NEWSಕೃಷಿನಮ್ಮರಾಜ್ಯ

ಉದ್ದು, ಹೆಸರು, ಅಲಸಂದೆ ಬೆಳೆಗಳಿಗೆ ಹಳದಿ ರೋಗ: ಹತೋಟಿಗೆ ಕ್ರಮ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ತಾಲೂಕಿನಾದ್ಯಂತ ಪೂರ್ವ ಮುಂಗಾರಿನಲ್ಲಿ ಬಿದ್ದ ಮಳೆಗೆ ರೈತರು ಉದ್ದು, ಹೆಸರು ಹಾಗೂ ಅಲಸಂದೆ ಬೆಳೆಗಳನ್ನು ಬಿತ್ತಿದ್ದು, ಈ ಬೆಳೆಗಳಲ್ಲಿ ಹೆಚ್ಚಾಗಿ ಹಳದಿ ಮಚ್ಚೆರೋಗ (Yellow mosaic virus) ಕಾಣಿಸಿಕೊಂಡಿದ್ದು, ತಾಕುಗಳು ಸಂಪೂರ್ಣ ಹಳದಿ ಬಣ್ಣಕ್ಕೆ ತಿರುಗಿ ಕಾಳುಗಳ ಉತ್ಪತ್ತಿ ಹಾಗೂ ಗುಣಮಟ್ಟದ ಮೇಲೆ ದುಷ್ಪರಿಣಾಮವನ್ನುಂಟು ಮಾಡುತ್ತದೆ.

ಹೆಸರು ಮತ್ತು ಉದ್ದು ಬೆಳೆಯಲ್ಲಿ ಹಳದಿ ಮಚ್ಚೆರೋಗ: ಈ ಹಸಿರು ಮಿಶ್ರಿತ ಹಳದಿ ರೋಗವು ಮೊದಮೊದಲು ಒಂದು ಅಥವಾ ಎರಡು ಗಿಡಗಳಿಗೆ ಕಾಣಿಸಿಕೊಂಡು ನಂತರ ಬಿಳಿನೊಣಗಳ ಮೂಲಕ ಅತಿ ಹೆಚ್ಚು ವೇಗವಾಗಿ ಪ್ರಸಾರವಾಗುತ್ತಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಅಲಸಂದೆ ಹಳದಿ ರೋಗ: ಈ ರೋಗವು ಅಲಸಂದೆ ತಾಕುಗಳಲ್ಲಿ ಹೆಚ್ಚು ಕಂಡುಬಂದಿದ್ದು ಎಫಿಡ್ ಎಂಬ ಹೇನಿನ ಮೂಲಕ ಹರಡುತ್ತಿದೆ. ವಾತಾವರಣದಲ್ಲಿ ಹೆಚ್ಚು ಉಷ್ಣಾಂಶ ಹಾಗೂ ತೇವಾಂಶಗಳಿದ್ದು, ಈ ಕೀಟವು ತ್ವರಿತಗತಿಯಲ್ಲಿ ಸಂತಾನಾಭಿವೃದ್ಧಿ ಮಾಡಿ ಮರಿ ಹಾಗೂ ರೆಕ್ಕೆಬಂದಂತಹ ಹೇನಿಗಳ ಮೂಲಕ ಹಾರಿ ಒಂದು ಗಿಡದಿಂದ ಮತ್ತೊಂದು ಗಿಡಕ್ಕೆ ರಸ ಹೀರುವ ಮೂಲಕ ರೋಗವನ್ನು ಪ್ರಸಾರಮಾಡುತ್ತದೆ.

ಉದ್ದು, ಹೆಸರು ಹಾಗೂ ಅಲಸಂದೆ ಬೆಳೆಗಳಿಗೆ ಹಳದಿ ಮಚ್ಚೆರೋಗ ಬಂದಿದ್ದಲ್ಲಿ ರೈತರು ಕೀಟನಾಶಕಗಳಾದ ರೋಗರ್ 1.75 ಮಿ.ಲೀ. ಒಂದು ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸುವುದು ಅಥವಾ ಇಮಿಡಾಕ್ಲೋಪ್ರಿಡ್ 0.50 ಮಿ.ಲೀ. ಒಂದು ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸುವುದು. ಸಿಂಪಡಣೆ ಆದ ನಂತರ ರೋಗಗ್ರಸ್ತ ಗದ್ದೆ ಅಥವಾ ಹೊಲಗಳಲ್ಲಿರುವ ಹಳದಿ ಮಿಶ್ರಿತ ಗಿಡಗಳನ್ನು ಕಿತ್ತು ನಾಶಪಡಿಸುವುದು.

ಹೆಚ್ಚಿನ ಮಾಹಿತಿಗಾಗಿ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸುವಂತೆ ಸಹಾಯಕ ಕೃಷಿ ನಿರ್ದೇಶಕ ವೀರಣ್ಣ ಕೆ.ಪಿ ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್