NEWSದೇಶ-ವಿದೇಶ

ಕೊರೊನಾ ನಿಯಂತ್ರಣ ಕ್ರಮ ಕುರಿತು ಪ್ರಧಾನಿ ಮೋದಿ- ಡೆನ್ಮಾರ್ಕ್ ಪ್ರಧಾನಿ  ನಡುವೆ ಚರ್ಚೆ

ವಿಜಯಪಥ ಸಮಗ್ರ ಸುದ್ದಿ

ಡೆನ್ಮಾರ್ಕ್:  ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಿಸುವ ಕುರಿತು  ಡೆನ್ಮಾರ್ಕ್‌ನ ಪ್ರಧಾನ ಮಂತ್ರಿ  ಮೆಟ್ಟೆ ಫ್ರೆಡೆರಿಕ್ಸೆನ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಸಂಭಾಷಣೆ ನಡೆಸಿದರು.

ಕೋವಿಡ್-19 ಸಾಂಕ್ರಾಮಿಕ ರೋಗ ನಿಭಾಯಿಸಲು ಉಭಯ ದೇಶಗಳಲ್ಲಿ ಕೈಗೊಂಡ ಕ್ರಮಗಳನ್ನು ಉಭಯ ನಾಯಕರು ಹೋಲಿಸಿ ಚರ್ಚಿಸಿದರು.  ಸೋಂಕುಗಳ ಹೆಚ್ಚಳಕ್ಕೆ ಕಾರಣವಾಗದೆ ಲಾಕ್‌ಡೌನ್ ನಿರ್ಬಂಧಗಳನ್ನು ತೆಗೆದುಹಾಕಿದ ಡೆನ್ಮಾರ್ಕ್‌ನ ಯಶಸ್ಸನ್ನು ಪ್ರಧಾನಿ ಮೋದಿ ಶ್ಲಾಘಿಸಿದರು. ಪರಸ್ಪರರ ಅನುಭವದಿಂದ ಕಲಿಯಲು ಭಾರತೀಯ ಮತ್ತು ಡ್ಯಾನಿಶ್ ತಜ್ಞರು ಸಂಪರ್ಕದಲ್ಲಿರುವ ಬಗ್ಗೆ ಸಮ್ಮತಿಸಲಾಯಿತು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಭಾರತ-ಡೆನ್ಮಾರ್ಕ್ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಬಯಕೆಯನ್ನು ಉಭಯ ನಾಯಕರು ಪುನರುಚ್ಚರಿಸಿದರು ಮತ್ತು ಕೋವಿಡ್ ನಂತರದ ಜಗತ್ತಿನಲ್ಲಿ ಎರಡೂ ದೇಶಗಳು ಒಟ್ಟಾಗಿ ಕೆಲಸ ಮಾಡುವ  ಬಗ್ಗೆಯೂ ಚರ್ಚಿಸಿದರು.

12 ಮೇ 2020 ರಂದು ಉಭಯ ದೇಶಗಳ ವಿದೇಶಾಂಗ ಸಚಿವರ ನಡುವಿನ ಜಂಟಿ ಆಯೋಗದ ಸಭೆಯ ಯಶಸ್ವಿ ಆಯೋಜನೆಯನ್ನು ಅವರು ಸ್ವಾಗತಿಸಿದರು.

ಆರೋಗ್ಯ ಸಂಶೋಧನೆ, ಸ್ವಚ್ಛ ಮತ್ತು ಪರಿಸರ ಸ್ನೇಹಿ ಇಂಧನ, ಹವಾಮಾನ ಬದಲಾವಣೆಯ ಸ್ಥಿತಿಸ್ಥಾಪಕತ್ವ ಮುಂತಾದ ಕ್ಷೇತ್ರಗಳು ಪರಸ್ಪರ ಲಾಭದಾಯಕ ಸಹಯೋಗಕ್ಕೆ ಅಪಾರ ಅವಕಾಶವನ್ನು ನೀಡುತ್ತವೆ ಎಂದು ಒಪ್ಪಿಕೊಂಡ ನಾಯಕರು, ಭಾರತ ಮತ್ತು ಡೆನ್ಮಾರ್ಕ್ ನಡುವೆ ದೃಢವಾದ ಪರಿಸರ ಕಾರ್ಯತಂತ್ರದ ಸಹಭಾಗಿತ್ವವನ್ನು ಸೃಷ್ಟಿಸುವ ಗುರಿಯತ್ತ ಕೆಲಸ ಮಾಡಲು ಉಭಯ ನಾಯಕರು ಸಮ್ಮತಿ ಸೂಚಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ