಎಂಎಸ್‌ಎಂಇ ಮತ್ತು 2000 ದೊಡ್ಡ ಕೈಗಾರಿಕಾ ಘಟಕಗಳನ್ನು ಸ್ಥಾಪಿಸುತ್ತೇವೆ ಎಂದು ಹೇಳಿದರು

ಉತ್ತರ ಬಂಗಾಳ ತೆರಯ್ ಮತ್ತು ದೂರ್ಸ್ ಪ್ರದೇಶದ ಅಭಿವೃದ್ಧಿಗೆ ವಿಶೇಷ ಅಭಿವೃದ್ಧಿ ಮಂಡಳಿಯನ್ನು ರಚಿಸಲಾಗುವುದು ಎಂದು ಭರವಸೆ ನೀಡದರು.

Leave a Reply

error: Content is protected !!
LATEST
KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌ ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಖರೀದಿ ಮಾಡದಂತ ಕಟ್ಟುನಿಟ್ಟಿನ ಕಾನೂನು ಜಾರಿಗೆ ರೈತ ಮುಖಂಡರ ಆಗ್ರಹ KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪತ್ನಿ ಪ್ರಾಣಾಪಾಯದಿಂದ ಪಾರು