NEWSದೇಶ-ವಿದೇಶರಾಜಕೀಯ

ಅಮೆರಿಕದ 46ನೇ ಅಧ್ಯಕ್ಷ ಜೋ ಬೈಡೆನ್, 49ನೇ ಉಪಾಧ್ಯಕ್ಷೆಯಾಗಿ ಕಮಲಾ ಹ್ಯಾರಿಸ್ ಅಧಿಕಾರ ಸ್ವೀಕರ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ವಾಷಿಂಗ್ಟನ್: ಯುಎಸ್ ಕ್ಯಾಪಿಟಲ್‌ನಲ್ಲಿ ಕೋವಿಡ್-19 ಮುನ್ನೆಚ್ಚರಿಕೆ ಹಾಗೂ ಭದ್ರತೆಯ ನಡುವೆ ನಡೆದ ವರ್ಣ ರಂಜಿತ ಸಮಾರಂಭದಲ್ಲಿ 46ನೇ ಅಧ್ಯಕ್ಷರಾಗಿ ಜೋ  ಬೈಡೆನ್ ಪ್ರಮಾಣ ವಚನ ಸ್ವೀಕರಿಸಿದರು.

ಅಮೆರಿಕ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ರಾಬರ್ಟ್ ಜಾನ್ಸ್ ಜೋ ಬೈಡೆನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಈ ಮೂಲಕ ಅಮೆರಿಕದ ನೂತನ ಅಧ್ಯಕ್ಷರಾಗಿ ಜೋ ಬೈಡೆನ್ ಹಾಗೂ ಉಪಾಧ್ಯಕ್ಷೆಯಾಗಿ ಕಮಲಾ ಹ್ಯಾರಿಸ್ ನಿನ್ನೆ ಅಧಿಕಾರ ಸ್ವೀಕರಿಸಿದರು.

ನಂತರ ಮಾತನಾಡಿದ ಬೈಡೆನ್, ಇಂದು ಪ್ರಜಾತಂತ್ರದ ಗೆಲುವಾಗಿದೆ. ಜತೆಗೆ ಹೊಸ ಇತಿಹಾಸ ಸೃಷ್ಟಿಯಾಗಿದೆ. ಸಂವಿಧಾನ, ಅಮೆರಿಕದ ಜನರ ದಿನವಾಗಿದೆ. ಕೋವಿಡ್ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಲಕ್ಷಾಂತರ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ದೇಶದ ಮುಂದೆ ಹಲವಾರು ಸವಾಲುಗಳಿದ್ದು, ಒಗ್ಗಟ್ಟಾಗಿ ಆ ಸವಾಲುಗಳನ್ನು ಎದುರಿಸೋಣ ಎಂದು ಹೇಳಿದರು.

ಸಂವಿಧಾನ, ಪ್ರಜಾಪ್ರಭುತ್ವ, ಅಮೆರಿಕದ ಜನತೆಗೆ ಬದ್ದನಾಗಿರುತ್ತೇನೆ. ಎಲ್ಲವನ್ನು ನಿಮ್ಮ ಸೇವೆಯಲ್ಲಿ ಇಡುತ್ತೇನೆ. ಅಧಿಕಾರದ ಬಗ್ಗೆ ಅಲ್ಲ ಆದರೆ ಸಾಧ್ಯತೆಗಳ ಬಗ್ಗೆ ಯೋಚಿಸುತ್ತೇನೆ. ವೈಯಕ್ತಿಕ ಹಿತಾಸಕ್ತಿಗಳಲ್ಲ. ಆದರೆ, ಸಾರ್ವಜನಿಕ ಹಿತದೃಷ್ಟಿಯಿಂದ ಯೋಚಿಸುವುದಾಗಿ ತಿಳಿಸಿದರು.

ಅಭ್ಯರ್ಥಿಯಾಗಿ ವಿಜಯೋತ್ಸವ ಆಚರಿಸುತ್ತಿಲ್ಲ, ಪ್ರಜಾಪ್ರಭುತ್ವದ ಕಾರಣದಿಂದ ವಿಜಯೋತ್ಸವ ಆಚರಿಸಲಾಗುತ್ತಿದೆ. ಪ್ರಜಾಪ್ರಭುತ್ವ ಮಹತ್ವದ್ದು ಎಂಬುದನ್ನು ಮತ್ತೆ ಕಲಿತಿದ್ದೇವೆ. ಪ್ರಜಾಪ್ರಭುತ್ವ ಮೇಲುಗೈ ಸಾಧಿಸಿದೆ ಎಂದರು.

ಇನ್ನು ಅನಿವಾಸಿ ಭಾರತೀಯ ಮಹಿಳೆ ಕಮಲಾ ಹ್ಯಾರಿಸ್ 49ನೇ ಉಪಾಧ್ಯಕ್ಷೆಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸುಪ್ರೀಂಕೋರ್ಟ್ ನ್ಯಾಯಾಧೀಶೆ ಸೋನಿಯಾ ಸೋಟೋಮೇಯರ್ ಕಮಲಾ ಹ್ಯಾರಿಸ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಅಮೆರಿಕದ ಇತಿಹಾಸದಲ್ಲಿ ರಾಷ್ಟ್ರೀಯ ಕಚೇರಿಗೆ ಮೊದಲ ಮಹಿಳೆಯಾಗಿ ಕಮಲಾ ಹ್ಯಾರಿಸ್ ಆಯ್ಕೆಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವಿಷಯಗಳನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ನನಗೆ ಹೇಳಬೇಡಿ ಎಂದು ಇದೇ ವೇಳೆ ಜೋ ಬೈಡೆನ್ ತಿಳಿಸಿದರು.

ಖ್ಯಾತ ಗಾಯಕಿ ಗಾಗಾ ಪದಗ್ರಹಣ ಸಮಾರಂಭದ ಆಕರ್ಷಣೀಯ ಕೇಂದ್ರಬಿಂದುವಾಗಿದ್ದರು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ