NEWSನಮ್ಮರಾಜ್ಯರಾಜಕೀಯ

ಅಮಿತ್ ಷಾ ನೆಚ್ಚಿಸಲು ಕರ್ನಾಟಕದಲ್ಲೇ ಕನ್ನಡ ಮಾಯ: ರಾರಾಜಿಸಿದ ಹಿಂದಿ, ಆಂಗ್ಲ ಭಾಷೆ – ಎಚ್‌ಡಿಕೆ ಕಿಡಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಶಿವಮೊಗ್ಗದ ಭದ್ರಾವತಿಯಲ್ಲಿ ಶನಿವಾರ ಆರ್‌ಎಎಫ್‌ ಘಟಕಕ್ಕೆ ಗೃಹಸಚಿವರಾದ ಅಮಿತ್ ಷಾ ಅವರು ಶಂಕುಸ್ಥಾಪನೆ ನೆರವೇರಿಸಿದ್ದು, ಅಡಿಗಲ್ಲು ಫಲಕ ಅನಾವರಣಗೊಳಿಸಿದ್ದಾರೆ. ಅಡಿಗಲ್ಲು ಫಲಕಗಳು ಹಿಂದಿ ಮತ್ತು ಆಂಗ್ಲಭಾಷೆಯಲ್ಲಿವೆ. ಇಲ್ಲಿ ಕನ್ನಡದ ಅವಗಣನೆ ನಿಚ್ಚಳವಾಗಿ ಕಾಣುತ್ತದೆ ಎಂದು ಮಾಜು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ವೈವಿಧ್ಯಮಯ ಭಾರತ ತ್ರಿಭಾಷಾ ಸೂತ್ರ ಅಳವಡಿಸಿಕೊಂಡಿದ್ದು,ಆಯಾ ರಾಜ್ಯ ಭಾಷೆ ಗೌರವಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಗೃಹ ಸಚಿವರೆ ತ್ರಿಭಾಷಾ ಸೂತ್ರವನ್ನು ಧಿಕ್ಕರಿಸಿರುವುದು ಕನ್ನಡಕ್ಕೆ, ಕನ್ನಡಿಗರಿಗೆ ಮಾಡಿದ ಅಗೌರವ. ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ನಾಡು-ನುಡಿಯ ಘನತೆಯನ್ನು ಮರೆತದ್ದು ಅತ್ಯಂತ ಖಂಡನೀಯ ಎಂದು ಸರಣಿ ಟ್ವೀಟ್‌ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದಿ-ಆಂಗ್ಲ ಭಾಷೆಯ ನಿಷ್ಠ ಧೋರಣೆಯಲ್ಲಿ ಕನ್ನಡ ಭಾಷೆಯನ್ನು ಅವಗಣನೆ ಮಾಡಿರುವ ಅಮಿತ್ ಷಾ ಅವರ ಧೋರಣೆ ಕನ್ನಡ ವಿರೋಧಿತನವನ್ನು ತೋರಿಸುತ್ತದೆ. ಇದು ಕನ್ನಡಿಗರ ಸ್ವಾಭಿಮಾನಕ್ಕೆ ಮಾಡಿದ ಅವಮಾನ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಅಧೀನದಲ್ಲಿರುವ ಆರ್‌ಎಎಫ್‌ ಘಟಕ ಸ್ಥಾಪನೆಗೆ ಕನ್ನಡದ ನೆಲವನ್ನೆ ಕೊಟ್ಟಿದ್ದು, ಈ ಪರಿಜ್ಞಾನವಿಲ್ಲದೆ ಕನ್ನಡದಲ್ಲಿ ಅಡಿಗಲ್ಲು ಫಲಕ ಇಲ್ಲದಿರುವುದು ಅಕ್ಷಮ್ಯ. ಅಮಿತ್ ಷಾ ಅವರು ತ್ರಿಭಾಷಾ ಸೂತ್ರ ಉಲ್ಲಂಘಿಸಿರುವುದಕ್ಕೆ ಕನ್ನಡಿಗರಿಗೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ನಾಡು-ನುಡಿಯ ಘನತೆಗೆ ಚ್ಯುತಿ ಬಂದಾಗ ಸಹಿಸಿಕೊಳ್ಳುವವರಿಗೆ ಈ ರಾಜ್ಯದ ಆಡಳಿತ ನಡೆಸುವ ಅರ್ಹತೆ ಇಲ್ಲ. ಕೇಂದ್ರದ ಗೃಹಸಚಿವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ನಡೆ ಕನ್ನಡಕ್ಕೆ ಬಗೆದ ದ್ರೋಹವಾಗಿದೆ ಎಂದು ನಾಡಿನ ಆಡಳಿತದ ಚುಕ್ಕಾಣಿ ಹಿಡಿದವರ ವಿರುದ್ಧವು ಹರಿಹಾಯ್ದಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ