NEWSದೇಶ-ವಿದೇಶವಿದೇಶ

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಗೌರವಾರ್ಥ ಸೆ.5 ʻಗೌರಿ ಲಂಕೇಶ್‌ ದಿನʼ ಘೋಷಿಸಿದ ಬರ್ನಾಬಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೆನಡಾದ ಬರ್ನಾಬಿ ನಗರವು ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಅವರ ಗೌರವಾರ್ಥ ಸೆ.5 ಅನ್ನು ʻಗೌರಿ ಲಂಕೇಶ್‌ ದಿನʼ ಎಂದು ಘೋಷಿಸಿದೆ.

ಗೌರಿ ಲಂಕೇಶ್‌ ಹತ್ಯೆಯಾಗಿ ಇದೇ ಸೆ.5ಕ್ಕೆ ನಾಲ್ಕು ವರ್ಷಗಳು ತುಂಬಲಿವೆ. ಅವರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಬರ್ನಾಬಿ ನಗರವು ಈ ನಿರ್ಧಾರವನ್ನು ಘೋಷಿಸಿದೆ.

ನಗರದ ಮೇಯರ್‌ ಮೈಕ್ ಹರ್ಲಿ ಅವರು ಹೊರಡಿಸಿರುವ ಘೋಷಣಾ ಪತ್ರದಲ್ಲಿ, ʻಧೈರ್ಯಶಾಲಿ ಭಾರತೀಯ ಪತ್ರಕರ್ತೆ ಗೌರಿ ಲಂಕೇಶ್‌ ಸತ್ಯ ಮತ್ತು ನ್ಯಾಯದ ಪರವಾಗಿ ನಿಂತರು. ದಮನದ ವಿರುದ್ಧ ಮತ್ತು ಮಾನವ ಹಕ್ಕುಗಳ ಹೋರಾಟದಲ್ಲಿ ಅವರು ತಮ್ಮ ಜೀವವನ್ನೆ ಅರ್ಪಿಸಿದರುʼ ಎಂದು ಹೇಳಿದ್ದಾರೆ.

ಅಕ್ಟೋಬರ್ 8, 2018 ರಂದು ಫ್ರಾನ್ಸ್‌ನ ಬೈಯಕ್ಸ್-ಕ್ಯಾಲ್ವಾಡೋಸ್ ಪ್ರಶಸ್ತಿಯನ್ನು ಗೌರಿ ಲಂಕೇಶ್‌ ಅವರಿಗೆ ಮರಣೋತ್ತರವಾಗಿ ನೀಡಿ ಗೌರವಿಸಲಾಗಿತ್ತು.

2017ರ ಸೆಪ್ಟೆಂಬರ್‌ನಲ್ಲಿ ಬೆಂಗಳೂರಿನ ನಿವಾಸದ ಮುಂದೆ ಗೌರಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

Leave a Reply

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ