NEWSನಮ್ಮಜಿಲ್ಲೆ

ತಿ.ನರಸೀಪುರ ವ್ಯಕ್ತಿಗೆ ಕೊರೊನಾ ಪಾಸಿಟಿವ್

ವಿಜಯಪಥ ಸಮಗ್ರ ಸುದ್ದಿ

ತಿ.ನರಸೀಪುರ: ಬೆಂಗಳೂರಿನಿಂದ  ತಿ.ನರಸೀಪುರ ತಾಲೂಕಿನ ಸೋಸಲೆ ಗ್ರಾಮದ ಎಸ್ ಕೆಪಿ ಅಗ್ರಹಾರದ ತನ್ನ ಮನೆಗೆ ಬಂದಿದ್ದ ವ್ಯಕ್ತಿಗೆ  ಕೊರೊನಾ ಪಾಸಿಟಿವ್ ದೃಢ ಪಟ್ಟಿದ್ದು  ಇದರಿಂದ ತಾಲೂಕಿನಾದ್ಯಂತ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಮೊದಲಿನಿಂದಲೂ ಗ್ರೀನ್ ಜೋನ್ ನಲ್ಲೇ ಇದ್ದ ತಾಲೂಕಿನಲ್ಲಿ ಕೊರೊನಾ ತನ್ನ ಖಾತೆಯನ್ನು ಈತನ ಮೂಲಕ ತೆರೆದಿದೆ. ಇದರಿಂದ ತಾಲೂಕು ಗ್ರೀನ್ ಜೋನ್ ಎಂಬ ಹಣೆ ಪಟ್ಟಿಯಿಂದ ತಾಲೂಕು ಹೊರ ಬಂದಂತ್ತಾಗಿದೆ.

ಇತ್ತೀಚೆಗೆ ಬೆಂಗಳೂರಿನಿಂದ ಬಂದಿದ್ದ 32 ವರ್ಷದ ಈತನಿಗೆ ಜ್ವರ, ನೆಗಡಿ ಕಾಣಿಸಿಕೊಂತ್ತು. ಹೀಗಾಗಿ ಗುರುವಾರ  ಪಟ್ಟಣದ ಸರಕಾರಿ ಆಸ್ಪತ್ರೆಗೆ ದಾಖಲಿಸಿ  ಪರೀಕ್ಷೆ ಮಾಡಿದ ಬಳಿಕ ರಕ್ತದ ಮಾದರಿಯನ್ನು ಮೈಸೂರಿನ ಕೋವಿಡ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿತ್ತು.

ಆದರೆ ಇಂದು ಕೋವಿಡ್ ಆಸ್ಪತ್ರೆಯಿಂದ ಬಂದಿರುವ ವರದಿಯಲ್ಲಿ ಈತನಿಗೆ  ಕೊರೊನಾ ಪಾಸಿಟಿವ್ ಇರುವುದು ದೃಡಪಟ್ಟಿದೆ. ಈ ಹಿನ್ನೆಲೆಯಲ್ಲಿ ಆತನನ್ನು ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಕಳುಹಿಸಿ ಕೊಡಲಾಗಿದೆ.

ತಾಲೂಕಿನಲ್ಲಿ ಒಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಪಟ್ಟಣದಲ್ಲೀಗ ಆತಂಕ ಮನೆ ಮಾಡಿದೆ. ಸೋಸಲೆ ಗ್ರಾಮವನ್ನು ಸೀಲ್ ಡೌನ್ ಮಾಡುವ ಸಾಧ್ಯತೆ ಇದ್ದು, ಗ್ರಾಮಸ್ಥರು  ಎಚ್ಚರಿಕೆಯಿಂದಿರುವಂತೆ ತಾಲೂಕು ಆರೋಗ್ಯಾಧಿಕಾರಿ ಡಾ.ರವಿ ಕುಮಾರ್  ಸಲಹೆ ನೀಡಿದ್ದಾರೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್