NEWSನಮ್ಮಜಿಲ್ಲೆರಾಜಕೀಯ

ಜಿಟಿಡಿಗೆ ಕೇವಲ ವಿಸಿಟಿಂಗ್ ಕಾರ್ಡಿಗಾಗಿ ಅವಕಾಶ ಕೊಡಲಾ: ಎಚ್‌ಡಿಕೆ ಪ್ರಶ್ನೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ರಾಮನಗರ: ಮಾಜಿ ಸಚಿವ ಜಿ.ಟಿ. ದೇವೇಗೌಡರಿಗೆ ಪಕ್ಷ ಸಂಘಟನೆ ಬಗ್ಗೆ ಆಸಕ್ತಿ ಇಲ್ಲ. ಕೇವಲ ವಿಸಿಟಿಂಗ್ ಕಾರ್ಡಿಗಾಗಿ ನಾನು ಅವಕಾಶ ಕೊಡಲಾ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಜೆಡಿಎಸ್‌ ಕೋರ್ ಕಮಿಟಿಯಲ್ಲಿ ಜಿ.ಟಿ. ದೇವೇಗೌಡ ಅವರ ಹೆಸರು ಕೈಬಿಟ್ಟಿರುವ ಕುರಿತು ಚನ್ನಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ನನಗೆ ನನ್ನ ಕ್ಷೇತ್ರ ಮುಖ್ಯ. ಪಕ್ಷ ಸಂಘಟನೆಗೆ ಸಮಯ ಕೊಡಲು ಆಗದು ಎಂದು ಅವರೇ ಹೇಳಿದ್ದಾರೆ. ಈಗ ಅವರಿಗೆ ಕ್ಷೇತ್ರದ ಬಗ್ಗೆ ಗಮನ ಬಂದಿದೆ. ಮುಂದಿನ ಚುನಾವಣೆ ಹೊತ್ತಿಗೆ ಯಾರ್ಯಾರು ಎಲ್ಲೆಲ್ಲಿ ಇರುತ್ತಾರೋ ಗೊತ್ತಿಲ್ಲ. ಅವರು ಮಾಧ್ಯಮಗಳ ಮೂಲಕ ನನಗೆ ಸಂದೇಶ ಕೊಡುವುದು ಬೇಡ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅವರಿಗೆ ಸಮಸ್ಯೆ ಆಗಿದ್ದರೆ ಜೆ.ಪಿ. ಭವನಕ್ಕೆ ಬಂದು ಎಚ್‌.ಡಿ. ದೇವೇಗೌಡರ ಜತೆ ಚರ್ಚಿಸಲಿ ಅದನ್ನು ಬಿಟ್ಟು ಇಲ್ಲಸಲ್ಲದ ಹೇಳಿಕೆ ನೀಡುವುದು ಬೇಡ ಎಂದು ಸಲಹೆ ನೀಡಿದರು.

ಸಿಪಿವೈಗೆ ಟಾಂಗ್‌: ಈಗ ಮಂತ್ರಿಯಾದರು ಇನ್ನೂ ಪೊಗರ್‌ದಸ್ತಾಗಿ ಕೆಲಸ ಮಾಡಲು ಅನುಕೂಲ ಆಯಿತು ಎಂದು ಈ ಹಿಂದೆ ಲೆಟರ್‌ಹೆಡ್ ದುರ್ಬಳಕೆ ವಿಚಾರವಾಗಿ ಸಚಿವ ಸಿ.ಪಿ. ಯೋಗೇಶ್ವರ್‌ಗೆ ಟಾಂಗ್‌ ನೀಡಿದ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ಮಂತ್ರಿಗೆ ಏನು ಕೊಂಬು ಇರುತ್ತ? ನಾನು ಬಹಳಷ್ಟು ಮಂತ್ರಿಗಳನ್ನು ನೋಡಿದ್ದೇನೆ. ಚನ್ನಪಟ್ಟಣದಲ್ಲಿ ನನ್ನನ್ನು ಯಾರೂ ಏನು ಮಾಡಲು ಸಾಧ್ಯ ಇಲ್ಲ. ಈಗಲಾದರೂ ಅವರು ಜನರ ಪರವಾಗಿ ಕೆಲಸ ಮಾಡಲಿ ಎಂದ ಅವರು ಮೊದಲು ಅವರ ಎಲ್ಲ ಚಟುವಟಿಕೆ ತಾಲೂಕು ಮಟ್ಟದಲ್ಲಿ ನಡೆಯುತಿತ್ತು. ಈಗ ಹಣ ಮಾಡಲು ರಾಜ್ಯ ಮಟ್ಟದಲ್ಲಿ ಅವಕಾಶ ಕೊಟ್ಟಿದ್ದಾರೆ ಎಂದರು.
ನೀಡಿದರು.

ಕುಮಾರಸ್ವಾಮಿ ನನ್ನ ಸ್ನೇಹಿತರು ಎಂಬ ಯೋಗೇಶ್ವರ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಎಚ್‌ಡಿಕೆ ಯೋಗೇಶ್ವರ್‌ ಸಹ ವೈಯಕ್ತಿಕವಾಗಿ ನನ್ನ ಸ್ನೇಹಿತರು. ಯಡಿಯೂರಪ್ಪ ಸಹ ನನ್ನ ಸ್ನೇಹಿತರೇ. ಆದರೆ ಕಾರ್ಯಕರ್ತರ ಕುತ್ತಿಗೆ ಕೊಯ್ದು ಸ್ನೇಹ ಉಳಿಸಿಕೊಳ್ಳಲು ಆಗದು ಎಂದು ಕುಮಾರಸ್ವಾಮಿ ಮಾರ್ಮಿಕವಾಗಿ ಉತ್ತರಿಸಿದರು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ