NEWSದೇಶ-ವಿದೇಶಸಂಸ್ಕೃತಿ

ಕೇರಳ ರಾಜ್ಯದ ಕೆಲ ಗ್ರಾಮಗಳ ಕನ್ನಡ ಹೆಸರು ಬದಲಾವಣೆಗೆ ಸಿಎಂ ಬಿಎಸ್‌ವೈ ಖಂಡನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕನ್ನಡ ಹೆಸರುಗಳನ್ನು ಹೊಂದಿದ ಕಾಸರಗೋಡು ಮತ್ತು ಮಂಜೇಶ್ವರದ ಕೆಲವು ಗ್ರಾಮಗಳ ಹೆಸರುಗಳನ್ನು ಮಲಯಾಳೀ ಭಾಷೆಯ ಆಧಾರದ ಹೆಸರುಗಳನ್ನಾಗಿ ಬದಲಾಯಿಸಲು ಹೊರಟಿರುವ ಕೇರಳ ಸರ್ಕಾರದ ನಡೆಯನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಖಂಡಿಸಿದ್ದು, ಕೂಡಲೇ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಕೇರಳ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಬಿಎಸ್‌ವೈ ತಿಳಿಸಿದ್ದಾರೆ.

ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ.ಸೋಮಶೇಖರ್‌ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಹೆಸರು ಬದಲಾವಣೆ ಮಾಡುತ್ತಿರುವುದರ ಬಗ್ಗೆ ಸಿಎಂ ಗಮನಕ್ಕೆ ತಂದರು.

ಕೂಡಲೇ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ ಈ ವಿಷಯ ತಮ್ಮ ಗಮನಕ್ಕೆ ಈಗಾಗಲೇ ಬಂದಿದ್ದು, ಕೂಡಲೇ ಕೇರಳ ಸರ್ಕಾರದ ಸಿಎಂ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು.

ಕಾಸರಗೋಡು ಮತ್ತು ಮಂಜೇಶ್ವರ ಭಾಗದಲ್ಲಿ ಕನ್ನಡಿಗರು ಮತ್ತು ಮಲಯಾಳ ಭಾಷಿಗರು ಪರಸ್ಪರ ಸಹಬಾಳ್ವೆಯಿಂದ ಸಹೋದರರಂತೆ ಬದುಕುತಿದ್ದಾರೆ. ಕನ್ನಡ ಭಾಷೆಯ ಸಾಂಸ್ಕೃತಿಕ, ಐತಿಹಾಸಿಕ ಮಹತ್ವವುಳ್ಳ ಗ್ರಾಮಗಳ ಹೆಸರುಗಳನ್ನು ಬದಲಾಯಿಸುವುದು ಸೂಕ್ತವಲ್ಲ ಎಂಬ ವಿಷಯವನ್ನು ಕೇರಳ ಸರ್ಕಾರದ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಗ್ರಾಮಗಳ ಹೆಸರುಗಳ ಬದಲಾವಣೆಯ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕೆಂದು ಕೋರಿ ಪತ್ರ ಬರೆಯುವುದಾಗಿ ಬಿಎಸ್‌ವೈ ಭರವಸೆ ನೀಡಿದರು.

ಗ್ರಾಮಗಳ ಹೆಸರುಗಳನ್ನು ಬದಲಾಯಿಸುವ ಪ್ರಯತ್ನ ಕೇರಳ ಸರ್ಕಾರದ ಗಮನಕ್ಕೆ ಬಾರದೆಯೇ ಕೇವಲ ಸ್ಥಳೀಯ ಸಂಸ್ಥೆಗಳ ಹಂತದಲ್ಲಿಯೇ ನಡೆದಿರಬಹುದು ಎಂದು ಈ ಸಂದರ್ಭದಲ್ಲಿ ಪ್ರಾಧಿಕಾರದ ಅಧ್ಯಕ್ಷರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ