NEWSದೇಶ-ವಿದೇಶ

ದೇಶದ ಜನರ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿದ ಕೇಂದ್ರ ಸರ್ಕಾರ

ಶಿಪ್ಪಿಂಗ್ ಖಾತೆಯ ಸಹಾಯಕ (ಪ್ರಭಾರ) ಸಚಿವ ಮನ್‌ಸುಖ್ ಮಾಂಡವೀಯ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕೋವಿಡ್ -19 ಜಾಗತಿಕ ಸಾಂಕ್ರಾಮಿಕದ ವಿರುದ್ಧ ಧೈರ್ಯದಿಂದ ಹೋರಾಟ ನಿರತವಾಗಿರುವ ದೇಶದ ಆರ್ಥಿಕತೆ ಮತ್ತು ಜನರನ್ನು ಆರ್ಥಿಕ ಸಬಲರನ್ನಾಗಿ ಮಾಡಲು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರ ಘೋಷಣೆಗಳು ಉತ್ತಮವಾಗಿವೆ ಎಂದು ಶಿಪ್ಪಿಂಗ್ ಖಾತೆಯ ಸಹಾಯಕ (ಪ್ರಭಾರ) ಮತ್ತು ರಾಸಾಯನಿಕಗಳು ಹಾಗೂ ರಸಗೊಬ್ಬರ ಖಾತೆ  ಸಹಾಯಕ ಸಚಿವ ಮನ್‌ಸುಖ್ ಮಾಂಡವೀಯ ತಿಳಿಸಿದ್ದಾರೆ.

ಹಣಕಾಸು ಸಚಿವರು ತಮ್ಮ ಮೊದಲ ಕಂತಿನಲ್ಲಿ ಕೆಲಸಕ್ಕೆ ಮರಳುವ ನಿಟ್ಟಿನಲ್ಲಿ ಕ್ರಮಗಳನ್ನು ಪ್ರಕಟಿಸಿದರು. ಉದ್ಯೋಗಿಗಳನ್ನು, ಉದ್ಯೋಗದಾತರನ್ನು, ವ್ಯಾಪಾರೋದ್ಯಮಗಳನ್ನು ಅದರಲ್ಲೂ ವಿಶೇಷವಾಗಿ ಕಿರು, ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು ಉತ್ಪಾದನೆ ಪುನರಾರಂಭಿಸುವ ನಿಟ್ಟಿನಲ್ಲಿ ಮತ್ತು ಕೆಲಸಗಾರರಿಗೆ ಪ್ರಯೋಜನಕಾರಿ ಉದ್ಯೋಗಕ್ಕೆ ಮರಳಲು ಸಮರ್ಥವಾಗುವಂತಹ ಕ್ರಮಗಳನ್ನು ಘೋಷಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಬ್ಯಾಂಕಿಂಗೇತರ ಸಂಸ್ಥೆಗಳನ್ನು (ಎನ್.ಬಿ.ಎಫ್.ಸಿ.ಗಳು) ಹೌಸಿಂಗ್ ಫೈನಾನ್ಸ್ ಕಂಪೆನಿಗಳು (ಎಚ್.ಎಫ್.ಸಿ.ಗಳು ) ಕಿರು ಹಣಕಾಸು ವಲಯ ಮತ್ತು ವ್ಯಾಪಾರೋದ್ಯಮಗಳಿಗೆ ತೆರಿಗೆ ಪರಿಹಾರ,ಸಾರ್ವಜನಿಕ ಖರೀದಿಯಲ್ಲಿ ಗುತ್ತಿಗೆದಾರರಿಗೆ ಗುತ್ತಿಗೆ ಬದ್ದತೆಗಳಿಗೆ ಪರಿಹಾರ ಮತ್ತು ರಿಯಲ್ ಎಸ್ಟೇಟ್ ವಲಯಕ್ಕೆ ಅನುಸರಣಾ ಪರಿಹಾರಗಳು ವ್ಯಾಪಾರೋದ್ಯಮಕ್ಕೆ ಮತ್ತು ಆರ್ಥಿಕ ಚಟುವಟಿಕೆಗಳಿಗೆ ಬೆಂಬಲ ಮತ್ತು ಉತ್ತೇಜನ ನೀಡುತ್ತವೆ ಎಂದು ಮಾಂಡವೀಯ ಹೇಳಿದರು.

ಎರಡನೇ ಕಂತಿನಲ್ಲಿ ಪ್ರಕಟಿಸಿದ ಕ್ರಮಗಳು ನಿರ್ದಿಷ್ಟವಾಗಿ ವಲಸೆ ಕಾರ್ಮಿಕರು , ಬೀದಿ ಬದಿ ವ್ಯಾಪಾರಿಗಳು , ವಲಸೆ ಬಂದ ನಗರಗಳ ಬಡವರು, ಸಣ್ಣ ವ್ಯಾಪಾರಿಗಳು , ಸ್ವ ಉದ್ಯೋಗಿಗಳು , ಸಣ್ಣ ರೈತರು ಎದುರಿಸಿದ ಕಷ್ಟ ಪರಿಸ್ಥಿತಿಯ ಬಗ್ಗೆ ಮತ್ತು ವಸತಿ ಸಮಸ್ಯೆಯ ಬಗ್ಗೆ ಗಮನ ಹರಿಸಿದ್ದು, ಅದನ್ನು ಉತ್ತಮಪಡಿಸುವ ಇರಾದೆಯನ್ನು ಹೊಂದಿವೆ. ಮೋದಿ ಸರಕಾರ ಬಡವರ ಪರ ನೀತಿಗಳಲ್ಲಿ ನಂಬಿಕೆ ಇಟ್ಟಿದೆ ಮತ್ತು ಅವರಿಗೆ ಸಹಾಯ ಮಾಡಲು ಹಾಗು ಬಡವರನ್ನು ಬೆಂಬಲಿಸಲು ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಮೂರನೇ ಕಂತಿನಲ್ಲಿ ದೇಶದ ಅನ್ನ ದಾತನ ಆಸಕ್ತಿಗಳ ಬಗ್ಗೆ ಕಾಳಜಿ ವಹಿಸಲಾಗಿದೆ ಎಂದು ಹೇಳಿರುವ ಮಾಂಡವೀಯ ರೈತರು ಮತ್ತು ಗದ್ದೆಗಳಲ್ಲಿ ಕೆಲಸ ಮಾಡುತ್ತಿರುವವರನ್ನು ಪರಿಗಣಿಸಲ್ಪಟ್ಟಿದ್ದಾರೆ ಎಂದರು. ಕೃಷಿ, ಮೀನುಗಾರಿಕೆ, ಪಶುಸಂಗೋಪನೆ, ಜೇನು ಕೃಷಿ, ವೈದ್ಯಕೀಯ ಮಹತ್ವದ ಔಷಧೀಯ ಗಿಡಗಳು, ಪೂರೈಕೆ ಸರಪಳಿ ಇತ್ಯಾದಿಗಳಿಗೆ ಇದರಲ್ಲಿ ಆದ್ಯತೆ ನೀಡಲಾಗಿದೆ.

ಬಿಕ್ಕಟ್ಟಿನ ಈ ಸಂದರ್ಭದಲ್ಲಿ ಅದಕ್ಕೆ ಸಕಾಲದಲ್ಲಿ, ಆದ್ಯತೆಯಾಧಾರದಲ್ಲಿ ಮತ್ತು ಸೂಕ್ತ ರೀತಿಯ ಪ್ರತಿಕ್ರಿಯೆಗಾಗಿ ಪ್ರಧಾನ ಮಂತ್ರಿ ಅವರಿಗೆ ಕೃತಜ್ಞತೆ ಸಲ್ಲಿಸಿರುವ ಮಾಂಡವೀಯ  ಪ್ರಧಾನ ಮಂತ್ರಿ ಮೋದಿ ಅವರು ಘೋಷಿಸಿದ ನಮ್ಮ ಜಿ.ಡಿ.ಪಿ.ಯ 10 % ರಷ್ಟಿರುವ ಮೊತ್ತದ ವಿಶೇಷ ಆರ್ಥಿಕ ಪ್ಯಾಕೇಜ್ ಅನುಷ್ಠಾನದಿಂದಾಗಿ ನಾವು ಇನ್ನಷ್ಟು ಬಲಿಷ್ಠರಾಗಲಿದ್ದೇವೆ ಎಂಬ ಆಶಯವನ್ನು ವ್ಯಕ್ತಪಡಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...