NEWSದೇಶ-ವಿದೇಶರಾಜಕೀಯ

ಉಡುಪಿ: ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್‌ ಪ್ರತಿಭಟನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಉಡುಪಿ: ಕೇಂದ್ರ ಸರರ್ಕಾರ ಇಂಧನ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಮತ್ತು ಕೊರೊನಾ ನಿರ್ವಹಣೆಯಲ್ಲಿ ವಿಫಲವಾಗಿದೆ. ಹೀಗಾಗಿ ಪ್ರಧಾನಿ ಮೋದಿ ತಮ್ಮ ಅಧಿಕಾರದಿಂದ ಇಳಿಯಲಿ ಎಂದು ಜೆಡಿಎಸ್ ಆಗ್ರಹಿಸಿದೆ.

ಉಡುಪಿಯ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ರಜತಾದ್ರಿ ಮುಂಭಾಗದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಜಮಾವಣೆಗೊಂಡು ಕೇಂದ್ರ ಸರ್ಕಾರ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರದಲ್ಲಿ ಬಿಜೆಪಿ ರಾಜ್ಯದಲ್ಲಿ ಬಿಜೆಪಿ ಜಿಲ್ಲೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಜನಕ್ಕೆ ಏನು ಪ್ರಯೋಜನ ಆಗಿದೆ? ರಾಷ್ಟ್ರೀಯ ಪಕ್ಷಗಳಿಗೆ ಜನರ ಹಿತ ಬೇಕಾಗಿಲ್ಲ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ಕೊರೊನಾ ಮೊದಲ ಅಲೆ ಸಂದರ್ಭದಲ್ಲಿ ಕೇಂದ್ರ- ರಾಜ್ಯ ಸರರ್ಕಾರ ತಜ್ಞರ ಅಭಿಪ್ರಾಯ ಸಲಹೆ ಪಡೆಯದೆ ದೇಶವನ್ನು ಮೃತ್ಯು ಕೂಪಕ್ಕೆ ತಳ್ಳಿದೆ. ಬೆಲೆ ನಿಯಂತ್ರಣ ಮಾಡಲು ವಿಫಲವಾದ ಪ್ರಧಾನಿ ಮೋದಿ ಅಧಿಕಾರದಲ್ಲಿರಲು ಸಮರ್ಥರಲ್ಲ. ಸಾಂಕ್ರಾಮಿಕ ಆವರಿಸಿಕೊಂಡಿರುವ ಈ ಕಾಲದಲ್ಲಿ ಬೆಲೆಯೇರಿಕೆ ಮಾಡಿ ಬಡವರು ಮಧ್ಯಮ ವರ್ಗದ ಜೀವನದ ಜೊತೆ ಚೆಲ್ಲಾಟ ಆಡುತ್ತಿದೆ. ತಿನ್ನುವ ಆಹಾರಕ್ಕೂ ದುಬಾರಿ ಬೆಲೆ, ಓಡಾಟ ಮಾಡುವ ಪೆಟ್ರೋಲಿಯಂ ವಸ್ತುಗಳಿಗೂ ದುಬಾರಿ ಬೆಲೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಕಿಡಿಕಾರಿದರು.

ಕಿಸಾನ್ ಎಂದು ಹೇಳುವ ಪ್ರಧಾನಿ ಮೋದಿ ಡೀಸೆಲ್ ಬೆಲೆ ಏರಿಕೆ ಮಾಡಿ ರೈತರು ಟ್ರ್ಯಾಕ್ಟರ್, ಟಿಲ್ಲರ್‌ನಲ್ಲಿ ಬೇಸಾಯ ಮಾಡಲು, ಆಹಾರ ವಸ್ತು ಸಾಗಾಟ ಮಾಡಲು ದುಬಾರಿ ಬೆಲೆ ತೆರುವಂತೆ ಮಾಡಿದ್ದು, ಸಾಧನೆಯೇ ಎಂದು ಪ್ರಶ್ನೆ ಮಾಡಿದ್ದಾರೆ.

ಜನಜೀವನಕ್ಕೆ ತೊಡಕಾಗಿರುವ ಬೆಲೆ ಏರಿಕೆ ಇಳಿಸದಿದ್ದರೆ ಜೆಡಿಎಸ್ ಮತ್ತು ಮಿತ್ರಪಕ್ಷಗಳು ದೇಶವ್ಯಾಪಿ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಸಿದರು.

ಜನರ ಭಾವನೆಗಳನ್ನು ಸರರ್ಕಾರದ ಗಮನಕ್ಕೆ ತನ್ನಿ ಎಂದು ಪ್ರತಿಭಟನಾಕಾರರು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅವರಿಗೆ ಮನವಿ ಪತ್ರ ನೀಡಿದರು.

ಜೆಡಿಎಸ್ ಮುಖಂಡರಾದ ಬಾಲಕೃಷ್ಣ ಕಪ್ಪೆಟ್ಟು, ವಾಸುದೇವ, ಜಯಕುಮಾರ್ ಸುರೇಶ್ ದೇವಾಡಿಗ, ಶ್ರೀಕಾಂತ್, ಮನ್ಸೂರ್, ಹುಸೇನ್, ಜಯರಾಮ ಆಚಾರ್ಯ ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ