NEWSನಮ್ಮರಾಜ್ಯರಾಜಕೀಯ

ಬಿಜೆಪಿಯವರು ಕೊಟ್ಟ ನೋಟಿಸ್‌ಗೆ ಹೆದರಲ್ಲ: ಸಿದ್ದು ಗುದ್ದು

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಬಿಜೆಪಿ ನಾಯಕರು ನೀಡಿರುವ ನೋಟಿಸ್ ಗೆ ನಾನೇನೂ ಹೆದರುವುದಿಲ್ಲ. ನಾನೂ ಒಬ್ಬ ಲಾಯರ್‌ ತಾನೇ” ಎಂದು ವಿಪಕ್ಷದ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಶನಿವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,  ಭ್ರಷ್ಟಾಚಾರ ಆರೋಪಕ್ಕೆ ನೋಟಿಸ್ ನೀಡಿದ ವಿಚಾರದ ಬಗ್ಗೆ ಕಿಡಿಕಾರಿದ್ದು, ನೋಟಿಸ್ ಬಂಡವಾಳ ಏನುಯೆಂದು ನನಗೆ ಗೊತ್ತಿಲ್ವಾ, ಆ ನೋಟಿಸ್ ‌ಗೆ ನಾನೇನು ಹೆದರಿಕೊಳ್ತಿನಾ. ನಾನು ಆರೋಪ ಮಾಡಿರೋದು ಸರ್ಕಾರದ ಮೇಲೆ. ಅವನ್ಯಾರೋ ನೋಟಿಸ್ ಕೊಟ್ಟಿದ್ದಾನೆ ಎಂದರೆ ಏನ್ ಪ್ರಯೋಜನ ಎಂದು ಲೇವಡಿ ಮಾಡಿದ್ದಾರೆ.

ಡಿಕೆಶಿ ತಪ್ಪಿತಸ್ಥ ಅಂತ ತೀರ್ಮಾನ ಆಗಿದ್ಯಾ ಅದು ರಾಜಕೀಯ ದುರುದ್ದೇಶದಿಂದ ಹಾಕಿರುವ ಕೇಸ್. ಅವರಿಗೆ ಕೋರ್ಟು ಜಾಮೀನು ಕೊಟ್ಟಿದೆ. ಆ ಬಗ್ಗೆ ನಾನು ಮಾತನಾಡೋಲ್ಲ ಎಂದು ಜೈಲಿಗೆ ಹೋಗಿ ಬಂದ ಡಿಕೆಶಿ ಪಕ್ಕದಲ್ಲಿ ಸಿದ್ದರಾಮಯ್ಯ ಕುಳಿತಿದ್ದಾರೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ತಿರುಗೇಟು ನೀಡಿ, ಇವರಿಗೇನು ಬಹಳ ನೈತಿಕತೆ ಇದೆಯೇ ಎಂದು ಪ್ರಶ್ನಿಸಿದ್ದಾರೆ.

ಹೂಬ್ಲೋಟ್ ವಾಚ್ ವಿವಾದ‌ ಮುಗಿದು ಹೋದ ಕಥೆ ಮತ್ತ್ಯಾಕೆ ಈಗ ಅದರ ಬಗ್ಗೆ ಚರ್ಚೆ.  ನಾನು ಯಡಿಯೂರಪ್ಪರ ಹಳೆ ಕೇಸ್ ಬಗ್ಗೆ ಮಾತಾಡ್ಲಾ? ನಾನು ಸರ್ಕಾರಕ್ಕೆ ಆ ವಾಚ್ ವಾಪಸ್‌ ಕೊಟ್ಟಿದ್ದೇನೆ. ಎಸಿಬಿ ತನಿಖೆ ಆಗಿ ಕ್ಲೀನ್ ಚಿಟ್ ಸಿಕ್ಕಿದೆ. ನಾನೇನು ವಾಚ್ ಸರ್ಕಾರದ ದುಡ್ಡಿನಿಂದ ತೆಗೆದುಕೊಂಡಿದ್ನಾ, ಸರ್ಕಾರದಿಂದ ಲೂಟಿ ಮಾಡಿದ ದುಡ್ಡಿನಿಂದ ವಾಚ್ ಖರೀದಿಸಿದ್ನಾ ಎಂದು ಬಿಜೆಪಿಗರಿಗೆ ತಿರುಗೇಟು ನೀಡಿದ ಅವರು, ಅದನ್ನ ಯಾರೋ ಕೊಟ್ಟಿದ್ರು, ಅದಕ್ಕೆ ಅವರು ಅಫಿಡೇವಿಟ್ ಕೊಟ್ಟಿದ್ದಾರೆ. ಇನ್ನು ಈಗ  ಜನರನ್ನ ದಾರಿ ತಪ್ಪಿಸುವ ಕೆಲಸ ಮಾಡುವ ಉದ್ದೇಶದಿಂದ ಈ ಬಗ್ಗೆ ಕ್ಯಾತೆ ತೆಗೆದಿದ್ದಾರೆ, ಅಷ್ಟೆ ಹೊರತು ಬೇರೇನಲ್ಲ, ಇದಕ್ಕೆ ಪುನಃ ಪ್ರತಿಕ್ರಿಯಿಸುವುದಿಲ್ಲ ಎಂದು ಹೂಬ್ಲೋಟ್ ವಾಚ್ ವಿವಾದಕ್ಕೆ ಸಂಬಂಧಿಸಿದಂತೆ  ಪ್ರಶ್ನೆಗೆ ತೆರೆಯೆಳೆದರು.

Leave a Reply

error: Content is protected !!
LATEST
ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆಗಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ ಸಲ್ಲಿಸಿದ ಕೆಎಚ್‌ಎಂ ಹೈಕೋರ್ಟ್ ಬಿಗ್ ಶಾಕ್ ಜತೆಗೆ ಸಿಎಂ ಸಿದ್ದರಾಮಯ್ಯಗೆ ನಾಳೆ ಕೂಡ ಮಹತ್ವದ ದಿನ ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ- ಗವರ್ನರ್ ಆದೇಶ ಎತ್ತಿ ಹಿಡಿದ ಹೈಕೋರ್ಟ್‌ ಬೆಂಗಳೂರು ಗ್ರಾಮಾಂತರ: ಉನ್ನತ ಗ್ರಾಮ ಅಭಿಯಾನದಡಿ ಜಿಲ್ಲೆಯ 14 ಗ್ರಾಮಗಳು ಆಯ್ಕೆ: ಜಿಲ್ಲಾಧಿಕಾರಿ ಡಾ.ಶಿವಶಂಕರ್ ಮಾನಸಿಕ ಆರೋಗ್ಯ ಸಮಾಲೋಚಕರ  ಹುದ್ಧೆಗೆ ಅರ್ಜಿ ಆಹ್ವಾನ ಬಿಬಿಎಂಪಿ ಮೈದಾನದ ಗೇಟ್ ಬಿದ್ದು 11 ವರ್ಷದ ಬಾಲಕ ಮೃತ KSRTC ಚಾ.ನಗರ ವಿ.ಕಾರ್ಯಾಗಾರದಿಂದ ಅಕ್ರಮವಾಗಿ ಖಾಸಗಿಯವರಿಗೆ ರವಾನೆಯಾದ ಇಂಜಿನ್‌ ಟ್ರಾಲಿ, ಸ್ಟ್ಯಾಂಡ್‌ ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ...