NEWSದೇಶ-ವಿದೇಶ

20 ಲಕ್ಷ ಕೋಟಿ ರೂ. ವಿಶೇಷ ಪ್ಯಾಕೇಜ್‌ ಯಾರ‍್ಯಾರಿಗೆ ಹಂಚಿಕೆಯಾಗುತ್ತೆ?

ಇಂದು ಸಂಜೆ ಸುದ್ದಿಗೋಷ್ಠಿನಡೆಸಲಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ನಿನ್ನೆ ರಾತ್ರಿ ದೇಶವನ್ನುದ್ದೇಶಿಸಿ ಮಾತನಾಡುವೆ ವೇಳೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಘೋಷಣೆ ಮಾಡಿರುವ  20 ಲಕ್ಷ ಕೋಟಿ ರೂ. ಪ್ಯಾಕೇಜ್‌ನಲ್ಲಿ ಯಾರುಯಾರಿಗೆ ಸಿಗಲಿದೆ ಎಂಬ ವಿವರವನ್ನು ವಿತ್ತ ಸಚಿವೆ ನಿರ್ಮಲಾ ಸಿತಾರಾಮನ್‌ ಇಂದು ನೀಡಲಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಸುದ್ದಿಗೋಷ್ಠಿ ನಡೆಸಲಿರುವ ಕೇಂದ್ರ ವಿತ್ತ ಸಚಿವರು ಈ ಕುರಿತು ಸಮಗ್ರವಾಗಿ ವಿವರ ನೀಡಲಿದ್ದಾರೆ ಎಂದು ಹೇಳಲಾಗಿದೆ. ಆದರೆ, ಸುದ್ದಿಗೋಷ್ಠಿ ಯನ್ನು ಇಂದು ಸಂಜೆ  ನಡೆಸುವುದಾಗಿ ವಿತ್ತ ಇಲಾಖೆ ತಿಳಿಸಿದೆ.

ಇನ್ನು ವಿತ್ತ ಸಚಿವರು ಗ್ರಾಮೀಣ ಭಾಗಕ್ಕೆ ಹೆಚ್ಚು ಒತ್ತುಕೊಡುವ ನಿಟ್ಟಿನಲ್ಲಿ ಪ್ಯಾಕೇಜ್‌  ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ನರೇಗಾ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮೀಣರಿಗೆ ಹೆಚ್ಚು ಉದ್ಯೋಗ ನೀಡಿ ಅವರನ್ನು ಆರ್ಥಿಕವಾಗಿ ಸಬಲರಾಗಿಸು ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹೆಜ್ಜೆ ಹಾಕಲಿದೆ ಎಂದು ಹೇಳಲಾಗುತ್ತಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಪ್ರಧಾನಿ ಸಕಾಲಿಕ ವಿಶೇಷ ಆರ್ಥಿಕ ಪ್ಯಾಕೇಜ್  ಸ್ವಾಗತಾರ್ಹ
ದೇಶವು ಕೊವಿಡ್-19 ಸೋಂಕಿನ ನಿಯಂತ್ರಣಕ್ಕಾಗಿ ಕೈಕೊಂಡ ಲಾಕಡೌನ ಜನರ ಆರೋಗ್ಯ ರಕ್ಷಾ ಕವಚವಾದಂತೆ ಪ್ರಧಾನಿ ನರೇಂದ್ರ ಮೋದಿಯವರು  ಸರ್ವ ವರ್ಗಗಳ ಆರ್ಥಿಕ  ವೃದ್ದಿಗೆ  ಘೋಷಿಸಿದ 20 ಲಕ್ಷ ಕೋಟಿಯ ವಿಶೇಷ ಪ್ಯಾಕೇಜ್ ಅತ್ಯಂತ ಸಕಾಲಿಕ ಹಾಗೂ ಸ್ವಾಗತಾರ್ಹ ನಿರ್ಧಾರವಾಗಿದೆ ಎಂದು ರಾಜ್ಯದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಸಿ.ಸಿ.ಪಾಟೀಲ್‌ ತಿಳಿಸಿದ್ದಾರೆ.

ಇದೊಂದು ಐತಿಹಾಸಿಕ ನಿರ್ಧಾರವಾಗಲಿದ್ದು, ಭಾರತದ ಆರ್ಥಿಕ ವ್ಯವಸ್ಥೆ ಯ ಮಹತ್ವದ ಅಂಗಗಳಾದ ಸಣ್ಣ ಕೈಗಾರಿಕೆ, ಕೃಷಿ, ತೆರಿಗೆದಾರ ಮಧ್ಯಮ ವರ್ಗದ ಜನರು ತಮ್ಮ ಆರ್ಥಿಕತೆಯನ್ನು ಮತ್ತೆ ಸರಿ ದಾರಿಗೆ ತರಲು ಇದೊಂದು ಅತ್ಯುತ್ತಮ ಹೆಜ್ಜೆಯಾಗಿದೆ. ಪ್ರಧಾನಿಗಳ ಸಬ್ ಕಾ ಸಾಥ್, ಸಬ್ ವಿಕಾಸ್. ಘೋಷಣೆ ಈ ನಿರ್ಧಾರದಲ್ಲಿ ಅನಾವರಣಗೊಂಡಿದೆ ಎಂದು  ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ