NEWSನಮ್ಮರಾಜ್ಯರಾಜಕೀಯವಿಜ್ಞಾನ

ಸಾರಿಗೆ ನೌಕರರ ಮುಖಂಡರೊಂದಿಗೆ ವಿಕಾಸಸೌಧದಲ್ಲಿ ಸಭೆ: ಲಕ್ಷ್ಮಣ ಸವದಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿ ನಾಲ್ಕೂ ಸಾರಿಗೆ ನಿಗಮಗಳ ನೌಕರರು ಪ್ರತಿಭಟನೆಗೆ ಇಳಿದಿದ್ದು, ಇದರಿಂದ ಬೆಂಗಳೂರು ನಗರ ಸೇರಿ ರಾಜ್ಯಾದ್ಯಂತ ಸಾರಿಗೆ ಸೇವೆಯಲ್ಲಿ ವ್ಯತ್ಯಯವಾಗಿದೆ.

ಇದೇ ಬೇಡಿಕೆ ಮುಂದಿಟ್ಟು ನಿನ್ನೆ ಬೆಂಗಳೂರಿನಲ್ಲಿ ನೌಕರರು ಪ್ರತಿಭಟನೆ ನಡೆಸಿದಾಗ ಆ ನೌಕರರನ್ನು ಬಂಧಿಸಿರುವುದು ನೌಕರರ ಆಕ್ರೋಶಕ್ಕೆ ಕಾರಣವಾಗಿದೆ. ಇದರಿಂದ ಇಂದು ಏಕಾಏಕಿ ನೌಕರರು ಕರ್ತವ್ಯಕ್ಕೆ ಹಾಜರಾಗದೆ ಪ್ರತಿಭಟನೆಗೆ ಇಳಿದಿದ್ದಾರೆ. ಇದರ ಬಿಸಿ ಸರ್ಕಾರಕ್ಕೆ ಬಹಳ ಜೋರಾಗಿಯೇ ತಟ್ಟಿದ್ದು, ಪ್ರತಿಭಟನ ನಿರತ ನೌಕರರ ಪ್ರಮುಖರೊಂದಿಗೆ ಸಾರಿಗೆ ಸಚಿವ ಲಕ್ಷ್ಮಣ ಸವದಿಯವರು ಮಧ್ಯಾಹ್ನ ವಿಕಾಸ ಸೌಧದಲ್ಲಿ ಸಭೆ ಕರೆದಿದ್ದಾರೆ.

ಜತೆಗೆ ನೌಕರರು ಮುಷ್ಕರ ನಿಲ್ಲಿಸಿ ಕರ್ತವ್ಯಕ್ಕೆ ಹಾಜರಾಗಿ ಈ  ಕೋವಿಡ್‌ ಸಮಯದಲ್ಲಿ ಇಂಥ ಕೆಲಸಕ್ಕೆ ನೀವು ಕೈಹಾಕಿ ನಾಡಿನ ಜನರಿಗೆ ಹೊರೆ ಮಾಡಬೇಡಿ ಎಂದು ಸಚಿವರು ಮನವಿ ಮಾಡಿದ್ದಾರೆ.

ಈ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಕೂಡ ಮಾತನಾಡಿದ್ದು, ಶಾಂತಿಯುತವಾಗಿ ನಿಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಮುಂದೆ ಬನ್ನಿ. ಮುಷ್ಕರ ಕೈ ಬಿಡಿ ಎಂದು ಕೇಳಿಕೊಂಡಿದ್ದಾರೆ. ಹೀಗಾಗಿ ವಿಕಾಸಸೌಧದಲ್ಲಿ ನಡೆಯುವ ಸಭೆಯಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೋ ಅದನ್ನು ನೋಡಿಕೊಂಡು ಸಾರಿಗೆ ನೌಕರರು ಮುಂದಿನ ನಡೆ ಅನುಸರಿಸುವುದಾಗಿ ಹೇಳುತ್ತಿದ್ದಾರೆ.

1 Comment

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್