NEWSದೇಶ-ವಿದೇಶ

ಲಾಕ್‌ಡೌನ್‌ ಮುಗಿಯುವವರೆಗೂ ಮದ್ಯದ ಅಂಗಡಿಗಳಿಗೆ ಬೀಗ

ತಮಿಳುನಾಡು ಉಚ್ಚನ್ಯಾಯಾಲಯದ ಆದೇಶ

ವಿಜಯಪಥ ಸಮಗ್ರ ಸುದ್ದಿ

ಚೆನ್ನೈ: ರಾಜ್ಯಾದ್ಯಂತ ತೆರೆದಿರುವ ವೈನ್‌ ಶಾಪ್‌ಗಳನ್ನು ಮುಚ್ಚುವಂತೆ ತಮಿಳುನಾಡು ಉಚ್ಚನ್ಯಾಯಾಲಯ ಆದೇಶ ನೀಡಿದೆ.

ಮಾಜಿ ಐಪಿಎಸ್‌ ಅಧಿಕಾರಿ ಮೌರ್ಯ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿಗಳಾದ ವಿನೀತ್ ಕೊಠಾರಿ ಮತ್ತು ಪುಷ್ಪ ಸತ್ಯನಾರಾಯಣ ಅವರನ್ನೊಳಗೊಂಡ ಹೈಕೋರ್ಚ್ ವಿಶೇಷ ವಿಭಾಗೀಯ ಪೀಠ ಆನ್‌ಲೈನ್‌ನಲ್ಲಿ ಮದ್ಯ ಮಾರಾಟಕಕ್ಕೆ ಮಾತ್ರ ಅವಕಾಶ ನೀಡಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

ಕೊರೊನಾ ಮಹಾಮಾರಿಯಿಂದ ಜನರು ಜತ್ತರಿಸಿ ಹೋಗಿದ್ದು, ದೇಶದಲ್ಲಿ ಲಾಕ್‌ಡೌನ್‌ ಜಾರಿಯಲ್ಲಿದೆ ಇದರ ನಡುವೆ ನೀವು ಮದ್ಯದಂಗಡಿಗಳನ್ನು ತೆರೆದರೆ ಸಾಮಾಜಿಕ ಅಂತರ ಕಾಯ್ದಕೊಳ್ಳುವುದು ಹೇಗೆ ಸಾಧ್ಯ ಎಂದು ಸರ್ಕಾರಕ್ಕೆ ಚಾಟಿ  ಬೀಸಿರುವ ಹೈ ಕೋರ್ಟ್‌ ಲಾಕ್‌ಡೌನ್‌ ಮುಗಿಯುವ ವರೆಗೂ ಯಾವುದೇ ಮದ್ಯದ ಅಂಗಡಿಗಳನ್ನು ತೆರೆಯಬಾರದು. ಜತೆಗೆ ಈಗ ತೆರೆದಿರುವ ಅಂಗಡಿಗಳನ್ನು ಮುಚ್ಚಬೇಕು ಎಂದು ಕಟ್ಟುನಿಟ್ಟಿನ ಆದೇಶ ನೀಡಿದೆ.

ಆದರೆ, ತಮಿಳುನಾಡು ಸರ್ಕಾರ ಮದ್ರಾಸ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಮುಂದಾಗಿದೆ.

ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಮದ್ರಾಸ್ ಹೈಕೋರ್ಟ್ ಈ ಹಿಂದೆ ಮಾರ್ಗಸೂಚಿಗಳನ್ನು ನೀಡಿತ್ತು. ಮದ್ಯವನ್ನು ಖರೀದಿಸಲು ಕ್ಯೂನಲ್ಲಿ ನಿಂತವರ ನಡುವೆ ಆರು ಅಡಿ ಅಂತರವನ್ನು ಕಾಯ್ದುಕೊಳ್ಳುವಂತೆ ಅದು ಆದೇಶಿಸಿತ್ತು, ಖರೀದಿದಾರರ ಆಧಾರ್ ಕಾರ್ಡ್‌ಗಳನ್ನು ಪರಿಶೀಲಿಸುವಂತೆ ರಾಜ್ಯ ಸರ್ಕಾರವನ್ನು ಕೋರಿತ್ತು. ಮಾರ್ಗಸೂಚಿಗಳನ್ನು ಅನುಸರಿಸಲು ವಿಫಲವಾದರೆ ಅಂಗಡಿಗಳನ್ನು ಮುಚ್ಚಿಸುವುದಾಗಿಯೂ ನ್ಯಾಯಾಲಯ ಎಚ್ಚರಿಕೆ ನೀಡಿತ್ತು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...