NEWSಕ್ರೀಡೆದೇಶ-ವಿದೇಶ

ಕೊರೊನಾ ಸೋಂಕಿಗೆ ಬೆಚ್ಚಿದ ಕ್ರಿಕೆಟಿಗರು

ಇಂಗ್ಲೆಂಡ್‌ ಪ್ರವಾಸದಿಂದ ಹಿಂದೆ ಸರಿದ ಅಮೀರ್‌, ಸೋಹೇಲ್‌

ವಿಜಯಪಥ ಸಮಗ್ರ ಸುದ್ದಿ

ಲಾಹೋರ್: ಇಂಗ್ಲೆಂಡ್ ಪ್ರವಾಸ ಕೈಗೊಳ್ಳುವ ಪಾಕ್ ತಂಡದಿಂದ ಪಾಕಿಸ್ತಾನ ತಂಡದ ಮಧ್ಯಮ ಕ್ರಮಾಂಕದ ಆಟಗಾರ ಹ್ಯಾರಿಸ್ ಸೊಹೇಲ್  ಹಿಂದೆ ಸರಿದಿದ್ದಾರೆ.

ಕೊರೊನಾ ಸೋಂಕು ಆತಂಕದ ಕಾರಣ ನೀಡಿ ಅವರು ಹಿಂದೆ ಸರಿದಿದ್ದು, ಈ ಮೂಲಕ ಆಟವಾಡಲು ಹಿಂದೆ ಸರಿದ ಮೊದಲ ಆಟಗಾರ ಎನಿಸಿದ್ದಾರೆ.

ಪ್ರಮುಖ ವೇಗದ ಬೌಲರ್ ಮಹಮ್ಮದ್ ಅಮೀರ್ ಕೂಡ ವೈಯಕ್ತಿಕ ಕಾರಣ ನೀಡಿ ಹಿಂದೆ ಸರಿದಿದ್ದಾರೆ ಎಂದು ಪಾಕ್ ಕ್ರಿಕೆಟ್ ಮಂಡಳಿ ವಕ್ತಾರರು ತಿಳಿಸಿದ್ದಾರೆ. ಅಮೀರ್ ಅವರ ಮನೆಗೆ ಆಗಸ್ಟ್‌ನಲ್ಲಿ ಎರಡನೇ ಅತಿಥಿ ಆಗಮನವಾಗುವ ನಿರೀಕ್ಷೆಯಲ್ಲಿರುವುದರಿಂದ ತಮ್ಮ ಗರ್ಭಿಣಿ ಪತ್ನಿ ಕಡೆ ಹೆಚ್ಚಿನ ಗಮನ ಕೊಡಬೇಕಾಗಿದೆ. ಈ ಕಾರಣದಿಂದ ಪಂದ್ಯದಲ್ಲಿ ಭಾಗವಹಿಸಲು ಆಗುತ್ತಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ.

ಆಮೀರ್ ಟೆಸ್ಟ್ ಕ್ರಿಕೆಟ್ ನಿಂದ ಕಳೆದ ವರ್ಷ ನಿವೃತ್ತಿ ಘೋಷಿಸಿದ್ದು ಟ್ವೆಂಟಿ-20 ಸರಣಿಯಲ್ಲಿ ಆಡಬೇಕಿತ್ತು. ಪಾಕಿಸ್ತಾನ ತಂಡವು ಆಗಸ್ಟ್ ಹಾಗೂ ಸೆಪ್ಟೆಂಬರ್‌ನಲ್ಲಿ ಇಂಗ್ಲೆಂಡ್ ಎದುರು ನಡೆಯಲಿರುವ ತಲಾ ಮೂರು ಪಂದ್ಯಗಳ ಟೆಸ್ಟ್ ಹಾಗೂ ಟ್ವೆಂಟಿ -20 ಸರಣಿ ಆಡಲಿದ್ದು 28 ಆಟಗಾರರು ಹಾಗೂ 14 ನೆರವು ಸಿಬ್ಬಂದಿಯನ್ನು ಕಳುಹಿಸಲಿದೆ.

ಈ ಮೊದಲೇ ವಿಶ್ವ ಮಾರಿ ಕೊರೊನಾ ಪ್ರಕರಣವು ಏರುಗತಿಯಲ್ಲಿ ಸಾಗುತ್ತಿರುವ ಕಾರಣ ಪಾಕ್ ತಂಡವು ತನ್ನ ತರಬೇತಿ ಶಿಬಿರವನ್ನು ರದ್ದುಗೊಳಿಸಿತ್ತು. ವೆಸ್ಟ್ ಇಂಡೀಸ್ ತಂಡದ ಮೂವರು ಆಟಗಾರರಾದ ಡ್ಯಾರೆನ್ ಬ್ರೇವೋ, ಸಿಮ್ರಾನ್ ಹೆಟ್ಮೇಯರ್‌ ಮತ್ತು ಕಿಮೋ ಪಾಲ್ ಅವರು  ಇಂಗ್ಲೆಂಡ್ ಪ್ರವಾಸದಿಂದ ಹಿಂದೆ ಸರಿಯುವುದಾಗಿ ಕಳೆದ ತಿಂಗಳು ಪ್ರಕಟಿಸಿದ್ದರು. ವೆಸ್ಟ್ ಇಂಡೀಸ್ ಈಗಾಗಲೇ ಇಂಗ್ಲೆಂಡ್ ತಲುಪಿದ್ದು ಜುಲೈ 8 ರಿಂದ ಸೌತಾಂಪ್ಟನ್‌ನಲ್ಲಿ ಮೊದಲ ಟೆಸ್ಟ್ ಆಡಲಿದೆ.

Vijayapatha - ವಿಜಯಪಥ

Leave a Reply

error: Content is protected !!
LATEST
KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪ್ರಣಾಪಾಯದಿಂದ ಪತ್ನಿ ಪಾರು 600ರಿಂದ 800 ಮಂದಿ ಅಧಿಕಾರಿಗಳಿಗಾಗಿ 1.07 ಲಕ್ಷ ನೌಕರರಿಗೆ ಅನ್ಯಾಯ ಮಾಡಲು ಹೊರಟಿರುವುದು ನ್ಯಾಯವೇ? KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರಿಗೆ ಸಮಾನ ವೇತನ ಲಾಭವೋ-ನಷ್ಟವೋ..!?? ಹರಿಯಾಣದಲ್ಲಿ ಸಮಾವೇಶ: ಎಂಎಸ್‌ಪಿ ಖಾತ್ರಿ ಕಾನೂನು ಜಾರಿಗೆ ಅನ್ನದಾತರ ಪಟ್ಟು ಪ್ರಜಾಪ್ರಭುತ್ವದ ಉಳಿವಿಗಾಗಿ ಮಾನವ ಸರಪಳಿ : ಉಸ್ತುವಾರಿ ಸಚಿವ ಮುನಿಯಪ್ಪ BMTC ಅಧಿಕಾರಿಗಳ ವಾಹನಗಳಿಗೂ ಖಾಸಗಿ ಚಾಲಕರ ನೇಮಕಕ್ಕೆ ಟೆಂಡರ್‌ ಕರೆದ ಸಂಸ್ಥೆ KSRTC ಮಡಿಕೇರಿ: ವೇತನ ಬಿಡುಗಡೆ ಆಗ್ರಹಿಸಿ ಪ್ರತಿಭಟನೆಗೆ ಇಳಿದ ಗುತ್ತಿಗೆ ಚಾಲಕರು KSRTC ನೌಕರರ ನಂಬಿಸಲು ಹೋದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳಿಂದಲೇ ಅವರ ಊಸರವಳ್ಳಿ ಬಣ್ಣ ಬಯಲು..! KSRTC : ಗಣಪತಿ ಪ್ರತಿಷ್ಠಾಪಿಸಿದ್ದರಿಂದ ಡಿಪೋ ಮುಂದೆ ಚಾಲಕ ರವಿ ಪಾರ್ಥಿವ ಶರೀರ ಇಡಲಾತ್ತು, ಪ್ರಮಾದವಾಗಿಲ್ಲ- ಡಿಎಂ ಸಮ... 10 ವರ್ಷದ ಆಧಾರ್‌ ನವೀಕರಣಕ್ಕೆ ಡೆಡ್‌ಲೈನ್‌ ಫಿಕ್ಸ್‌: ನಾಳೆ ಅಂತಿಮ ಗಡುವು- ಬಳಿಕ ದಂಡ