NEWSಕೃಷಿದೇಶ-ವಿದೇಶನಮ್ಮರಾಜ್ಯ

ಇನ್ನು ಮುಂದೆ RBI ಅಂಡರ್‌ನಲ್ಲಿ ಸಹಕಾರಿ ಬ್ಯಾಂಕ್‌ಗಳು

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ವಂಚನೆ ಪ್ರಕರಣಗಳು ಜಾಸ್ತಿಯಾಗುತ್ತಿರುವ ಬೆನ್ನಲ್ಲೇ ಎಲ್ಲಾ ಸಹಕಾರಿ ಬ್ಯಾಂಕ್‌ಗಳನ್ನು  ರಿಸರ್ವ್‌ ಬ್ಯಾಂಕ್‌ ಅಡಿಯಲ್ಲಿ ತರಲು ಇಂದು ನಡೆದ ಕೇಂದ್ರ ಸರ್ಕಾರದ ಕ್ಯಾಬಿನೆಟ್‌ ಸಭೆ ಸುಗ್ರಿವಾಜ್ಞೆ ಹೊರಡಿಸಲು ಒಪ್ಪಿಗೆ ನೀಡಿದೆ.

ಸಹಕಾರಿ ಬ್ಯಾಂಕ್‌ಗಳಲ್ಲಿ ಠೇವಣಿ ಇರಿಸಿರುವ ಗ್ರಾಹಕರ ಹಿತ  ಕಾಯಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಇದಕ್ಕೂ ಮುನ್ನ ಬ್ಯಾಂಕಿಂಗ್ ನಿಯಂತ್ರಣ (ತಿದ್ದುಪಡಿ) ಮಸೂದೆ – 2020 ವರ್ಷದ ಬಜೆಟ್‌ ಅಧಿವೇಶನದಲ್ಲಿ ಮಂಡಿಸಲು ಸರ್ಕಾರ ಮುಂದಾಗಿತ್ತು. ಆದರೆ ಕೊರೊನಾದಿಂದಾಗಿ ಅಧಿವೇಶನವನ್ನು ಮುಂದೂಡಿದ್ದರಿಂದ ಮಸೂದೆ ಪಾಸ್‌ ಆಗಿರಲಿಲ್ಲ. ಹೀಗಾಗಿ  ಸುಗ್ರಿವಾಜ್ಞೆ ಹೊರಡಿಸಲು ಒಪ್ಪಿಗೆ ನೀಡಿದೆ ಎಂದು ಸರ್ಕಾರ ತಿಳಿಸಿದೆ.

ಸಂಸದೀಯ ವ್ಯವಹಾರಗಳ ಸಚಿವ ಪ್ರಕಾಶ್‌ ಜಾವಡೇಕರ್‌ ಈ ಸಂಬಂಧ ವಿಡಿಯೋ ಕನ್ಫರೆನ್ಸ್‌ ಮೂಲಕ ಮಾಧ್ಯಮಗಳ ಜತೆ ಮಾತನಾಡಿ, ಇನ್ನು ಮುಂದೆ 1,482 ನಗರ ಸಹಕಾರ ಬ್ಯಾಂಕ್‌ಗಳು ಮತ್ತು 58 ರಾಜ್ಯ ಸಹಕಾರಿ ಬ್ಯಾಂಕ್‌ಗಳು ಆರ್‌ಬಿಐ ನಿಗಾದಲ್ಲಿ ಕೆಲಸ ಮಾಡಲಿದೆ ಎಂದು ತಿಳಿಸಿದರು.

ಕಳೆದ ವರ್ಷ ಪಂಜಾಬ್‌ ಮತ್ತು ಮಹಾರಾಷ್ಟ್ರ ಸಹಕಾರ ಬ್ಯಾಂಕ್‌ಗಳಲ್ಲಿ ನಡೆದ ಅವ್ಯವಹಾರ ಬೆಳಕಿಗೆ ಬಂದ ನಂತರ ಗ್ರಾಹಕರ ಹಿತವನ್ನು ಸರ್ಕಾರ ಕಾಪಾಡಬೇಕು ಎಂಬ ಆಗ್ರಹ ಕೇಳಿಬಂದಿತ್ತು. ಈ ವರ್ಷದ ಬಜೆಟ್‌ನಲ್ಲಿ ಹಣಕಾಸು ಸಚಿವೆ ಆರ್‌ಬಿಐ ಅಡಿಯಲ್ಲಿ ಸಹಕಾರಿ ಬ್ಯಾಂಕ್‌ಗಳು ತರಲಾಗುವುದು ಎಂದು ತಿಳಿಸಿದ್ದರು. ಅದರಂತೆ ಕ್ರಮ ಕೈಗೊಳ್ಳಲಾಗಿದೆ. ಇನ್ನು ರಾಷ್ಟ್ರಪತಿಗಳು ಸುಗ್ರೀವಾಜ್ಞೆಗೆ ಸಹಿ ಹಾಕಿದ ದಿನದಿಂದ ಇದು ಅಧಿಕೃತವಾಗಿ ಜಾರಿಗೆ ಬರಲಿದೆ ಎಂದು ವಿವರಿಸಿದರು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ