NEWSನಮ್ಮಜಿಲ್ಲೆರಾಜಕೀಯ

ಮೈಸೂರು ಮೇಯರ್ ರುಕ್ಮಿಣಿ ಮಾದೇಗೌಡರಿಗೆ ಎದುರಾಗಿದೆ ಸಂಕಷ್ಟ: ಪಾಲಿಕೆ ಸದಸ್ಯತ್ವ ಸ್ಥಾನ ಕಳೆದುಕೊಳ್ತಾರಾ ನೂತನ ಮೇಯರ್ ?

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು: ಮಹಾನಗರ ಪಾಲಿಕೆಯ ನೂತನ ಮೇಯರ್ ರುಕ್ಮಿಣಿ ಮಾದೇಗೌಡ ಅವರು ಆರಂಭದಲ್ಲೇ ವಿವಾದದ ಸುಳಿಗೆ ಸಿಲುಕಿದ್ದಾರೆ. ತಮ್ಮ ಪಾಲಿಕೆ ಸದಸ್ಯತ್ವ ಸ್ಥಾನ ಕುರಿತು ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ರಜನಿ ಅಣ್ಣಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ಎದುರಾಗಿತ್ತು. ಹೀಗಾಗಿ ಅಧಿಕಾರ ಸ್ವೀಕಾರ ಮಾಡಿದ ಮೊದಲ ದಿನವೇ ರುಕ್ಮಿಣಿ ಅಗ್ನಿಪರೀಕ್ಷೆ ಎದುರಿಸುವಂತಾಗಿತ್ತು. ಆದರೆ ಕೋರ್ಟ್‌ ವಿಚಾರಣೆ ಮುಂದೂಡಿದ್ದರಿಂದ ನೆಮ್ಮದಿಯ ನಿಟ್ಟಿಸಿರು ಬಿಟ್ಟಿದ್ದಾರೆ.

ಹೌದು! ಮೈಸೂರು ಪಾಲಿಕೆಯ ನೂತನ ಮೇಯರ್ ಆದ ಮೊದಲ ದಿನವೇ ಅಗ್ನಿಪರೀಕ್ಷೆ ಎದುರಿಸಿದ್ದಾರೆ. ವಿವಾದದ ಸುಳಿಯಲ್ಲಿ ಸಿಲುಕಿದ ಮೇಯರ್ ರುಕ್ಮಿಣಿ ಮಾದೇಗೌಡರ ಸದಸ್ಯತ್ವ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಗುರುವಾರ ಕೋರ್ಟ್ ನಲ್ಲಿ ವಿಚಾರಣೆ ನಡೆದಿದೆ.

ವಾರ್ಡ್ ನಂಬರ್ 36ರ ಸದಸ್ಯರಾಗಿರುವ ರುಕ್ಮಿಣಿ ಮಾದೇಗೌಡ ಚುನಾವಣೆ ವೇಳೆ ಕ್ಯಾಟಗರಿ ಬಗ್ಗೆ ತಪ್ಪು ಮಾಹಿತಿ ನೀಡಿದ ಆರೋಪ ಎದುರಿಸುತ್ತಿದ್ದಾರೆ. ಬಿಸಿಎಂ(ಬಿ)ಗೆ ನಿಗದಿಯಾಗಿದ್ದ ವಾರ್ಡ್ನಲ್ಲಿ ತೆರಿಗೆ ಪಾವತಿದಾರರಾಗಿರುವ ಇವರಿಂದ ಚುನಾವಣೆ ಆಯೋಗದ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಅಲ್ಲದೆ ಇವರು ನಗರ ನಿವಾಸಿ ಅಲ್ಲ ಅನ್ನೋ ಆರೋಪವೂ ರುಕ್ಮಿಣಿ ಮಾದೇಗೌಡರ ಮೇಲಿದೆ. ಈ ಎಲ್ಲ ಕಾರಣಕ್ಕೆ ನ್ಯಾಯಾಲಯದ ಮೊರೆಹೋಗಿದ್ದ ರಜನಿ ಅಣ್ಣಯ್ಯ ರುಕ್ಮಿಣಿ ಮಾದೇಗೌಡರ ಸದಸ್ಯತ್ವ ರದ್ದು ಮಾಡುವಂತೆ ಮನವಿ ಮಾಡಿದ್ದರು.

ಕೆಳಹಂತದ ನ್ಯಾಯಾಲಯದಲ್ಲಿ ರುಕ್ಮಿಣಿ ಮಾದೇಗೌಡರ ಪರ ತೀರ್ಪು ಬಂದಿತ್ತು. ಇದನ್ನು ಪ್ರಶ್ನಿಸಿ ಜಿಲ್ಲಾ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದಾಗ ರುಕ್ಮಿಣಿ ಮಾದೇಗೌಡ ವಿರುದ್ಧ ತೀರ್ಪು ಬಂದಿತ್ತು. ಡಿಸೆಂಬರ್ 14- 2020ರಲ್ಲಿ ರುಕ್ಮಿಣಿ ಸದಸ್ಯತ್ವ ರದ್ದು ಮಾಡಲು ನ್ಯಾಯಾಲಯ ನಿರ್ದೇಶನ ನೀಡಿತ್ತು. ಅಲ್ಲದೆ ರಜನಿ ಅಣ್ಣಯ್ಯ ಅವರನ್ನು ಸದಸ್ಯೆ ಎಂದು ಘೋಷಿಸಲು ಆದೇಶಿಸಿ, ಪ್ರಮಾಣ ಪತ್ರ ನೀಡುವಂತೆ ತಿಳಿಸಿತ್ತು.

ಆನಂತರ ಇದನ್ನು ಪ್ರಶ್ನಿಸಿ ರುಕ್ಮಿಣಿ ಮಾದೇಗೌಡ ಹೈ ಕೋರ್ಟ್ ಮೊರೆ ಹೋಗಿದ್ದಾರೆ. ಈಗ ರುಕ್ಮಿಣಿ ಮಾದೇಗೌಡರ ವಿರುದ್ಧ ನೀಡಿರುವ ಜಿಲ್ಲಾ ನ್ಯಾಯಾಲಯದ ತೀರ್ಪಿಗೆ ಹೈ ಕೋರ್ಟ್‌ ತಡೆ ನೀಡಿದೆ.

ಇನ್ನು ನಿನ್ನೆ ನಡೆದ ವಿಚಾರಣೆಯಲ್ಲಿ ರುಕ್ಮಿಣಿ ಮಾದೇಗೌಡರಿಗೆ ಕೊಂಚ ರಿಲೀಫ್ ಸಿಕ್ಕಿದ್ದು, ಸಮಯ ನಿಗದಿ ಪಡಿಸದೆ ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ. ಬಿಸಿಎಂ(ಬಿ) ಮೀಸಲಾತಿ ಕ್ಷೇತ್ರದಲ್ಲಿ ಸ್ಪರ್ಧೆ ಹಾಗೂ ನಗರವಾಸಿಯಲ್ಲ ಎಂಬ ಆರೋಪದ ಮೇಲೆ ವಿಚಾರಣೆ ನಡೆಸಿದ ಕೋರ್ಟ್ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದಿನಾಂಕ ನಿಗದಿಪಡಿಸದೆ ಮುಂದೂಡಿದೆ. ಹೀಗಾಗಿ ರುಕ್ಮಿಣಿ ಮಾದೇಗೌಡರಿಗೆ ಸ್ವಲ್ಪ ನೆಮ್ಮದಿ ನೀಡಿದೆ.

ಆದರೆ ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿರುವ ಹೈಕೋರ್ಟ್‌ ಏಕ ಸದಸ್ಯ ಪೀಠದ ಮುಂದೆ ಅರ್ಜಿ ವಿಚಾರಣೆ ಮಾಡಿ, ತಪ್ಪು ಅಫಿಡೆವಿಟ್ ವಿಚಾರ ಸಾಬೀತಾದರೆ ಸದಸ್ಯತ್ವ ಕಳೆದುಕೊಳ್ಳುವ ಸಾಧ್ಯತೆಯಿದೆ. ಹಾಗೇನಾದರೂ ಸದಸ್ಯತ್ವ ರದ್ದಾದರೆ ಮೇಯರ್ ಸ್ಥಾನವನ್ನು ಕಳೆದುಕೊಳ್ಳುವ ರುಕ್ಮಿಣಿ ಮಾದೇಗೌಡರು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಯೂ ಇದೆ.

ಇನ್ನು ಮೇಯರ್‌ ಗಾದಿಗೆ ಏರಬೇಕು ಎಂದು ಹೋರಾಡಿ ಸೋತಿರುವ ಬಿಜೆಪಿ ಈ ವಿಚಾರವನ್ನು ಮುಂದಿಟ್ಟುಕೊಂಡು ಮತ್ತೊಮ್ಮೆ ಮೇಯರ್ ಗಾದಿಗೇರುವ ಆಸೆ ಹೊಂದುತ್ತಿದೆ. ಆದರೆ ಏನಾಗುತ್ತದೆ ಅನ್ನುವುದು ಈಗ ಕುತೂಹಲಕಾರಿಯಾಗಿದೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್