NEWSಸಂಸ್ಕೃತಿ

ವಿಜೃಂಭಣೆಯಿಂದ ನೆರವೇರಿದ ಶ್ರೀ ಕನ್ನಂಬಾಡಿ ಅಮ್ಮನವರ ಬ್ರಹ್ಮ ರಥೋತ್ಸವ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಪಿರಿಯಾಪಟ್ಟಣ :ಇತಿಹಾಸ ಪ್ರಸಿದ್ದ ಪಿರಿಯಾಪಟ್ಟಣ ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ಕನ್ನಂಬಾಡಿ ಅಮ್ಮನವರ ಜಾತ್ರಾ ಹಾಗೂ ಬ್ರಹ್ಮ ರಥೋತ್ಸವ ಮಂಗಳವಾರ ವಿಜೃಂಭಣೆಯಿಂದ ನೆರವೇರಿತು.

ಬೆಳಗ್ಗೆಯಿಂದಲೇ ದೇವಾಲಯದಲ್ಲಿ ದೇವರಿಗೆ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನಡೆದಿದ್ದು, 10 ಗಂಟೆಯಿಂದಲೇ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿ ಅಮ್ಮನವರಿಗೆ ಕಳಸಾರೋಹಣವನ್ನು ನೆರವೇರಿಸಲಾಯಿತು.

ತದನಂತರದಲ್ಲಿ ದೇವಿಗೆ ಬಲಿಪೂಜೆ ನಡೆಯಿತು. ಇದಾದ ನಂತರ ಕನ್ನಂಬಾಡಿ ಅಮ್ಮನವರನ್ನು ಪಲ್ಲಕ್ಕಿಯಲ್ಲಿ ಕೂರಿಸಿ ದೇವಸ್ಥಾನದ ಸುತ್ತ ಪ್ರದಕ್ಷಿಣೆ ಮಾಡಿ ನಂತರ ಕೊಂಬು ಕಹಳೆ ಬ್ಯಾಂಡ್ ಸಟ್, ಮಂಗಳವಾದ್ಯಗಳ ಸಮೇತ ಬಗೆಬಗೆಯ  ಹೂವಿನಿಂದ ಸಿಂಗಾರಗೊಂಡ ರಥಕ್ಕೆ ದೇವಿಯನ್ನು ಕೂರಿಸಿ ಭಕ್ತಾದಿಗಳ ಘೋಷಣೆಯ ನಡುವೆ ಮದ್ಯಾಹ್ನ 12.10 ರೊಳಗೆ ಸಲ್ಲುವ ವೃಷಭ ಲಗ್ನದಲ್ಲಿ ರಥೋತ್ಸವ ಜರುಗಿತು.

ದೇವಸ್ಥಾನದಿಂದ ಬಿ.ಎಂ.ರಸ್ತೆ ವರೆಗೆ ರಥವನ್ನು ಎಳೆಯುವ ಹಾಗೂ ರಥಕ್ಕೆ ಹಣ್ಣು ದವನ ಎಸೆಯುವ ಮೂಲಕ ಭಕ್ತಾದಿಗಳು ದೇವರಿಗೆ ಭಕ್ತಿ ಸಮರ್ಪಿಸಿದರು.

ಜಾತ್ರಾ ಮಹೋತ್ಸವಕ್ಕೆ ಪಿರಿಯಾಪಟ್ಟಣ ತಾಲೂಕಿನ ನೂರಾರು ಗ್ರಾಮಗಳ ಜನತೆ ಸೇರಿದಂತೆ ಮೈಸೂರು ಹಾಗೂ ಕೊಡಗು ಜಿಲ್ಲೆಯ ಸಾವಿರಾರು ಭಕ್ತರು ಆಗಮಿಸಿ ದೇವರ ಕೃಪೆಗೆ ಪಾತ್ರರಾದರು.

ರಥೋತ್ಸವದ ನಿಮಿತ್ತ ಪಟ್ಟಣದ ಬಿ.ಎಂ. ರಸ್ತೆಯ ಎರಡೂ ಬದಿಗಳಲ್ಲಿ ಹಲವು ಸಂಘ ಸಂಸ್ಥೆಗಳು ಬೆಳಗ್ಗಿನಿಂದಲೇ ಜಾತ್ರೆಗೆ ಆಗಮಿಸಿದ್ದ ಭಕ್ತಾದಿಗಳಿಗಾಗಿ ಬಾತು, ಮೊಸರನ್ನ, ಪಾನಕ, ಮಜ್ಜಿಗೆ, ನೀರು, ಹಣ್ಣುಗಳು ಸೇರಿದಂತೆ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಏರ್ಪಡಿಸಿದ್ದು ವಿಶೇಷವಾಗಿತ್ತು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ