NEWSದೇಶ-ವಿದೇಶ

ದೇಶದಲ್ಲಿ ಕೊರೊನಾ ಅಟ್ಟಹಾಸ, 24 ಗಂಟೆಯಲ್ಲಿ 11.5 ಸಾವಿರ ಮಂದಿಯಲ್ಲಿ ಪಾಸಿಟಿವ್‌

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು ಕಳೆದ 24ಗಂಟೆಯಲ್ಲಿ ಮತ್ತೆ ಹೊಸದಾಗಿ 11,502 ಮಂದಿಯಲ್ಲಿ ಸೋಂಕು ಹರಡಿದ್ದು, ಜನತೆ ಆತಂಕ ವ್ಯಕ್ತಪಡಿಸಿದ್ದಾರೆ.

ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3.32 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಮಾಹಿತಿ ನೀಡಿದೆ.

ದೇಶದಲ್ಲಿ ಒಟ್ಟಾರೆಯಾಗಿ 3,32,424 ಮಂದಿಯಲ್ಲಿ ಸೋಂಕು ಕಾಣಸಿಕೊಂಡಿದೆ. ಅದರಲ್ಲಿೊ ಭಾನುವಾರ ಒಂದೇ ದಿನ 325 ಮಂದಿ ಮಹಾಮಾರಿಗೆ ಅಸುನೀಗಿದ್ದು, ಸಾವಿನ ಸಂಖ್ಯೆ ಕೂಡ 9520ಕ್ಕೆ ಏರಿಕೆಯಾಗಿದೆ.

3.32 ಲಕ್ಷ ಮಂದಿ ಸೋಂಕಿತರ ಪೈಕಿ 1,69,798 ಮಂದಿ ಗುಣಮುಖರಾಗಿದ್ದು, ಪ್ಇನ್ನೂ 1,53,106 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.

ದೇಶದಲ್ಲಿ ಪತ್ತೆಯಾಗಿರುವ ಒಟ್ಟಾರೆ ಸೋಂಕಿತರ ಪೈಕಿ ಮಹಾರಾಷ್ಟ್ರ ರಾಜ್ಯದ ಪಾಲು ಹೆಚ್ಚಾಗಿದೆ. ಭಾನುವಾರ ಈ ರಾಜ್ಯದಲ್ಲಿ 3,390 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ಇದರೊಂದಿಗೆ ಆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,07,958ಕ್ಕೆ ಏರಿಕೆ ಆಗಿದೆ.

ನ್ಯೂಡೆಲ್ಲಿ 2,224, ತಮಿಳುನಾಡಿನಲ್ಲಿ 1,947, ಗುಜರಾತ್‌ನಲ್ಲಿ 511, ಪಶ್ಚಿಮ ಬಂಗಾಳ ರಾಜ್ಯದಲ್ಲಿ 389, ಕರ್ನಾಟಕದಲ್ಲಿ 176 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್