NEWSದೇಶ-ವಿದೇಶವಿಜ್ಞಾನ

ಸುದ್ದಿ, ಲೇಖನ ಬಳಸಿಕೊಳ್ಳುವ ಗೂಗಲ್ ಮಾಧ್ಯಗಳಿಗೆ ಹಣ ಪಾವತಿಸುವ ಕಾನೂನು ಅಗತ್ಯವಿದೆ: ಬಿಜೆಪಿ ನಾಯಕ ಸುಶೀಲ್ ಕುಮಾರ್ ಮೋದಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನ್ಯೂ ಡೆಲ್ಲಿ:  ಆಸ್ಟ್ರೇಲಿಯಾ ಮಾದರಿಯಲ್ಲಿ ಸುದ್ದಿ ಲೇಖನ ಬಳಸಿಕೊಳ್ಳುವ ಗೂಗಲ್ ಮತ್ತು ಫೇಸ್ಬುಕ್ ಗಳು ಮಾಧ್ಯಮಗಳಿಗೆ ಹಣ ನೀಡಬೇಕೆಂಬ ಕಾನೂನು ರೂಪಿಸಬೇಕು ಎಂದು ಬಿಜೆಪಿ ನಾಯಕ ಸುಶೀಲ್ ಕುಮಾರ್ ಮೋದಿ ರಾಜ್ಯಸಭೆಯಲ್ಲಿ ಹೇಳಿದ್ದಾರೆ.

ಶೂನ್ಯವೇಳೆಯಲ್ಲಿ ಇಂದು ವಿಷಯ ಪ್ರಸ್ತಾಪಿಸಿದ ಅವರು ಗೂಗಲ್ ಫೇಸ್ಬುಕ್ ಹಾಗೂ  ಯೂಟೂಬ್‌ ಉಚಿತವಾಗಿ ಸುದ್ದಿಗಳನ್ನು ಬಳಸಿಕೊಳ್ಳುತ್ತಿವೆ. ಹೀಗಾಗಿ ಮಾಧ್ಯಮ ಮತ್ತು ಸುದ್ದಿವಾಹಿನಿಗಳಿಗೆ ಹಣ ಪಾವತಿಸುವಂತೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸುದ್ದಿಮಾಧ್ಯಮ, ಉದ್ಯಮಗಳಿಗೆ ಅವುಗಳ ವಿಷಯಕ್ಕೆ ತಕ್ಕ ಸಂಭಾವನೆ ದೊರೆಯುವುದನ್ನು ಖಚಿತಪಡಿಸಿಕೊಳ್ಳುವ ವಿಶ್ವದ ಮೊದಲ ಕಾನೂನಿಗೆ ಆಸ್ಟ್ರೇಲಿಯಾ ಸಂಸತ್ ಕಳೆದ ತಿಂಗಳು ಅನುಮೋದನೆ ನೀಡಿತ್ತು. ಅದನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಕ್ರಮ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ದೇಶೀಯವಾಗಿ ಸುದ್ದಿ ಒದಗಿಸುವ ಮಾಧ್ಯಮಗಳಿಗೆ ಗೂಗಲ್ ಮತ್ತು ಫೇಸ್ಬುಕ್ ತಮ್ಮ ಗಳಿಕೆಯ ನ್ಯಾಯವನ್ನು ಪಾಲನ್ನು ಒದಗಿಸುವಂತೆ ಮಾಡಬೇಕು ಈ ವಿಚಾರದಲ್ಲಿ ಭಾರತವು ಮುಂದಾಳತ್ವ ವಹಿಸಬೇಕು ಎಂದು ಸುಶೀಲ್ ಕುಮಾರ್ ಮೋದಿ ಹೇಳಿದರು.

ಸಾಂಪ್ರದಾಯಿಕ ಮುದ್ರಣ ಮತ್ತು ಸುದ್ದಿ ಪ್ರಸಾರ ಮಾಧ್ಯಮಗಳ ವಿಷಯಗಳು ದೈತ್ಯರು ನಡೆಸುವ ತಾಣಗಳಲ್ಲಿ ಮುಕ್ತವಾಗಿ ದೊರೆಯುತ್ತಿವೆ. ಇದರಿಂದಾಗಿ ಸಾಂಪ್ರದಾಯಿಕ ಮುದ್ರಣ ಮತ್ತು ಸುದ್ದಿ ಪ್ರಸಾರ ಮಾಧ್ಯಮಗಳು  ಸಂಕಷ್ಟಕ್ಕೆ ಈಡಾದರೆ, ಫೇಸ್ಬುಕ್  ಯೂಟ್ಯೂಬ್ ಗಳಿಂದಾಗಿ ತೊಂದರೆಗೆ ಸಿಲುಕಿದೆ ಎಂದು ಹೇಳಿದರು.

ಇದು ಪರಿಗಣಿಸಬೇಕಾದ ಸಲಹೆ ಎಂದು ರಾಜ್ಯಸಭೆಯ ಉಪಸಭಾಪತಿ, ಉಪರಾಷ್ಟ್ರಪತಿ  ಎಂ. ವೆಂಕಯ್ಯ ನಾಯ್ಡು ಹೇಳಿದರು.

Vijayapatha - ವಿಜಯಪಥ

Leave a Reply

error: Content is protected !!
LATEST
KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪ್ರಣಾಪಾಯದಿಂದ ಪತ್ನಿ ಪಾರು 600ರಿಂದ 800 ಮಂದಿ ಅಧಿಕಾರಿಗಳಿಗಾಗಿ 1.07 ಲಕ್ಷ ನೌಕರರಿಗೆ ಅನ್ಯಾಯ ಮಾಡಲು ಹೊರಟಿರುವುದು ನ್ಯಾಯವೇ? KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರಿಗೆ ಸಮಾನ ವೇತನ ಲಾಭವೋ-ನಷ್ಟವೋ..!?? ಹರಿಯಾಣದಲ್ಲಿ ಸಮಾವೇಶ: ಎಂಎಸ್‌ಪಿ ಖಾತ್ರಿ ಕಾನೂನು ಜಾರಿಗೆ ಅನ್ನದಾತರ ಪಟ್ಟು ಪ್ರಜಾಪ್ರಭುತ್ವದ ಉಳಿವಿಗಾಗಿ ಮಾನವ ಸರಪಳಿ : ಉಸ್ತುವಾರಿ ಸಚಿವ ಮುನಿಯಪ್ಪ BMTC ಅಧಿಕಾರಿಗಳ ವಾಹನಗಳಿಗೂ ಖಾಸಗಿ ಚಾಲಕರ ನೇಮಕಕ್ಕೆ ಟೆಂಡರ್‌ ಕರೆದ ಸಂಸ್ಥೆ KSRTC ಮಡಿಕೇರಿ: ವೇತನ ಬಿಡುಗಡೆ ಆಗ್ರಹಿಸಿ ಪ್ರತಿಭಟನೆಗೆ ಇಳಿದ ಗುತ್ತಿಗೆ ಚಾಲಕರು KSRTC ನೌಕರರ ನಂಬಿಸಲು ಹೋದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳಿಂದಲೇ ಅವರ ಊಸರವಳ್ಳಿ ಬಣ್ಣ ಬಯಲು..! KSRTC : ಗಣಪತಿ ಪ್ರತಿಷ್ಠಾಪಿಸಿದ್ದರಿಂದ ಡಿಪೋ ಮುಂದೆ ಚಾಲಕ ರವಿ ಪಾರ್ಥಿವ ಶರೀರ ಇಡಲಾತ್ತು, ಪ್ರಮಾದವಾಗಿಲ್ಲ- ಡಿಎಂ ಸಮ... 10 ವರ್ಷದ ಆಧಾರ್‌ ನವೀಕರಣಕ್ಕೆ ಡೆಡ್‌ಲೈನ್‌ ಫಿಕ್ಸ್‌: ನಾಳೆ ಅಂತಿಮ ಗಡುವು- ಬಳಿಕ ದಂಡ