NEWSನಮ್ಮರಾಜ್ಯವಿಜ್ಞಾನ

ಸಾರಿಗೆ ಅಧಿಕಾರಿಗಳಿಂದ ಪ್ರಯಾಣಿಕರ ದಾರಿ ತಪ್ಪಿಸುವ ಯತ್ನ: ಮೆಜೆಸ್ಟಿಕ್‌ನಲ್ಲಿ ಚಾಲಕ ನಿರ್ವಾಹಕರಿಲ್ಲದ ಬಸ್‌ಗಳು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೆಜೆಸ್ಟಿಕ್‌ಗೆ ಬಿಎಂಟಿಸಿಯ ಎರಡು ಬಸ್‌ಗಳನ್ನು ತೆಗೆದುಕೊಂಡು ಬರುವ ಮುಖಾಂತರ ಪ್ರಯಾಣಿಕರನ್ನು ಇನ್ನಷ್ಟು ಸಮಸ್ಯೆಗೆ ದೂಡಲು ಸಾರಿಗೆ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ಸ್ವತಃ ಪ್ರಯಾಣಿಕರೆ ಕಿಡಿಕಾರುತ್ತಿದ್ದಾರೆ.

ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ನಿನ್ನೆಯಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರು ಇಂದು ಕೂಡ ಮುಷ್ಕರವನ್ನು ಮುಂದುವರಿಸಿದ್ದಾರೆ. ಈ ನಡುವೆ ಇಂದು ಮೆಜೆಸ್ಟಿಕ್‌ಗೆ ಚಾಲಕ ಮತ್ತು ನಿರ್ವಾಹಕರಿಲ್ಲದ ಎರಡು ಬಸ್‌ಗಳನ್ನು ಖಾಸಗಿ ಚಾಲಕರ ಮೂಲಕ ಕರೆತಂದಿರುವ ಸಾರಿಗೆ ಅಧಿಕಾರಿಗಳು ನೌಕರರು ಮತ್ತು ಪ್ರಯಾಣಿಕರುನ್ನು ದಾರಿ ತಪ್ಪಿಸುವ ಕೆಲಸಕ್ಕೆ ಮುಂದಾಗಿದ್ದಾರೆ.

ಸಾರಿಗೆ ಅಧಿಕಾರಿಗಳು ಮಾಡುತ್ತಿರುವ ಈ ಎಡವಟ್ಟಿನಿಂದ ಜನರಿಗೆ ತುಂಬ ತೊಂದರೆಯಾಗುವುದು ಖಚಿತವಾಗಿದೆ. ಅಂದರೆ ಮೆಜೆಸ್ಟಿಕ್‌ಗೆ ಬಂದಿರುವ ಎರಡುವ ಬಸ್‌ಗಳು ಯಾವ ಮಾರ್ಗದಲ್ಲಿ ಚಲಿಸುತ್ತವೆ ಮತ್ತು ಚಾಲಕ ನಿರ್ವಾಹಕರು ಯಾರು ಎಂಬುವುದೇ ಇಲ್ಲ. ಆದರೆ, ಬೆಂಗಳೂರಿನಲ್ಲಿ ಬಿಎಂಟಿಸಿ ರಸ್ತೆಗಿಳಿದಿವೆ ಎಂದು ಜನರ ದಾರಿ ತಪ್ಪಿಸುವ ಕೆಲಸಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ.

ಈ ನಡುವೆ ಪ್ರತಿಭಟನಾ ನಿರತ ನೌಕರರು ನಮ್ಮ ಬೇಡಿಕೆ ಈಡೇರುವವರೆಗೂ ಯಾವುದೇ ಬಸ್‌ಗಳನ್ನು ಚಾಲನೆ ಮಾಡಲು ಬಿಡುವುದಿಲ್ಲ ಎಂದು ಕಡ ಕಂಡಿತವಾಗಿ ಹೇಳುತ್ತಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್