NEWSಸಿನಿಪಥ

“ಓಂ ಪ್ರೇಮ”  ಚಿತ್ರದೊಡನೆ  ಸ್ಯಾಂಡಲ್‌ವುಡ್‌ನಲ್ಲಿ ಮತ್ತೆ ಮಿಂಚಲಿದ್ದಾರೆ ಹರ್ಷಿಕಾ ಪೂಣಚ್ಚ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಹರ್ಷಿಕಾ ಪೂಣಚ್ಚ ಮತ್ತೆ ಸ್ಯಾಂಡಲ್‌ವುಡ್‌ನಲ್ಲಿ ಮಿಂಚಲು ತಯಾರಾಗಿದ್ದು  ಅಡವಿಬಾವಿ ಶರಣ್ ನಿರ್ದೇಶನದ “ಓಂ ಪ್ರೇಮ”  ಚಿತ್ರದೊಡನೆ ರೀ ಎಂಟ್ರಿ ಕೊಡುತ್ತಿದ್ದಾರೆ.

ಈ ಚಿತ್ರದಲ್ಲಿ ಮಹಿಳಾ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ  ಹರ್ಷಿಕಾ ಈ ಹಿಂದೆ “ಚಿಟ್ಟೆ” ಚಿತ್ರದಲ್ಲಿ ಪೂರ್ಣ ಪ್ರಮಾಣದಲ್ಲಿ ನಾಯಕಿಯಾಗಿ ನಟ್ಟಿಸಿದರು. ಅಲ್ಲದೆ  2019 ರಲ್ಲಿ ಬಿಡುಗಡೆಯಾದ ಸುನೀಲ್ ಕುಮಾರ್ ದೇಸಾಯಿ ನಿರ್ದೇಶನದ “ಉದ್ಘರ್ಷ”ದ ಭಾಗವಾಗಿದ್ದರು. ಆರ್.ಆರ್. ಖುಷಿ ಎಂಟರ್‌ಟೈನ್‌ಮೆಂಟ್ ಪ್ರಸ್ತುತಪಡಿಸುತ್ತಿರುವ ರಾಮ್ ಪ್ರೀತ್ ನಿರ್ಮಿಸಿದ ಈ ಚಿತ್ರದಲ್ಲಿ ಕ್ವಾಟ್ಲ್ ಖ್ಯಾತಿಯ ಪಾರ್ಥ ಕೂಡ ನಟಿಸಿದ್ದಾರೆ.

“ಓಂ ಪ್ರೇಮ” ಚಿತ್ರಕ್ಕೆ ಗೌಸ್ ಪೀರ್ ಸಂಭಾಷಣೆ, ಜಾಸ್ಸಿ ಗಿಫ್ಟ್ ಸಂಗೀತವಿದೆ. ಛಾಯಾಗ್ರಾಹಕರಾಗಿ ನಂದ ಕಿಶೋರ್ ಹಾಗೂ  ಕೆಜಿಎಫ್ ಖ್ಯಾತಿಯ ಶ್ರೀಕಾಂತ್ ಸಂಕಲನ ಈ ಚಿತ್ರಕ್ಕಿದೆ. ಡ್ಯಾನಿ ಕುಟ್ಟಪ್ಪ ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇನ್ನು ಶೇ. 40 ರಷ್ಟು ಚಿತ್ರೀಕರಣ ಪೂರ್ಣಗೊಳಿಸಿರುವ ತಂಡ ಹರ್ಷಿಕಾ ಪೂಣಚ್ಚ ಅವರೊಂದಿಗೆ ಮಾತುಕತೆ ನಡೆಸಿದ್ದು, ಲಾಕ್‌ಡೌನ್ ಅವಧಿಯಲ್ಲಿ ಒಪ್ಪಂದವನ್ನು ಅಂತಿಮಗೊಳಿಸಿಕೊಂಡಿದೆ. .

“ನಾವು ಈಗ ಶೂಟಿಂಗ್ ಪುನಾರಂಭಿಸಲು ತಯಾರಾಗುತ್ತಿದ್ದೇವೆ ಈ ಶೆಡ್ಯೂಲ್ ಹೆಚ್ಚಾಗಿ ಹರ್ಷಿಕಾ ಅವರ ಪಾತ್ರದ ಕುರಿತಾಗಿರಲಿದೆ ಎಂದು ನಿರ್ದೇಶಕ ಹೇಳುತ್ತಿದ್ದಾರೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್